Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

“ಹಸ್ತಿನಾವತಿ”: ಇದು ಭಾರತದ ಕಥೆ….

ಆ ಚುನಾವಣೆಯಲ್ಲಿ ಸಂಜಯ್ ಸರ್ಕಾರ್ ಸ್ಪರ್ಧಿಸಿದ್ದರೆ ಬಹುಮತದಿಂದ ಗೆದ್ದು ಬರುತ್ತಿದ್ದರು. ಅವರು ಆ ಕೆಲಸ ಮಾಡಲಿಲ್ಲ. ನ್ಯಾಷನಲ್ ಪಾರ್ಟಿಯೇ ಮತ್ತೆ ಅಧಿಕಾರಕ್ಕೆ ಬರುವತನಕ ಕಾದರು. ನಂತರ ಸರ್ಕಾರದ ಲೋಪಗಳನ್ನು ಎತ್ತಿ ತೋರಿದರು. ನ್ಯಾಷನಲ್ ಪಾರ್ಟಿಯ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದಂತೆ, ಸಂಜಯ್ ಸರ್ಕಾರ್ ತಮ್ಮ ಹೊಸ ಪಕ್ಷವನ್ನು ಹುಟ್ಟುಹಾಕಿದರು. ಅದಕ್ಕೆ ಮಾತೃಭೂಮಿ ಎಂದು ಹೆಸರಿಟ್ಟರು. ಸಂಜಯ್ ಸರ್ಕಾರ್ ಜತೆ ಹೋರಾಟದ ಉದ್ದಕ್ಕೂ ಜತೆಗಿದ್ದ ಚಿದಾನಂದ ಪಾಂಡೆಯನ್ನು ಪಕ್ಷದ ಅಧ್ಯಕ್ಷರೆಂದು ಘೋಷಿಸಿದರು.
ನೆನ್ನೆಯಷ್ಟೇ ಬಿಡುಗಡೆಯಾದ ಜೋಗಿಯವರ ಕಾದಂಬರಿ “ಹಸ್ತಿನಾವತಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮಿಲ್ಟ್ರಿ ಟ್ರಂಕೊಳಗಿನ ಕಥೆಗಳು….

ಇಲ್ಲಿ ಅಧಿಕಾರ ಕೇಂದ್ರವಿರುವ ದಕ್ಷಿಣದ ಕರ್ನಾಟಕದ ಎದುರು, ಉತ್ತರ ಕರ್ನಾಟಕ ವಿಶಿಷ್ಟವಾದ ಭಾಷೆಯನ್ನಾಗಲಿ ಅನುಭವವನ್ನಾಗಲಿ ವೈಭವೀಕರಿಸುವುದಿಲ್ಲ, ಇಲ್ಲವೇ ಕೀಳೀಕರಿಸುವುದಿಲ್ಲ. ತನ್ನ ಪಾಲಿಗೆ ಕನ್ನಡ ನಾಡಿನ ಬದುಕೆಲ್ಲ ಒಂದೇ ಎಂಬ ಸಮದರ್ಶಿಯಾದ ದೃಷ್ಟಿಕೋನವು ಇಲ್ಲಿ ಕೆಲಸಮಾಡುತ್ತದೆ. ಹೀಗಾಗಿ ಇಲ್ಲಿನ ಸ್ಮೃತಿಚಿತ್ರಗಳು ರೋಚಕವಾದ ಅನುಭವವನ್ನು ಮಂಡಿಸಿ ಓದುಗರನ್ನು ರಂಜಿಸುವುದಕ್ಕೆ ಉತ್ಸುಕವಾಗುವುದಿಲ್ಲ. ಎಲ್ಲ ಭಾಗದ ಜೀವನದಲ್ಲಿರುವ ವಿಷಾದಕರ ದುರಂತಗಳನ್ನು ದಾಖಲಿಸುತ್ತವೆ. ಜನರ ಹಸಿವು ಬಡತನ ದುಡಿಮೆ ಹೋರಾಟ ಜೀವಂತಿಕೆಗಳನ್ನು ತಾಳ್ಮೆಯಿಂದ ಘನತೆಯಿಂದ ಕಾಣಿಸುತ್ತವೆ.
ಡಾ. ಲಕ್ಷ್ಮಣ ವಿ.ಎ. ಬರಹಗಳ ಸಂಕಲನ “ಮಿಲ್ಟ್ರಿ ಟ್ರಂಕು”ಕ್ಕೆ ರಹಮತ್‌ ತರೀಕೆರೆ ಬರೆದ ಮುನ್ನುಡಿ

Read More

ಯಶಸ್ವಿನಿ ಎಂ.ಎನ್‌. ಬರೆದ ಈ ದಿನದ ಕವಿತೆ

“ಹಾಳೆಗೆ ಅಂಟಿರುವ ತಾರೀಕಿನ ಚೌಕಟ್ಟಿನೊಳಗೆ
ಸಮಯ ಕರಗುವ ಸರದಿ
ಸುಕ್ಕುಗಟ್ಟಿರುವ ದೇಹದ ಮೇಲೆ ಸುಡುವ ನೀರು ಕಡುಗಪ್ಪು ಇದ್ದಿಲು
ಸಿಕ್ಕುಗಟ್ಟಿರುವ ನೆರೆತ ತುರುಬಿನೊಳಗೆ
ಒದ್ದೆಯಾಗಿದ್ದವು ನೆನಪುಗಳು”- ಯಶಸ್ವಿನಿ ಎಂ.ಎನ್‌. ಬರೆದ ಈ ದಿನದ ಕವಿತೆ

Read More

ಶಾಂತಿನಾಥ ದೇಸಾಯಿಯವರ ಕೃತಿಗಳಲ್ಲಿ ವ್ಯಕ್ತಿಸ್ವಾತಂತ್ರ್ಯದ ಬಿಕ್ಕಟ್ಟುಗಳು

ಆಧುನಿಕತೆಯು ನಮ್ಮ ಮನಸ್ಸಿಗೆ ಇತ್ತ ಸ್ವಾತಂತ್ರ್ಯವನ್ನು ಮೊಟ್ಟಮೊದಲ ಬಾರಿಗೆ ಕನ್ನಡ ಗದ್ಯ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಗ್ರಹಿಸಿದವರು ದೇಸಾಯರು. ಅವರ ಪಾತ್ರಗಳು ಈ ಸ್ವಾತಂತ್ರ್ಯವನ್ನು ನಿಭಾಯಿಸಲಾಗದ ತಮ್ಮ ವೈಫಲ್ಯದಿಂದ ಕಂಗೆಡುವಂಥವರು. ಸಂಪೂರ್ಣ ಸ್ವಾತಂತ್ರ್ಯವನ್ನು ಭರಿಸುವುದು ಎಷ್ಟು ಕ್ಲಿಷ್ಟಕರವಾದದ್ದು ಮತ್ತು ಈ ಹಾದಿ ಹೆಜ್ಜೆಹೆಜ್ಜೆಗೂ ಎಂಥ ವೈಫಲ್ಯಗಳಿಂದ ಕೂಡಿದ್ದು ಎಂಬುದು ಅವರ ಕಥೆಗಳ ಅಂತರಂಗವನ್ನು ಪ್ರವೇಶಿಸಿದಾಗಲೇ ಗೊತ್ತಾಗುವ ಸಂಗತಿ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿನ ಕಥೆಗಾರ ವಿವೇಕ ಶಾನಭಾಗ ಬರೆದ ಲೇಖನ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ