Advertisement

ಕೀರ್ತಿ ಬೈಂದೂರ್

ಅಶೋಕ ಹೊಸಮನಿ ಬರೆದ ಎರಡು ಕವಿತೆಗಳು

“ಇನ್ನೇನು ಧ್ಯಾನಿಸಲಿ
ನೆತ್ತರ ಕಡಲಲಿ
ಈಜಿ
ಹೊತ್ತು ಕಳೆದೀತು ಹೇಗೆ?
ಕನಸಿದ ಕನಸ ಮುರುಟಿ
ನಿರಿಗೆಗಳು ಚೂರು ಚೂರಾಗುವಾಗ
ಕೂಸಿನಂತೆ
ಚಿಟ್ಟನೆ ಚೀರಿತು
ಹೃದಯ”- ಅಶೋಕ ಹೊಸಮನಿ ಬರೆದ ಎರಡು ಕವಿತೆಗಳು

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪದ್ಮನಾಭ ಭಟ್, ಶೇವ್ಕಾರ ಕತೆ

ಮಳೆಗಾಲವಾದ್ದರಿಂದ ಅಂಗಳದಲ್ಲಿ ಜಾರಿಕೆಯಾಗಿತ್ತು. ಎಚ್ಚರಿಕೆಯಿಂದ ನಡೆದು, ಬಾಗಿಲ ಮುಂದೆ ನಿಂತು, ಅತ್ತಿದ್ದ ಕಣ್ಣುಗಳನ್ನೆಲ್ಲ ಚೊಕ್ಕವಾಗಿ ಒರೆಸಿಕೊಂಡು “ಅತ್ತೆ..” ಎಂದು ಕರೆದೆ. ಎಷ್ಟೇ ತಡೆ ಹಿಡಿದಿದ್ದರೂ ಧ್ವನಿ ನಡುಗಿತು. ಬಾಗಿಲ ತೆಗೆದ ಅತ್ತೆ ಒಳಗೆ ಕರೆದು ಒಂದುಸಲ ನನ್ನ ಮೆಲಿಂದ ಕೆಳಗಿನವರೆಗೆ ನೋಡಿದವಳೇ “ಅಪ್ಪ ಹೊಡೆದ್ನಾ..?” ಕೇಳಿದಳು. ಮಾತಾಡಿದರೆ ಎಲ್ಲಿ ಅಳು ಬಂದು ಬಿಡುತ್ತದೇನೋ ಎಂದು `ಹೌದು’ ಎಂಬಂತೆ ತಲೆ ಅಲ್ಲಾಡಿಸಿ ಕೇಪಿನಡಬ್ಬ ಕೊಟ್ಟೆ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪದ್ಮನಾಭ ಭಟ್, ಶೇವ್ಕಾರ ಕತೆ “ಕೇಪಿನ ಡಬ್ಬಿ”

Read More

ನೌಕರಿ ಬಿಟ್ಟ ಎಂ.ಟೆಕ್ ಪದವೀಧರ ಬಾವಿ ತೋಡಿದ: ಸಿದ್ದು ಸತ್ಯಣ್ಣನವರ ಬರಹ

ಸೂರ್ಯಕಾಂತ್ ಕೃಷಿಯೆಡೆಗಿನ ಸೆಳೆತ ಇತ್ತಲ್ಲ, ಅದೇನೂ ಸಣ್ಣದಲ್ಲ. ಆದರೆ ನೀರಿಲ್ಲದೆ ಕೃಷಿ ಕೆಲಸ ಮಾಡುವುದು ಹೇಗೆ? ಅದಕ್ಕಾಗಿ ಬೋರ್‍ವೆಲ್ ಉತ್ತರದಂತೆ ಕಾಣಿಸಿದರೂ ಅದು ಪರಿಹಾರವಾಗಿ ಕಾಣಲಿಲ್ಲ. ಅದಕ್ಕಾಗಿ ಬೋರ್‍ವೆಲ್ ಹಾಕಿಸಲು ಆತನ ಮನಸ್ಸು ಒಪ್ಪಲಿಲ್ಲ. ಸತತ ಐದು ತಿಂಗಳು ಒಬ್ಬರೇ ಬಾವಿ ತೋಡಿದರು. ಮೈಗೆ ಗಾಯ, ನೋವು ಎಲ್ಲಾ ಆದವು. ಆಗ ಜನರ ಪ್ರತಿಕ್ರಿಯೆ ಇತ್ತಲ್ಲ, ಅದು ಇರಿದದ್ದು ಮನಸ್ಸಿಗೆ; ಎಲ್ಲಾ ಗಾಯಕ್ಕಿಂತ ಹೆಚ್ಚು ಕಾಡಿದ್ದು ಅದೇ ಎನ್ನುವುದು ಸೂರ್ಯಕಾಂತ್ ಮನದಾಳ.
ಸಿದ್ದು ಸತ್ಯಣ್ಣವರ ಹೊಸ ಕೃತಿ “ಬೆಳಕಿನ ತೆನೆ”ಯ ಒಂದು ಬರಹ ನಿಮ್ಮ ಓದಿಗೆ

Read More

ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

“ಅರೇ
ಇವನೆಂಥ ಹುಚ್ಚ
ಇಲ್ಲಿ
ಪ್ರೀತಿ, ಮಾನವೀಯತೆ
ಕರುಣೆ, ಅಂತಃಕರಣ ಬಹು
ತುಟ್ಟಿ ಸರಕುಗಳು

ಹೌದು
ಈ ದುನಿಯಾದಲ್ಲಿ
ಹುಚ್ಚರಷ್ಟೇ ಪ್ರೀತಿಯನ್ನು ಹಂಚುತ್ತಾರೆ
ಮತ್ತು ಮನುಷ್ಯರು ದ್ವೇಷವನ್ನು”- ಅಭಿಷೇಕ ಬಳೆ ಮಸರಕಲ್ ಬರೆದ ಈ ದಿನದ ಕವಿತೆ

Read More

ಅಚ್ಚಿಯ ಮದುವೆ….: ಚಂದ್ರಮತಿ ಸೋಂದಾ ಕಾದಂಬರಿಯ ಪುಟಗಳು

ಊರಲ್ಲಿ ಗೌಡ್ರ ಮನೆ ಅಂತ ಇದ್ದಿದ್ದೆ ಎರಡು. ಗಂಡುಹುಡುಗ್ರು ಶಾಲಿಗೆ ಬಂದ್ರೂ ಅವ್ರ ಹೆಣ್ಮಕ್ಳನ್ನ ಕಳುಸ್ತಿರ್ಲೆ. ಬ್ರಾಹ್ಮಣ ಹೆಣ್ಮಕ್ಳಷ್ಟೆ ಶಾಲಿಗೆ ಹೋಗ್ತಿದ್ದ. ಅಚ್ಚಿ ಕಲಿಯದ್ರಲ್ಲಿ ಹುಷಾರಿತ್ತು. ಗೊತ್ತಾಗದಿದ್ನ ಕೇಳಕ್ಕೆ ಅಣ್ಣ ಹ್ಯಾಂಗೂ ಮನೇಲಿದ್ದ. ಎರಡನೇ ತರಗತಿ ಮುಗದಾಗ ಕೂಸು ದೊಡ್ಡಾತು ಅಂತ ಸೀರೆ ಉಡಸಕ್ಕೆ ಶುರುಮಾಡಿದ್ದ. ಇಲ್ಲಿವರಿಗೆ ಅಕ್ಕಯ್ಯದಿಕ್ಳು ಹಾಕಿಬಿಟ್ಟ ಅಂಗಿನ ಅಮ್ಮ ಸರಿಮಾಡಿಕೊಡ್ತಿತ್ತು, ಅದ್ನೇ ಅಚ್ಚಿ ಮನೇಲಿ ತೊಟ್ಗಳ್ತಿತ್ತು. ಶಾಲಿಗೆ ಹೋಪ್ಲೆ ಅಂತ ತಂದಿದ್ದ ಎರಡೂ ಅಂಗಿ ಹರದುಹೋಗಿತ್ತು. ಅಂಟವಾಳಕಾಯಿ ಹಾಕಿ ಬಟ್ಟೆ ತೊಳದ್ರೂ ಚೊಕ್ಕ ಆಗದು ಅಷ್ಟರಲ್ಲೇ ಇತ್ತು.
ಡಾ. ಚಂದ್ರಮತಿ ಸೋಂದಾ ಹೊಸ ಕಾದಂಬರಿ “ದುಪಡಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ