Advertisement

ಕೆಂಡಸಂಪಿಗೆ

ಕನಸಾಗೇ ಉಳಿದ ಕನಸು: ಫಾತಿಮಾ ರಲಿಯಾ ಅನುಭವ ಕಥನದ ಕೆಲವು ಪುಟಗಳು

ನನ್ನ ಮಾತಲ್ಲಿ ಆತ್ಮವಿಶ್ವಾಸ, ಸತ್ಯ ಇಲ್ಲ ಅನ್ನುವುದು ತುಂಬಾ ಸ್ಪಷ್ಟವಾಗಿ ನನಗೇ ಗೊತ್ತಾಗುತ್ತಿತ್ತು, ಬಹುಶಃ ಅಮ್ಮನಿಗೂ ಗೊತ್ತಾಗಿದೆ. ನಾನು ಮಾತು ಮುಂದುವರೆಸಲಿಲ್ಲ, ಅಮ್ಮನೂ ಮುಂದುವರೆಸಲಿಲ್ಲ. ಇಬ್ಬರ ಮನದೊಳಗೂ ದುಃಖವೊಂದು ಹೊಯ್ದಾಡುತ್ತಿತ್ತು.‌ ಅಲ್ಲಿ ನೆಲೆ ನಿಂತಿದ್ದ ಮೌನ ನಮ್ಮಬ್ಬರಲ್ಲೂ ಉಸಿರುಗಟ್ಟಿಸುವ ಭಾವ ಹುಟ್ಟಿಸುತ್ತಿತ್ತು. ಅಮ್ಮನ ಕಣ್ಣು ತುಂಬಿಕೊಳ್ಳುತ್ತಿತ್ತು. ನಾನು ತೀರಾ ನಿರ್ಭಾವುಕಳಂತೆ ಅಲ್ಲಿಂದ ಎದ್ದು ಹೋದೆ, ನನಗೆ ಹಾಗೆ ಹೋಗದೆ ಬೇರೆ ದಾರಿಯೇ ಇರಲಿಲ್ಲ. ಯಾಕೆಂದರೆ ಇನ್ನೆರಡೇ ಎರಡು ನಿಮಿಷ ನಾನಲ್ಲಿ ನಿಂತಿದ್ದರೂ ಅಳು ಭೋರ್ಗರೆಯುತ್ತಿತ್ತು.
ಫಾತಿಮಾ ರಲಿಯಾ ಅನುಭವ ಕಥನ “ಕೀಮೋ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

“ಬಾಂಬೆ ಬದುಕೆಂಬ
ರಣಭೀಕರ ಮಳೆಗೆ,
ನಾಳೆ ನಮ್ಮದೆನ್ನುವ
ಕನಸೇ ಛತ್ರಿ.
ಉತ್ತರವಿಲ್ಲದ ಪ್ರಶ್ನೆ
ಮರೆತು ನಿದ್ರೆ
ಬಂದರೆ ಸಾಕು,
ಈ ರಾತ್ರಿ!” -ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

Read More

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ