ತೇಜಸ್ವಿಯ ಫೋಟೋ ತೆಗೆಯಲಿಲ್ಲ…
ಹೀಗೆ ಮಾತನಾಡುತ್ತಿದ್ದಾಗ, ‘ಈ ಸರಣಿಗೆ ತೇಜಸ್ವಿ ಫೋಟೋ ಹಾಕಿಕೊಳ್ಳಬೇಕು, ಕತೆಗಾರ ಅಬ್ದುಲ್ ರಶೀದ್ ಸಾರ್, ನೀವು ತೆಗೆದಿರುವ ತೇಜಸ್ವಿ ಫೋಟೋ ಕೇಳುತ್ತಿದ್ದಾರೆ ಯಾವುದಾದರೂ ಕೊಡಿ’ ಎಂದೆ. ಅದಕ್ಕವರು ಒಂದು ಕ್ಷಣ ಯೋಚಿಸಿ ನಕ್ಕರು. ‘ಏಕೆ ಸಾರ್ ತೆಗೆದಿಲ್ಲವಾ….?’ ಎಂದು ಮತ್ತೆ ಕೇಳಿದೆ. ‘ಏ ಇಲ್ಲಾ ಕಣೋ ತೇಜಸ್ವಿ ಸಾವಿರಾರು ಫೋಟೋ ತೆಗೆದಿದ್ದಾರೆ. ನಾನೂ ಕೂಡ ತೆಗೆದಿದ್ದೇನೆ. ಎಂತೆಂಥಹವರ ಫೋಟೋ ತೆಗೆದಿದ್ದೇವೆ. ಆದರೆ ಎಂದೂ ನಮ್ಮ ನಮ್ಮ ಫೋಟೋಗಳನ್ನು ಎಂದಿಗೂ ತೆಗೆದುಕೊಳ್ಳಲಿಲ್ಲ.
ಕೆ.ಟಿ. ಶಿವಪ್ರಸಾದ್ ಹಾಗೂ ಪೂರ್ಣಚಂದ್ರ ತೇಜಸ್ವಿಯವರ ಒಡನಾಟದ ಕುರಿತ ನಾಗರಾಜ್ ಹೆತ್ತೂರು ಕೃತಿ “ಶಿವ ಮೇಡ್ ಬೈ ತೇಜಸ್ವಿ”ಯ ಆಯ್ದ ಭಾಗ

