Advertisement

ಕೀರ್ತಿ ಬೈಂದೂರ್

ಕೊನಾರ್ಕ್‌ನ ಭವ್ಯ ಸೂರ್ಯ ದೇವಾಲಯ: ಡಾ. ಜೆ. ಬಾಲಕೃಷ್ಣ ಬರಹ

ಈಗ ಶಿಖರವೇ ಇಲ್ಲದಿರುವ ಮುಖ್ಯ ದೇಗುಲದ ಉಳಿದಿರುವ ಪೀಠ ಭಾಗದ ಪಶ್ಚಿಮ, ಉತ್ತರ ಹಾಗೂ ದಕ್ಷಿಣ ಭಾಗಗಳಲ್ಲಿ ಕ್ಲೋರೈಟ್ ಶಿಲೆಯಿಂದ ನಿರ್ಮಿಸಿರುವ ಸೂರ್ಯನ ಮೂರು ಪಾರ್ಶ್ವ ದೇವತಾ ವಿಗ್ರಹಗಳಿವೆ. ಆ ವಿಗ್ರಹಗಳ ಮೇಲಿನ ಒಡವೆ, ಆಭರಣಗಳ ಕುಸರಿ ಕಲೆಯಂತೂ ಚಿನಿವಾರನ ಕುಸರಿ ಕಲೆಯಷ್ಟೇ ಸೂಕ್ಷ್ಮ ಹಾಗೂ ಸುಂದರವಾಗಿವೆ. ವಿಶೇಷವೆಂದರೆ ಈ ಪಾರ್ಶ್ವ ದೇವತೆಗಳು ಬೂಟುಗಳನ್ನು ಧರಿಸಿವೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ಮಮತಾ ಅರಸೀಕೆರೆ ಬರೆದ ಈ ದಿನದ ಕವಿತೆ

“ತಮ್ಮ ಸಹಜ ಆಟಗಳನ್ನು ಆಡುತ್ತಾ
ದೇವರು ಧರ್ಮದ ಕುರುಹುಗಳನ್ನು
ದ್ವೇಷಾಸೂಯೆಗಳ ಚಹರೆಗಳನ್ನು
ಮರಳಿನಲ್ಲಿ ಕಟ್ಟಿ
ಅಲ್ಲಲ್ಲಿಯೇ ಕೆಡವಿಬಿಡುವರು.”- ಮಮತ ಅರಸೀಕೆರೆ ಬರೆದ ಈ ದಿನದ ಕವಿತೆ

Read More

‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಡಾ. ಪಾರ್ವತಿ ಜಿ.ಐತಾಳ್ ಕತೆ

ನೀನು ಪುಟ್ಟ ಮಗುವಿದ್ದಾಗ ಎಂಥ ರಚ್ಚೆ ಹಿಡಿದು ಅಳುತ್ತಿದ್ದರೂ ಮನೆಯ ಮುಂದಿನ ಕೈತೋಟದಲ್ಲಿ ಪರ‍್ರೆಂದು ಹಾರುತ್ತ ಚೀಂವ್ ಚೀಂವ್ ಎನ್ನುತ್ತಿದ್ದ ಪುಟ್ಟ ಗುಬ್ಬಚ್ಚಿಗಳನ್ನು ನೋಡುತ್ತಲೇ ಅಳು ನಿಲ್ಲಿಸಿ ಜೋರಾಗಿ ನಗುತ್ತಿದ್ದೆ. ಈಗಲೂ ಕಿಟಕಿಯ ಹೊರಗೆ ಅವೇ ಸುಂದರ ಗುಬ್ಬಚ್ಚಿಗಳು ಚಿಲಿಪಿಲಿಗುಟ್ಟುತ್ತ ನಿನ್ನ ನೆನಪನ್ನು ಉಕ್ಕೇರಿಸುತ್ತಿವೆ. ನೀನು ನನ್ನ ತೋಳಲ್ಲೆ ಇದ್ದೀಯೇನೋ ಎಂಬ ಭ್ರಮೆಯನ್ನು ಹುಟ್ಟಿಸುತ್ತಿವೆ. ತೋಟದಲ್ಲಿ ಅರಳಿರುವ ಬಣ್ಣ ಬಣ್ಣದ ಹೂಗಳು ಕಣ್ಣುಗಳು ಹೋದಲ್ಲೆಲ್ಲ ನನ್ನನ್ನೇ ನಿಟ್ಟಿಸುತ್ತಿವೆ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಡಾ. ಪಾರ್ವತಿ ಜಿ.ಐತಾಳ್ ಕತೆ “ಬಲಿಪಶುಗಳು”

Read More

ಅಂಕುಡೊಂಕಿನ ಪಯಣ: ಡಾ. ಎಂ ಉಷಾ ಕಾದಂಬರಿಯ ಪುಟಗಳು

ಮೊದಲೇ ಅಸಮಧಾನಗೊಂಡಿದ್ದ ಪುಟ್ಟಮ್ಮನಿಗೆ ಮಕ್ಕಳ ಈ ಕಳ್ಳಾಟದಿಂದ ಪಿತ್ತ ನೆತ್ತಿಗೇರಿತು. ಕಂಕುಳಲ್ಲಿದ್ದ ಮಲ್ಲಿಯನ್ನು ಕೆಳಕ್ಕೆ ಕುಕ್ಕಿದವಳೆ ಸರೋಜಳ ಮೇಲೆ ಮುಗಿಬಿದ್ದಳು. ‘ಮನೆ ಕೆಲಸ ಮಾಡದು ಬುಟ್ಟು ಸೂಳೆರಂಗೆ ಅಲಂಕಾರ ಮಾಡ್ಕತಾ ಕೂತಿದಿಯಾ ಇಲ್ಲಿ? ಯಾವ ನಾಯಕಸಾನಿ ಕೊಟ್ಲೆ ಇದ್ನ ನಿಂಗೆ… ʼ ಎಂದು ಸಿಕ್ಕಸಿಕ್ಕಲ್ಲಿ ಬಡಿಯ ತೊಡಗಿದಳು. ಈ ಬಾರಿ ಗೌರಿಹಬ್ಬಕ್ಕೆಂದು ರಾಜಶೇಖರ ದಾಕ್ಷಾಯಿಣಿಗೆ ಹೊಸ ಸ್ನೋಪೌಡರ್ ಡಬ್ಬಿಗಳನ್ನು ತಂದುಕೊಟ್ಟಿದ್ದನ್ನು ಗಮನಿಸಿದ ಸರೋಜ ಚಿಕ್ಕಮ್ಮನಲ್ಲಿ ಹಳೆಯ ಡಬ್ಬಿಯನ್ನು ಕೇಳಿ ಪಡೆದಿದ್ದಳು. ಇವತ್ತು ಹಬ್ಬದ ದಿನವಾಗಿದ್ದುದು ಮತ್ತು ಕೆಲಸದಲ್ಲಿ ಮುಳುಗಿ ಹೋಗಿರುವ ಅಮ್ಮ ಗಮನಿಸುವುದಿಲ್ಲ ಎನ್ನುವ ಧೈರ್ಯದಲ್ಲಿ ಹಚ್ಚಿಕೊಂಡಿದ್ದಳು.
ಡಾ. ಎಂ. ಉಷಾ ಹೊಸ ಕಾದಂಬರಿ “ಬಾಳ ಬಟ್ಟೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ರಶ್ಮಿ ಹೆಗಡೆ ಬರೆದ ಈ ದಿನದ ಕವಿತೆ

“ಎಲ್ಲರಿಗೂ ಕಾಂಬುವಳು
ಶ್ರಮಿಕನಿಗೆ ದಕ್ಕುವಳು- ಜಾಸ್ತಿ
ವರುಷವೆಲ್ಲ ಕಹಿಯುಂಡವನಿಗಿನ್ನಿಷ್ಟು
ಮತ್ತೇರಿಸುವಳು ಕಹಿಯೊಳಗಿನ ಮದಿರೆಯಾಗಿ
ಸೋತವ ಪಾಲಿನ ಅಮೃತಮಾಸವಿದು
ಇವಳೇ ಅಖಂಡ ಸುಖ
ಅಬ್ಬಾ ಅಂತೂ ಮುಗಿತಪ್ಪ ಬಿಕರಿಗಿಟ್ಟ ವರ್ಷ”- ರಶ್ಮಿ ಹೆಗಡೆ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ