Advertisement

ಎಚ್. ಗೋಪಾಲಕೃಷ್ಣ

ಜರ್ಮನಿಯಿಂದ ಕನ್ನಡಕ್ಕೆ ಬಂದ ‘ಈಡಾ’

ಕ್ಷಣ ಮೌನ. ಉರ್ಸುಲಾಳ ಜೊತೆ ಮಾತನಾಡದೆಯೇ ಹಾಯಾಗಿ ಕುಳಿತಿರಬಹುದು. ಅವಳು ಪೆದ್ದುಪೆದ್ದಾಗಿ ಏನೇನೋ ಪ್ರಶ್ನೆಗಳನ್ನು ಕೇಳುವುದಿಲ್ಲ. ತನ್ನ ಮೇಲೆ ಹುಡುಗನೊಬ್ಬ ಬಂದೆರಗಿದ ಘನವಾದ ವಿಷಯವನ್ನು ಹಂಚಿಕೊಳ್ಳಲು ಮಾತ್ರ ಬಾಯಿ ತೆರೆಯುವಳು. ಕೆಲವೊಮ್ಮೆ ನಾವಿಬ್ಬರೂ ಒಂದೇ ಬೆಂಚಿನ ಮೇಲೆ ಪಕ್ಕಪಕ್ಕದಲ್ಲೇ ಸುಮಾರು ಹೊತ್ತು ಕುಳಿತು ಒಂದೇ ಒಂದು ಶಬ್ದವನ್ನೂ ಉಸುರದೆ ಹೋದಂತಹ ದಿನಗಳಿವೆ. ನೀರಿನಿಂದ ಹೊರಬಂದು ಕಣ್ಣುಗಳನ್ನು ಮುಚ್ಚಿಕೊಂಡು ಬಿಸಿಲಿನ ಶಾಖಕ್ಕೆ ಮೌನವಾಗಿ ಮೈಯೊಡ್ಡಿ ಕುಳಿತಂತಹ ದಿನಗಳಿವೆ.
ಜರ್ಮನಿಯ ಕಾರೊಲೀನ ವಾಲ್‌ ಬರೆದ ‘22 ಬಾನೆನ್‌ʼ ಕಾದಂಬರಿಯನ್ನು ಹರ್ಷ ರಘುರಾಮ್‌ ಜರ್ಮನ್‌ ಭಾಷೆಯಿಂದ ನೇರವಾಗಿ ಕನ್ನಡಕ್ಕೆ ಅನುವಾದಿಸಿದ್ದು, ಈ ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಕೆ. ಆರ್. ಸಂಧ್ಯಾರೆಡ್ಡಿ ಕತೆ

ಇಷ್ಟು ಸುಖ ಕೊಡುವ ಸಂಬಂಧ ನನ್ನ ಪಾಲಿಗೆ ಎಂದೆಂದಿಗೂ ಇಲ್ಲವಾಗುವುದು ಎಂಬ ಅರಿವಿನಿಂದ ನಾನು ತೀರಾ ವಿಹ್ವಲಳಾಗುತ್ತಿದ್ದೆ. ಆದರೆ ಅವನು? ಅವನ ಪಾಲಿಗೆ ಇದೇ ಕೊನೆಯಲ್ಲವಲ್ಲ? ಇಷ್ಟಾಗಿ ನನ್ನ ವೈಯಕ್ತಿಕ ನೋವುಗಳನ್ನು ಅವನೊಂದಿಗೆ ಹೇಳಿಕೊಳ್ಳುವುದಾಗಲೀ, ನನ್ನನ್ನೇ ಮದುವೆಯಾಗು ಎಂದು ಅತ್ತು ಕರೆಯುವುದಾಗಲೀ ನನಗೆ ಸಾಧ್ಯವಿರಲಿಲ್ಲ. ನಮ್ಮ ಸಂಬಂಧ ಎಲ್ಲ ಸಾಮಾನ್ಯ ಸಂಬಂಧಗಳಂತಾಗಿ ಬಿಡುವುದೂ ನನಗೆ ಬೇಕಾಗಿರಲಿಲ್ಲ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಕೆ. ಆರ್. ಸಂಧ್ಯಾರೆಡ್ಡಿ ಕತೆ “ಹೀಗೇ ಒಂದು ಪ್ರೇಮದ ಕಥೆ”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಕತೆ

ಬ್ಯಾಂಕಿನಿಂದ ಫೋನು ಬಂತು. ಐವತ್ತು ಲಕ್ಷದ ಓಡಿ ಆಗಿದೆ ಅಂತ ಮ್ಯಾನೇಜರು ಹೇಳಿದರು. ಹಾಗಾದರೆ ಎಲ್ಲೋ ಎಡವಟ್ಟಾಗಿದೆ ಅಂತ ಮನಸ್ಸು ಹೇಳಿತು. ಯಾವತ್ತೂ ಮಕ್ಕಳನ್ನು ಅನುಮಾನಿಸದವನು ನನ್ನ ಬ್ಯಾಂಕ್ ಪಾಸ್ ಪುಸ್ತಕ, ಡಿಪಾಸಿಟ್ ಪತ್ರಗಳು, ಅಂಚೆ ಕಛೇರಿ ಎಮ್.ಐ.ಎಸ್‌ಗಳು ಇರುವುದನ್ನು ಖಾತರಿ ಮಾಡಿಕೊಂಡೆ. ಮಗಳು ಸುಧಾ ಹೆಸರಲ್ಲಿ ನಾಮಿನೇಶನ್ ಮಾಡಿದ್ದ ಬ್ಯಾಂಕ್ ಸರ್ಟಿಫಿಕೇಟ್ ವಿತ್‌ಡ್ರಾ ಆಗಿರುವುದೂ, ಸುಧಾಕರನ ಹೆಸರಲ್ಲಿ ಇಟ್ಟಿದ್ದ ಎಫ್.ಡಿಗಳು ಮಾಯವಾಗಿರುವುದೂ ಗೊತ್ತಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಬರೆದ ಕತೆ “ಜೂಜಿಗೆ ಕೂತವರ ಜುಜುಬಿ ಆಸೆಗಳು….” ನಿಮ್ಮ ಓದಿಗೆ

Read More

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ ಒಡಲ ಸಂಕಟವನ್ನು ಕಲೆಯಾಗಿಸುವುದು ಸಾಧ್ಯವಾಗಿರುವುದರಿಂದಲೇ, ಈ ಕಥೆಗಳು ಓದುಗರೊಳಗೆ ತಮ್ಮ ಕಂಪನಗಳನ್ನು ವಿಸ್ತರಿಸಿಕೊಳ್ಳುವ ಕಸುವು ಹೊಂದಿವೆ.
ಗೋವಿಂದರಾಜು ಎಂ ಕಲ್ಲೂರು ಕಥಾ ಸಂಕಲನ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ವೀಣಾ ನಿರಂಜನ ಬರೆದ ಈ ದಿನದ ಕವಿತೆ

“ಮೊದಮೊದಲು
ಹಿತವೆಂದುಕೊಂಡವಳಿಗೆ
ಕಂಡೂ ಕಂಡೂ
ಹಗಲು ಬಾವಿಗೆ ಬಿದ್ದ ಅನುಭವ
ಪರಚಿಕೊಂಡಲೆಲ್ಲ
ಹೆಪ್ಪುಗಟ್ಟಿದ ರಕ್ತದ ಕಲೆ
ಮೈ ತುಂಬ ಗಾಯ”- ವೀಣಾ ನಿರಂಜನ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ