Advertisement

ರೂಪಶ್ರೀ ಕಲ್ಲಿಗನೂರ್

ಭೂಮಾನುಭೂತಿಯ ಬರಹಗಳು: ನಾರಾಯಣ ಯಾಜಿ ಕೃತಿಯ ಕುರಿತ ಹರೀಶ್‌ ಕೇರ ಮುನ್ನುಡಿ

ಈ ಬರಹಗಳು ಆಕಾಶ ಹಾಗೂ ಭೂಮಿಯ ನಡುವೆ ಸಲೀಸಾಗಿ ಯಾನ ಕೈಗೊಳ್ಳುತ್ತವೆ. ಪುರಾಣೇತಿಹಾಸಗಳ ಕ್ಲಾಸಿಕ್‌ ಸಾಹಿತ್ಯಗಳ ಆಕಾಶ ತತ್ವಗಳ ಜೊತೆಜೊತೆಗೇ ನಮ್ಮಂಥ ಸಾಮಾನ್ಯ ಮಾನವರ ನೆಲಕ್ಕಂಟಿದ ಬದುಕಿನ ಭೂಮಿ ತತ್ವವೂ ಹದವಾಗಿ ಬೆರೆತುಕೊಂಡಿವೆ. ಮಹಾತ್ಮ ಗಾಂಧಿ, ಲಾಲ್‌ ಬಹದ್ದೂರ್‌ ಶಾಸ್ತ್ರಿ ಹಾಗೂ ಸ್ವಾತಂತ್ರ್ಯ ಹೋರಾಟದ ಬಗ್ಗೆ ಇರುವ ಲೇಖನಗಳು ಈ ಕೃತಿಯ ಪ್ರಮುಖ ಲೇಖನಗಳಲ್ಲಿ ಕೆಲವು. ಇವು ನಮ್ಮ ಐತಿಹಾಸಿಕ ನೆಲೆಗಟ್ಟಿನಲ್ಲಿ ಈ ಅದ್ವಿತೀಯ ಪುರುಷರ ಆದರ್ಶಗಳು ಕಾಣ್ಕೆಗಳು ಹೇಗಿದ್ದವು ಎಂಬುದರ ನಿಡುನೋಟವನ್ನು ನೀಡುತ್ತವೆ.
ನಾರಾಯಣ ಯಾಜಿ ಹೊಸ ಕೃತಿ “ಧವಳ ಧಾರಿಣಿ”ಗೆ ಹರೀಶ್‌ ಕೇರ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ

ವಿಶ್ವನಾಥನಿಗೆ ಸಹನೆಯ ಕಟ್ಟೆಯೊಡಯತೊಡಗಿತ್ತು. ‘ನೀವು ನಮ್ಮನ್ನು ಕರೆಸಿದ್ದು ನಿಮ್ಮ ಫೋನ್ ನಂಬರಿಗೆ ಲಾಟರಿ ಹತ್ತಿದೆ, ಬಹುಮಾನ ಗಳಿಸಿದ್ದೀರಿ ಬನ್ನಿ ಅಂತ, ಸುಮ್ಮನೇ ನಮ್ಮ ಬಹುಮಾನ ನಮಗೆ ಕೊಟ್ಟು ನಂತರ ಮಾತಾಡಿ, ನಾವು ನಮ್ಮ ಕೆಲಸ ಬೊಗಸೆ ಎಲ್ಲ ಬಿಟ್ಟು ಇಲ್ಲಿ ಬಂದಿದ್ದೇವೆ, ಕಂಪ್ಲೆಂಟು ಕೊಡ್ತೇನೆ ಕಂಪ್ಲೆಂಟು’ ಅಂತ ಎದ್ದು ನಿಂತು ದೊಡ್ಡ ದನಿಯಲ್ಲಿ ಕೂಗಾಡತೊಡಗಿದ್ದೇ, ಅಲ್ಲಿಯ ವ್ಯವಸ್ಥಾಪಕರು ಕಸಿವಿಸಿಗೊಂಡರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನಂದಾ ಪ್ರಕಾಶ ಕಡಮೆ ಕತೆ “ನೀರ ಮಣಿಗಳ ಮಾಲೆ”

Read More

ಹಸಿರು ಪುಕ್ಕ: ಡಾ. ಅಶ್ವಥ ಕೆ.ಎನ್.‌ ಪುಸ್ತಕದ ಒಂದು ಬರಹ

ಪರದೆಯ ಹಿಂದೆ ಆಲದಮರದಿಂದ ಯಾವುದೋ ಭೂತವೋ! ಪಿಶಾಚಿಯೋ! ಪರ್… ಎನ್ನುತ್ತಾ ಜೋರಾಗಿ ಪಂಚೆಗೆ ಬಡಿಯಿತು. ಆ ಪಂಚೆ ನಮ್ಮಿಬ್ಬರ ಮುಖಕ್ಕೆ ಬಡಿದು, ಪಂಚೆಯ ಮೇಲೆ ಕುಳಿತಿದ್ದ ಪತಂಗ, ಹುಳ-ಹುಪ್ಪಟಗಳೆಲ್ಲ ಮೈಮೇಲೆ ಬಿದ್ದವು. ಅಮಾವಾಸ್ಯೆ ಮಧ್ಯರಾತ್ರಿಯ ಆ ಕಗ್ಗತ್ತಲಲ್ಲಿ ನಮ್ಮನ್ನೇ ಬೀಳಿಸುವಂತೆ ಬಂದ ಆ ಅನಿರೀಕ್ಷಿತ ಜೀವಿಯಿಂದ ಹೆದರಿ ಇನ್ನೇನು ಕಾಲಿಗೆ ಬುದ್ದಿ ಹೇಳಬೇಕು; ಅಷ್ಟರಲ್ಲಿ, ಪಂಚೆಯ ಪಕ್ಕದಲ್ಲೇ ನಮ್ಮಿಬ್ಬರ ನಡುವೆಯೇ ಹಸಿರು ಬಣ್ಣದ ಹಕ್ಕಿಯೊಂದು ಹಾರಿ ಹೋಯಿತು.
ಡಾ. ಅಶ್ವಥ ಕೆ.ಎನ್.‌ ಬರೆದ ಹಕ್ಕಿಲೋಕದ ಕತೆಗಳ ಕೃತಿ “ಜಂಗಾಲ”ದ ಒಂದು ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ

ಒಮ್ಮೆ ನಾವಿಬ್ಬರೂ ಮಾತನಾಡುವ ಪ್ರಸಂಗ ಬಂದಾಗ ನಾನು ನನ್ನ ಕುಲದ ಬಗ್ಗೆ ಹೇಳಿದೆ; ಆ ಸಾಂಪ್ರದಾಯಿಕ ಬೇಲಿಯನ್ನು ಹಾರಬೇಕೆಂಬ ಆಸೆಯನ್ನು ತೋಡಿಕೊಂಡೆ. ಬಿಸಿ ರಕ್ತ, ವಿಚಾರವಂತಿಕೆಯ ಮೆದುಳು ಅವನಿಗೆ ಬಲ ತುಂಬಿತ್ತು. ಊರಿನ ಹಿರೀಗೌಡನಾದರೋ ಸರ್ವಾಂಗ ಸುಂದರಿ-ತೊಳೆದ ಮುತ್ತಿನಂತಿದ್ದ ನನ್ನನ್ನು ನೋಡಿ ಜೊಲ್ಲು ಸುರಿಸಿದ್ದು ತಿಳಿದ ದಿನ ಮೈಮೇಲೆ ಹಾವು-ಚೇಳು ಹರಿದಂತಾಗಿತ್ತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಶುಭಶ್ರೀ ಪ್ರಸಾದ್ ಕತೆ “ನಾ ಸಾಯಬೇಕು…”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ

ತನ್ನ ಮಗಳು ಕಣ್ಣೆದುರಿಗೆ ಅಳುತ್ತಿರುವುದನ್ನು ಕಂಡೂ ಯಾವುದೇ ವಿಕಾರಗಳನ್ನು ಹರಿಸದೆ ಮೌನದಿಂದ ಶೂನ್ಯವನ್ನು ದಿಟ್ಟಿಸುತ್ತಾ, ಅಜ್ಜನನ್ನು ತಬ್ಬಿಕೊಂಡ ಮಗಳನ್ನು ಮತ್ತು ಅಪ್ಪ ಶೇಖರಪ್ಪಯ್ಯರನ್ನು ನಿರ್ಭಾವದಿಂದ ನೋಡುತ್ತಿದ್ದ. ಶೇಖರಪ್ಪಯ್ಯರ ಹೊಟ್ಟೆ ಹೊತ್ತಿಯೇ ಹೋಯಿತೇನೋ ಎನ್ನುವಂತೆ ಎಡಗೈಯಿಂದ ಹೊಟ್ಟೆಯನ್ನು ಹಿಡಿದು ಹಿಚುಕುತ್ತಾ ಸವರುತ್ತಾ, ಮೊಮ್ಮಗಳನ್ನು ಬಿಗಿದಪ್ಪಿಕೊಂಡು ಮಗನೇ… ಸೂರ್ಯ…. ನಾನು ಕಣೋ ಅಪ್ಪಾ… ಮಾತಾಡೋ, ಮಾತಾಡು ಕಂದ ಎಂದು ಸೂರ್ಯನಿಗೆ ಹೇಳುತ್ತಿದ್ದರೆ….
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸಂತೋಷ್ ಅನಂತಪುರ ಕತೆ “ಗಂಧ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ