Advertisement

ಬಸವನಗೌಡ ಹೆಬ್ಬಳಗೆರೆ

ತೇಜಸ್ವಿಯ ಫೋಟೋ ತೆಗೆಯಲಿಲ್ಲ…

ಹೀಗೆ ಮಾತನಾಡುತ್ತಿದ್ದಾಗ, ‘ಈ ಸರಣಿಗೆ ತೇಜಸ್ವಿ ಫೋಟೋ ಹಾಕಿಕೊಳ್ಳಬೇಕು, ಕತೆಗಾರ ಅಬ್ದುಲ್ ರಶೀದ್ ಸಾರ್, ನೀವು ತೆಗೆದಿರುವ ತೇಜಸ್ವಿ ಫೋಟೋ ಕೇಳುತ್ತಿದ್ದಾರೆ ಯಾವುದಾದರೂ ಕೊಡಿ’ ಎಂದೆ. ಅದಕ್ಕವರು ಒಂದು ಕ್ಷಣ ಯೋಚಿಸಿ ನಕ್ಕರು. ‘ಏಕೆ ಸಾರ್ ತೆಗೆದಿಲ್ಲವಾ….?’ ಎಂದು ಮತ್ತೆ ಕೇಳಿದೆ. ‘ಏ ಇಲ್ಲಾ ಕಣೋ ತೇಜಸ್ವಿ ಸಾವಿರಾರು ಫೋಟೋ ತೆಗೆದಿದ್ದಾರೆ. ನಾನೂ ಕೂಡ ತೆಗೆದಿದ್ದೇನೆ. ಎಂತೆಂಥಹವರ ಫೋಟೋ ತೆಗೆದಿದ್ದೇವೆ. ಆದರೆ ಎಂದೂ ನಮ್ಮ ನಮ್ಮ ಫೋಟೋಗಳನ್ನು ಎಂದಿಗೂ ತೆಗೆದುಕೊಳ್ಳಲಿಲ್ಲ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್‌ ಹೆತ್ತೂರು ಕೃತಿ “ಶಿವ ಮೇಡ್‌ ಬೈ ತೇಜಸ್ವಿ”ಯ ಆಯ್ದ ಭಾಗ

Read More

ಕೆಟಿಎಸ್‌-ತೇಜಸ್ವಿ ಸ್ನೇಹಕ್ಕೆ ಕಾರಣರಾದವರು ಪ್ರೊಫೆಸರ್ ನಂಜುಂಡಸ್ವಾಮಿ

ತೇಜಸ್ವಿ ಜತೆ ಮಾತನಾಡುವುದೇ ಒಂದು ನವೀನ ಅನುಭವ. ಮತ್ತು ತನಗೆ ಗೊತ್ತಿಲ್ಲದ ಒಂದು ವಿಚಾರ ನೋಡಿದರೆ ಅಥವಾ ಗಮನಿಸಿದರೆ ಅವರು ಪಡುತ್ತಿದ್ದ ಅಚ್ಚರಿ, ಅಗಾಧತೆಯನ್ನು ವರ್ಣಿಸಲು ಸಾಧ್ಯವಿಲ್ಲ. ಪ್ರತಿಯೊಂದು ಹೊಸ ವಿಚಾರವನ್ನು ಕಾತರ, ಕುತೂಹಲದಿಂದ ನೋಡುವ ಅವರ ಕೌತುಕವೇ ಅವರನ್ನು ದೊಡ್ಡ ಮನುಷ್ಯನನ್ನಾಗಿಸಿತು. ಹೊಸತನ್ನು ಕಂಡಿದ್ದೇ ‘ಏ ನೋಡೋ ಶಿವ ಹೇಗಿದೆ!’ ಎಂದು ಅಚ್ಚರಿಯಿಂದ ನೋಡುವ ಆ ನೋಟವನ್ನು ನೆನಪಿಸಿಕೊಂಡರೇ ಅವರ ಜೀವನ ಪ್ರೀತಿಯ ಬಗ್ಗೆ ಕೌತುಕ ಹುಟ್ಟಿಸುತ್ತದೆ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್‌ ಹೆತ್ತೂರು ಕೃತಿ “ಶಿವ ಮೇಡ್‌ ಬೈ ತೇಜಸ್ವಿ”ಯ ಆಯ್ದ ಭಾಗ

Read More

ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ

“ಹುಟ್ಟುತ್ತಲೇ ಹೀಗೆ ಬೆನ್ನಿಗೆ, ಕರುಳಿಗೆ, ನಾಭಿಗೆ, ಕಣ್ಣಿಗೆ
ಗರ್ಭದ ಪೊರಯಂತೆ ಸುತ್ತಿದ,
ಜೇಡರ ಹುಳುವಿನ ಬೇಟೆಯನ್ನು
ಸುಳಿಗೆ ಸಿಲುಕಿಸಿದ ನೂಲಿನಂಥ
ಸ್ಥೂಲ ಸೂಕ್ಷ್ಮದ ಈ ಯಮಲೋಕದ ಪಾಶ
ಕಳೆದುಹೋಗುವುದಿಲ್ಲ ಹಾಗೆ
ಕನ್ನಡಿಯ ಮೇಲಿನ ಧೂಳಿನಂತೆ.”-ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ

Read More

ಕೆಟಿಎಸ್ ಜೊತೆ ನನ್ನ ಒಡನಾಟ

ಅವರು ಅಷ್ಟು ದೊಡ್ಡ ಸಾಹಿತಿ ಆಗಿದ್ದರೂ ಒಂದಷ್ಟು ಹಮ್ಮು ಬಿಮ್ಮಿಲ್ಲದೆ, ಫೋಟೋಕ್ಕೆ ನಿಂತುಕೊಂಡರು. ಹಾಗೆ ಪೇಯಿಂಟಿಂಗ್ ಬಗ್ಗೆ ಅವರು ಕೇಳಿದ ಪ್ರಶ್ನೆಗಳು ಅವರು ಆ ವಯಸ್ಸಿನಲ್ಲೂ ತಿಳಿದುಕೊಳ್ಳುವ ಹಂಬಲ ಮತ್ತು ಗೊತ್ತಿಲ್ಲದನ್ನು ಕೇಳಿ ತಿಳಿದುಕೊಳ್ಳುವ ಅವರ ಪ್ರಾಮಾಣಿಕತೆ ಬಗ್ಗೆ ನನಗೆ ದಿಗ್ಭ್ರಮೆ ಹುಟ್ಟಿಸಿತ್ತು. ಹೀಗೆ ತೇಜಸ್ವಿಗೆ ಯಾರೋ ಹೇಳಿದ್ದರಂತೆ ಟೀ ವಿಥ್ ಬ್ರಾಂಡಿ ಚೆನ್ನಾಗಿರುತ್ತದೆ ಎಂದು. ತೇಜಸ್ವಿಗೆ ಅದೇನೋ ಕುತೂಹಲ. ಒಂದು ದಿನ ನನ್ನ ಕರೆದು ‘ಟೀ ವಿಥ್ ಬ್ರಾಂಡಿ ಚೆನ್ನಾಗಿರುತ್ತದಂತಲ್ಲಾ..? ಕುಡಿಯೋಣ್ವಾ’ ಎಂದರು. ನನಗೋ ನಗು.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್‌ ಹೆತ್ತೂರು ಕೃತಿ “ಶಿವ ಮೇಡ್‌ ಬೈ ತೇಜಸ್ವಿ”ಯ ಆಯ್ದ ಭಾಗ

Read More

ಕೆ.ಟಿ. ಶಿವಪ್ರಸಾದ್ ಎಂಬ ಕಲಾವಿದನ ನೆನಪು….

ಖ್ಯಾತ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ನೆನ್ನೆ ತೀರಿಕೊಂಡರು. ಅಂತರ್‌ರಾಷ್ಟ್ರೀಯ ಕಲಾವಿದರಾಗಿ ಗುರುತಿಸಿಕೊಂಡಿದ್ದ ಶಿವಪ್ರಸಾದರು, ತಮ್ಮ ಕಲೆ, ತೀರಾ ಹತ್ತಿರದ ಸ್ನೇಹಿತರೊಂದಿಗಿನ ಒಡನಾಟದ ಹೊರತು, ತಮ್ಮ ಬದುಕನ್ನು ಬದುಕಿದ ರೀತಿ ಬಹಳ ಭಿನ್ನವಾಗಿತ್ತು. ಪೂರ್ಣಚಂದ್ರ ತೇಜಸ್ವಿಯವರ ಆಪ್ತ ಒಡನಾಡಿಯೂ ಆಗಿದ್ದ ಇವರ ನೆನಪುಗಳನ್ನು, ಅವರ ಆಪ್ತ ನಾಗರಾಜ್‌ ಹೆತ್ತೂರು “ಶಿವ ಮೇಡ್‌ ಬೈ ತೇಜಸ್ವಿ” ಪುಸ್ತಕದ ಹೆಸರಿನಲ್ಲಿ ಪ್ರಕಟಿಸಿದ್ದರು. ಈ ಕೃತಿಯ ಆಯ್ದ ಭಾಗಗಳು ನಿಮ್ಮ ಓದಿಗೆ ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ