Advertisement

ರೂಪಶ್ರೀ ಕಲ್ಲಿಗನೂರ್

ಎಗ್‌ ರೈಸ್‌ ತಿಂತೀರಿ ಸರ್ರ…?: ಗುರುಪ್ರಸಾದ ಕುರ್ತಕೋಟಿ ಕೃತಿಯ ಬರಹ

ಬಹುಶಃ ನಾನೂ ಯುವಕನಾಗಿದ್ದಾಗ ಅವನಂತೆಯೇ ಯೋಚಿದ್ದೆನೆ? ಇಲ್ಲವಲ್ಲ! ಎಲ್ಲರೂ ನಮ್ಮ ಹಾಗೆಯೇ ಯೋಚಿಸಬೇಕು ಅಂತಿಲ್ಲವಲ್ಲ! ನಾವೇನಾದರೂ ಪಟ್ಟಣದಲ್ಲಿ ಸುಖ ಇಲ್ಲ ಮಾರಾಯ ಅಂತ ಹೇಳಿದರೆ ಅಲ್ಲಿನವರು “ನಿಮ್ಮ ಹತ್ರ ರೊಕ್ಕ ಜಾಸ್ತಿ ಆಗಿ ಕೊಳಿತೈತಿ ಬಿಡ್ರಿ. ಅದಕ್ಕ ಹಿಂಗ ಮಾತಾಡತೀರಿ” ಅಂತ ಗೊಳ್ಳ ಅಂತ ನಗುತ್ತಾರೆ!
ಕೆಂಡಸಂಪಿಗೆಯಲ್ಲಿ ಪ್ರಕಟವಾದ ಗುರುಪ್ರಸಾದ ಕುರ್ತಕೋಟಿಯವರ ಅಂಕಣ ಬರಹ “ಗ್ರಾಮ ಡ್ರಾಮಾಯಣ” ಇದೀಗ ಪುಸ್ತಕ ರೂಪದಲ್ಲಿ ಅಚ್ಚಾಗುತ್ತಿದ್ದು, ಆಗಸ್ಟ್‌ ಕೊನೆಗೆ ಓದುಗರ ಕೈ ಸೇರಲಿದೆ. ಅದರ ಒಂದು ಬರಹ ನಿಮ್ಮ ಓದಿಗೆ

Read More

ಶ್ರುತಿ ಬಿ. ಆರ್. ಬರೆದ ಎರಡು ಕವಿತೆಗಳು

“ಆಡಿ ಬಾ ಎನ ಕಂದ ಅಂಗಾಲ ತೊಳೆದೇನ
ಎನುವ ಅವ್ವ ಈಗಷ್ಟೇ ತಣ್ಣಗಾಗಿದ್ದಾಳೆ
ರಕ್ತ ಸಿಕ್ತ ಶೂಗಳ ತೊಟ್ಟ ಮಕ್ಕಳು ಅಳುವುದಕ್ಕೂ
ಬೆದರಿ ಕಣ್ಣಗಲಿಸಿ ಅತ್ತಿತ್ತ ನೋಡುತ್ತಿದ್ದಾರೆ,
ಮೈ ಫೇವರಿಟ್ ಕಲರ್ ಇಸ್ ರೆಡ್
ಎಂದು ಮುದ್ದಾಗಿ ಉಲಿಯುತ್ತಿದ್ದ
ಗುಲಾಬಿ ಕೆನ್ನೆಗಳ, ಹಾಲುಗಲ್ಲದ
ಪುಟ್ಟ ಕಂದನ ಕಂಬನಿಯೂ ಕೆಂಪು ಕೆಂಪು” -ಶ್ರುತಿ ಬಿ.ಆರ್. ಬರೆದ ಎರಡು ಕವಿತೆಗಳು

Read More

ಕತ್ತಿಯಲಗಿನ ಮೇಲಿನ ನಡಿಗೆ ಒಂಟಿ ನಡಿಗೆ: ಲಲಿತಾ ಪವಾರ ಕಾದಂಬರಿಯ ಪುಟಗಳು

ಕಮಲಮ್ಮನವರಿಗೆ ಕಸಿವಿಸಿಯಾಯಿತು. ತನ್ನ ಮಗಳ ಸೌಂದರ್ಯದ ಬಗ್ಗೆ ಇಡೀ ಕಾಲೇಜು, ನಮ್ ಏರಿಯಾದವರು ಮಾತನಾಡುತ್ತಾರೆಂದರೆ ನಮ್ಮ ಮನೆಯ ಮೇಲೆ ಅವರ ಕಣ್ಣು ಬಿದ್ದಿದೆ ಎಂದೇ ಅರ್ಥ. ನಾನಂತು ಕೆಲಸಕ್ಕೆ ಹೋಗಿ ಬಿಡುತ್ತೇನೆ, ಇವನು ಹೊರಗೆ ಹೊರಟರೆ ಮನೆಯಲ್ಲಿ ಕಾವ್ಯ ಒಬ್ಬಳೇ ಉಳಿದು ಬಿಡುತ್ತಾಳೆ. ಇಂದು ಸಂಜೆ ಮಹಡಿ ಮೇಲಿದ್ದಾಗ ಎದುರುಗಡೆ ಮನೆಯ ಹುಡುಗ ಇಣುಕಿಣುಕಿ ತನ್ನ ಮನೆಯನ್ನು ದೃಷ್ಟಿಸುತ್ತಿದ್ದುದು ಕಂಡು ಬಂದಿತ್ತು.
ಲಲಿತಾ ಪವಾರ ಹೊಸ ಕಾದಂಬರಿ “ಒಂಟಿ ನಡಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಹುಣಸೇ ಚಿಗುರು ಮತ್ತು ಸ್ತ್ರೀತ್ವ…: ದಯಾ ಗಂಗನಘಟ್ಟ ಮುನ್ನುಡಿ

ಪಿತೃ ಹಿತಾಸಕ್ತ ನಿಲುವುಗಳ ಅರಿವಿರುವ ಕತೆಗಾರ್ತಿ ಪ್ರಜ್ಞಾಪೂರ್ವಕವಾಗಿಯೇ ಅದನ್ನ ತಮ್ಮ ಕತೆಯಲ್ಲಿ ಕಟ್ಟುತ್ತಾರೆ. ಹಾಗಾಗಿಯೇ ಹೆಣ್ಣಿನ ಸಹಜ ಸತ್ವದ ಹುಡುಕಾಟವನ್ನ ಇವರ ಸ್ತ್ರೀ ಪಾತ್ರಗಳಲ್ಲಿ ಬೆದಕಬಹುದು. ಸ್ತ್ರೀತ್ವದ ನಿಲುವಿನ ಬಗ್ಗೆ ಇವರಿಗೊಂದು ಸ್ಪಷ್ಟ ನಿಲುವಿದೆ. ಅದರೊಳಗೊಂದು ಅವರದ್ದೇ ಆದ ಏಸ್ತೆಟಿಕ್ ಇದೆ. ಹೆಣ್ಣಿನ ಅಗತ್ಯ ಮತ್ತು ಆದ್ಯತೆಗಳನ್ನು ಮರು ಪ್ರಶ್ನಿಸಿಕೊಳ್ಳಬೇಕಾದ ಒತ್ತಡ ಕನ್ನಡದ ನವ್ಯ ಸಾಹಿತ್ಯದ ಕೊಡುಗೆಯಾಗಿತ್ತು. ಅದರ ಪರಿಧಿಯನ್ನು ದಾಟಿದ ಈ ಕಾಲಘಟ್ಟದಲ್ಲಿ ಇವರ ಕಥೆಗಳು ಹೆಣ್ಣಿಗೆ ಗಂಡಿನಿಂದ ಏನು ಬೇಕಾಗಿದೆ ಎಂಬ ಪ್ರಶ್ನೆಯನ್ನೂ ಸೂಕ್ಷ್ಮವಾಗಿ ಎತ್ತಿ ಉತ್ತರವನ್ನೂ ಮಿಂಚುವಂತೆ ಮಾಡುತ್ತವೆ.
ದೀಪದ ಮಲ್ಲಿ ಕಥಾಸಂಕಲನ “ಹುಣಸೇ ಚಿಗುರು”ಗೆ ಕತೆಗಾರ್ತಿ ದಯಾ ಗಂಗನಘಟ್ಟ ಬರೆದ ಮುನ್ನುಡಿ

Read More

ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

“ಮೊನ್ನೆ ಮೊನ್ನೆಯ ತನಕ
ಹಾಸಿಗೆ ಒದ್ದೆ ಮಾಡುತ್ತಿದ್ದ
ಪುಟ್ಟ ಕಂದವೊಂದು
ನಿಮಗ್ಯಾಕೆ ಕೊಡಬೇಕು ಕಪ್ಪ
ಎಂದು ಉರು ಹೊಡೆಯುತ್ತಿದೆ”- ಶ್ರೀನಿಧಿ ಎಚ್ ವಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ