Advertisement

ರೂಪಶ್ರೀ ಕಲ್ಲಿಗನೂರ್

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ

ಈ ಆಟೋ ಹೀಗೇ ಓಡುತ್ತಲೇ ಇರಲಿ, ಮನೆ ಬರುವುದೇ ಬೇಡ ಎಂದು ಪ್ರಾರ್ಥಿಸುತ್ತಾ ಕುಳಿತವನಿಗೆ ಅಲ್ಲೂ ನಿರಾಶೆಯೇ ಕಾದಿತ್ತು. ಮೀಟರ್ ನೋಡದೆ ನೂರರ ನೋಟು ಆಟೋದವನ ಕೈಗೆ ತುರುಕಿದವನಿಗೆ ಮನದ ಮೂಲೆಯಲ್ಲೆಲ್ಲೋ ಆಸೆಯ ಬೆಳಕು. ಮಗಳೀಗಾಗಲೇ ಬಂದಿರುತ್ತಾಳೆ. ತಾನು ಅವಳನ್ನಪ್ಪಿ ತನ್ನ ಪ್ರೀತಿಯ ಋಣ ತೀರಿಸಲು ಕೇಳಿಕೊಳ್ಳಬೇಕು. ಸರಿಯಾಗಿ ಅರ್ಥೈಸಿದರೆ ಖಂಡಿತಾ ಕೇಳುತ್ತಾಳೆ ಎಷ್ಟೆಂದರೂ ನನ್ನ ಪ್ರೀತಿಯ ಮಗಳಲ್ಲವೇ ನೋಡಿಯೇ ಬಿಡುತ್ತೇನೆ… ನನ್ನೆಲ್ಲಾ ವಾತ್ಸಲ್ಯ, ಪ್ರೀತಿಯನ್ನು ಪಣಕ್ಕಿಟ್ಟರೆ ಸೋಲುವವಳು ಅವಳೇ ಎಂದುಕೊಂಡೇ ಮನೆಯೊಳಗೆ ಬಂದ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಶುಭಾ ಎ. ಆರ್. ಕತೆ “ಲಿರ್”‌

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ವಿಶಾಲ್ ಮ್ಯಾಸರ ಬರೆದ ಈ ದಿನದ ಕವಿತೆ

“ಮಕ್ಕಳ ಕಿರುಲು

ಶಿವನೇ
ಇಲ್ಲಿ ತಾಯಿ ಶವದ ತೊಡೆಯಮೇಲೆ
ಮಗುವಿನ ಚಿರನಿದ್ರೆಯ ಗೊಂಬೆ

ಇನ್ನೊಂದು ಮಳೆ
ಕೆಂಡದ ಮಳೆ
ಇಲ್ಲಿ ದಮ್ಮಯ್ಯ ಬೇಡ”-ವಿಶಾಲ್ ಮ್ಯಾಸರ ಬರೆದ ಈ ದಿನದ ಕವಿತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹೆಚ್. ಆರ್. ಸುಜಾತಾ ಕತೆ

“ಹೋಗಿ ಬಂದು ಮೂಗಿ ತಕ ಹೋದ” ಅಂತ ಮೊದ್ಲೇ ಗಾದೆ ಮಾತಿಲ್ವಾ? ಹಂಗಾಯ್ತು ಇದೂವೆ. ಇವಳಿಗೆ ಬಾಯಿಲ್ಲ. ಅವನಿಗೆ ನೀತಿನೇಮ ಇಲ್ಲ. ಯಾರ್ಗಾರ ಹೇಳತಳೆ ಅನ್ನೋ ಭಯವಂತೂ ಮೊದ್ಲೇ ಇಲ್ಲ. ಇಬ್ರಗೂ ವಯಸ್ಸಿನ ಚಪಲ. ತೀರಸಕಂಡವರೆ. ಆದ್ರೆ ಆ ನನ್ ಮಗಂಗೇನು ಕಷ್ಟ? ಗಂಡಸು. ಮದ್ವೆ ಮಾಡ್ಕತನೆ ಇಲ್ಲಾಂದ್ರೆ….. ಇನ್ನೊಭ್ಳು ತಕೆ ಹೋಯತನೆ. ಇವಳಿಗೆ ತಾನೆ ಇರದು ಈಗ ಹಬ್ಬ. ಹರುಷದ ಕೂಳಿಗೆ ವರುಷದ ಕೂಳು ಕಳಕಂಡಂಗ ಆಯ್ತಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಹೆಚ್. ಆರ್. ಸುಜಾತಾ ಕತೆ

Read More

ಭಾವ ಬಿಡುಗಡೆಯ ನಿರುಮ್ಮಳ ಕಥೆಗಳು: ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನಕ್ಕೆ ಅಬ್ದುಲ್ ರಶೀದ್ ಮುನ್ನುಡಿ

ಪೂರ್ಣಿಮಾ ಅವರದು ಅವರೇ ತಮ್ಮ ಮಾತಿನಲ್ಲಿ ಹೇಳುವ ಹಾಗೆ ‘ಕತೆಗಾತಿಯ ವೇಷ’. ಕಥೆಯ ನಿರುದ್ವಿಗ್ನತೆ ಮತ್ತು ನೆಮ್ಮದಿಯ ದೃಷ್ಟಿಯಿಂದ ಈ ವೇಷ ಅಗತ್ಯ ಎಂದು ನನಗೆ ಇಷ್ಟೆಲ್ಲ ಬರೆದಾದ ಮೇಲೆ ಈಗ ಅನ್ನಿಸುತ್ತದೆ. ಬರೆಯುವವರು ತಮ್ಮದೇ ಕಥೆಯಲ್ಲಿ ಕಳೆದುಹೋಗುವ ಅಪಾಯದಿಂದ ಬಿಡುಗಡೆಗೊಳ್ಳುವ ದಾರಿ ಇದು. ಇದು ಬಹು ದೊಡ್ಡ ಸವಾಲಿನ ದಾರಿಯೂ ಹೌದು. ಬರೆಯುವವರಿಗೆ ಈ ದಾರಿಯಲ್ಲಿ ಕ್ರಮಿಸಲು ಬಹಳ ಲೋಕಜ್ಞಾನ ಇರಬೇಕಾಗುತ್ತದೆ. ಸಕಲ ಜೀವ ವ್ಯಾಪಾರಗಳ ಕುರಿತು ಒಂದು ಸಮತೂಕದ ನಿರ್ಲಿಪ್ತತೆ ಬೇಕಾಗುತ್ತದೆ.
ಪೂರ್ಣಿಮಾ ಭಟ್ಟ ಸಣ್ಣಕೇರಿ ಕಥಾಸಂಕಲನ “ಕತೆ ಜಾರಿಯಲ್ಲಿರಲಿ” ಕೃತಿಗೆ ಅಬ್ದುಲ್‌ ರಶೀದ್‌ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ