Advertisement

ಕೆಂಡಸಂಪಿಗೆ

ಉಪ್ಪನ್ನು ಹೀರಿಕೊಂಡ ನೀರಿನಂಥ ಕತೆಗಳು: ಮುನವ್ವರ್ ಕಥಾಸಂಕಲನಕ್ಕೆ ವಿನಾಯಕ ಅರಳಸುರಳಿ ಮುನ್ನುಡಿ

ಎಲ್ಲರೂ ಅರ್ಥವಾದಂತೆ ನಟಿಸುವ ಆದರೆ ನಿಜದಲ್ಲಿ ಸಂಕೀರ್ಣ ಸಮೀಕರಣದಂತಿರುವ ಬಡತನವೆನ್ನುವ ಬಾಳೆ ದಿಂಡಿನ ತಿರುಳನ್ನು ಪದರ ಪದರವಾಗಿ ಬಿಚ್ಚಿಟ್ಟು ‘ಇದು ಜಗತ್ತು, ಇದೇ ಜಗತ್ತು’ ಎಂದು ದಿಟ್ಟವಾಗಿ ಹೇಳುವ ಗಟ್ಟಿತನ ಇಲ್ಲಿನ ಹಲವು ಕಥೆಗಳಲ್ಲಿದೆ.‌ ಬಲ್ಬಿಗೆ ಬೆಳಕನ್ನು ತಲುಪಿಸುವ ತಂತಿಯ ವಿದ್ಯುತ್ತಿನಲ್ಲೇ ಪ್ರಾಣ ತೆಗೆಯುವ ಕರೆಂಟೂ ಇದೆ. ದುರಂತವೆಂದರೆ ನಮ್ಮ ಸಮಾಜದ ಕತ್ತಲನ್ನು ಹೋಗಲಾಡಿಸಲು ಕಂಡು ಹಿಡಿದ ನಾನಾ ಕರೆಂಟುಗಳು ಇಲ್ಲಿಯ ತನಕ ಬೆಳಕು ಕೊಟ್ಟಿದ್ದಕ್ಕಿಂತ ಪ್ರಾಣ ತೆಗೆದಿದ್ದೇ ಹೆಚ್ಚು ಎನ್ನುವ ಸೂಕ್ಷ್ಮವನ್ನು ಉಪ್ಪನ್ನು ಹೀರಿಕೊಂಡ ನೀರಿನಂತೆ ಇಲ್ಲಿನ ಕಥೆಗಳು ಕರಗಿಸಿಕೊಂಡಿವೆ.
ಮುನವ್ವರ್ ಜೋಗಿಬೆಟ್ಟು ಹೊಸ ಕಥಾಸಂಕಲನ “ಟಚ್‌ ಮೀ ನಾಟ್”ಕ್ಕೆ ವಿನಾಯಕ ಅರಳಸುರಳಿ ಮುನ್ನುಡಿ

Read More

ನಾಗರಾಜ್ ಕಾಂಬಳೆ ಬರೆದ ಈ ದಿನದ ಕವಿತೆ

“ಕಚ್ಚದೆಯೇ ವಿಷ ಉಗುಳಿದೆ
ಬುಸುಗುಡುವ ಹಾವೊಂದು
ಗಾಯವಾಗದೇ ವಿಷವೇರಿದೆ
ನೇರವಾಗಿ ಎದೆಗೆ

ಪ್ರೇಮ ಮತ್ತು ವಾತ್ಸಲ್ಯದ ಮರಕ್ಕೆ
ನೇಣು ಹಾಕಿಕೊಳ್ಳುವ ಬಯಕೆಗೆ
ಯಾರು ಹೊಣೆ?
ಈ ಅನಿರೀಕ್ಷಿತ ಸಾವಿಗೆ
ಹೃದಯವಿಲ್ಲ, ಕನಿಕರವಿಲ್ಲ”- ನಾಗರಾಜ್ ಕಾಂಬಳೆ ಬರೆದ ಈ ದಿನದ ಕವಿತೆ

Read More

ಕುಸುಮಾ ಆಯರಹಳ್ಳಿ ಬರೆದ ಈ ಭಾನುವಾರದ ಕತೆ

ಮಹೇಶ ಅಷ್ಟು ಸಲ ವಿಧಾನಸೌಧಕ್ಕೆ ಹೋಗಿಬಂದು ಕೆಲಸ ಆಗಲಿಲ್ಲ ಅಂತ ಬೇಸರ ಮಾಡಿಕೊಂಡು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವಾಗೆಲ್ಲ ನನಗೆ ಕೋಪ ಬರ್ತಿತ್ತು ಮೇಷ್ಟ್ರೇ. ಪ್ರಜೆಗಳನ್ನ ಬಾಗ್ಲಲ್ಲಿ ನಿಲ್ಸಿ ಜಾತಿ ಯಾವುದಯ್ಯಾ ಒಳಗೋಗಕೆ? ಅಂತ ಕೇಳಕಾ ಆ ಪುಣ್ಯಾತ್ಮರು ದೇಶಾ ಕಟ್ಟಿದ್ದು? ಅಂತ ಕೋಪ ಉಕ್ಕುಕ್ಕಿ ಬರದು. ರಾತ್ರಿ ನಿದ್ದೆ ಬರ್ತಿರಲಿಲ್ಲ. ಆಚೆ ಭಾಷಣದಲ್ಲಿ ಹೇಳೋದು ಒಂದು. ಒಳಗ್ ಮಾಡದೊಂದು. ಇದಕ್ಕೇ ಏನಯ್ಯಾ ನಿಮಗೆ ಸಂವಿಧಾನ ಬರ್ಕೊಟ್ಟಿದ್ದು? ನೊಂದವರೇ ನೋಯಿಸಿದರೆ ಅದಕ್ಕಿಂತಾ ಕೇಡುಂಟಾ ಲೋಕದಲ್ಲಿ?
ಕುಸುಮಾ ಆಯರಹಳ್ಳಿ ಬರೆದ “ಕಪಿಲೆ ಕಂಡ ಕತೆಗಳು” ಕಥಾಸಂಕಲನ ಇಂದು ಬಿಡುಗಡೆಯಾಗಲಿದ್ದು ಈ ಕೃತಿಯ “ದೈತ್ಯ” ಕತೆ ನಿಮ್ಮ ಓದಿಗೆ

Read More

ಶರೀಫ್ ಕಾಡುಮಠ ಬರೆದ ಮೂರು ಕವಿತೆಗಳು

“ಗಾಝಾದ
ಗಾಯಗೊಂಡ ಮಗುವೊಂದು
ಕಿಟಕಿ ಗಾಜಿನ ಮುಂದೆ ನಿಂತು
ನೋಡುತ್ತಲೇ ಇತ್ತು
ದುಃಖದಿಂದ ಯೋಚಿಸುತ್ತ
‘ಬೆಂಕಿ ಆರಿಸಲಾದರೂ
ನಮ್ಮ ಬಳಿ ನೀರಿರಬೇಕಿತ್ತು
ಕನಿಷ್ಟ
ಕಣ್ಣೀರಾದರೂ ಬತ್ತದೆ
ಚೂರು ಉಳಿದಿರಬೇಕಿತ್ತು”-ಶರೀಫ್ ಕಾಡುಮಠ ಬರೆದ ಮೂರು ಕವಿತೆಗಳು

Read More

ದಾಕ್ಷಾಯಣಿ ಮಸೂತಿ ಬರೆದ ಈ ದಿನದ ಕವಿತೆ

“ನದಿ, ನೀರು, ಗಾಳಿ
ಸೂರ್ಯ, ಚಂದ್ರ
ಮಣ್ಣು ಮರಗಳಲ್ಲಿ
ದೇವರನ್ನು ಕಾಣುವ
ನಾವು
ನಮ್ಮಂತೆ‌ ಇರುವ
ಮನುಷ್ಯರನ್ನು
ಮನುಷ್ಯರಂತೆ ಕಾಣಲು
ಸೋತಿದ್ದೇವೆ”-ದಾಕ್ಷಾಯಣಿ ಮಸೂತಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ