Advertisement

ಕೀರ್ತಿ ಬೈಂದೂರ್

ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ

“ವಿಷವರ್ತುಲದಲಿ‌ ಮೂರು ಮಾಟಗಾತಿಯರ ಕುಣಿತವನು ಕಂಡು ಜಗದ ಛಾವಣಿಗೆ ಗರಬಡಿಯಿತು
ಮ್ಯಾಕ್ ಬೆತನ ಮುಕುಟದಾಸೆಗೆ ರೈಲು ಬೋಗಿಗಳು ಸ್ಮಶಾನವಾಯಿತು
ಹೆಣದ ರಾಶಿಗಳ ಮೇಲೆ ನಿಂತ ಮಂದಿರಗಳ‌ಲಿ ಮೊಳಗಿದ ಘಂಟಾನಾದವನಾಲಿಸಿದ ದೈವ ಕಿವುಡಾಯಿತು
ಒಳಿತು ಕೆಡುಕಾಯಿತು, ಕೆಡುಕು ಒಳಿತಾಯಿತು
ನೆಲವು ಕೆಂಪಾಯಿತು, ಗಾಳಿ‌ ವಿಷವಾಯಿತು”- ಸತ್ಯಪ್ರಕಾಶ್ ರಾಮಯ್ಯ ಬರೆದ ಈ ದಿನದ ಕವಿತೆ

Read More

`ವ್ಯವಹಾರ ಚತುರ’ ಉಲುವಾಟು ಮಂಗಗಳು: ಡಾ. ಜೆ. ಬಾಲಕೃಷ್ಣ ಬರಹ

ಅಧ್ಯಯನದ ಮತ್ತೊಂದು ಪ್ರಮುಖ ಅಂಶವೆಂದರೆ, ಗಂಡು ಮಂಗಗಳು ಹೆಚ್ಚು ಕದಿಯುತ್ತಿದ್ದವು ಹಾಗೂ ಹದಿಹರೆಯದ ಗಂಡು ಮಂಗಗಳು ಈ ಕ್ರಿಯೆಯಲ್ಲಿ ಹೆಚ್ಚು ಪಾಲ್ಗೊಳ್ಳುತ್ತಿದ್ದವು. ವಿಜ್ಞಾನಿಗಳು ಹೇಳುವಂತೆ ಹದಿಹರೆಯದ ಮಂಗಗಳು ಹೆಚ್ಚು ಅಪಾಯಕ್ಕೆ ಒಡ್ಡಿಕೊಳ್ಳುವ ನಡವಳಿಕೆ ಹೊಂದಿರುತ್ತವೆ. ಈ ರೀತಿಯ ನಡವಳಿಕೆಯನ್ನು ಉಲುವಾಟು ಮಂಗಗಳು ಮೊದಲಿಗೆ ಹೇಗೆ ಕಲಿತವು ಎಂಬುದೇ ಅಚ್ಚರಿಯ ವಿಷಯವಾಗಿದೆ. ಬಹುಶಃ ಪ್ರಾರಂಭದಲ್ಲಿ ಮನುಷ್ಯರ ಪ್ರಭಾವವಿದ್ದರೂ ಇರಬಹುದು, ಆದರೆ ನಂತರ ಅದು ಹೇಗೆ ಒಂದು `ಸಾಂಸ್ಕೃತಿಕ ನಡವಳಿಕೆ’ಯಾಗಿ ಸಮುದಾಯದಲ್ಲಿ ಪ್ರಸಾರವಾಗಿದೆ ಎನ್ನುವುದರ ಕುರಿತು ಇನ್ನೂ ಹೆಚ್ಚಿನ ಮನೋವೈಜ್ಞಾನಿಕ ಅಧ್ಯಯನ ಅಗತ್ಯವಿದೆ ಎನ್ನುತ್ತಾರೆ ಫ್ಯಾನಿಯವರು.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಕೆಲವು ಬರಹಗಳ ಸರಣಿ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಮಹಿಳಾ ಕಾವ್ಯ- ಅಲಕ್ಷಿತ ಮಹಿಳಾ ಸಾಹಿತ್ಯ ಚರಿತ್ರೆಯ ಆಕರ: ಸಬಿಹಾ ಭೂಮಿಗೌಡ

ಕವಯಿತ್ರಿಯರ ಸ್ಮೃತಿಯಲ್ಲಿ ಮತ್ತು ಅನುಭವದಲ್ಲಿ ಅಮ್ಮನ ಪಾತ್ರ, ಕಾರ್ಯ, ಲೋಕದೃಷ್ಟಿಗಳು ವಿಶಿಷ್ಟವಾಗಿವೆ. ಅಮ್ಮನನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲು ಅವಳು ಮನೆಯಿಂದ ಹೊರಹಾಕುವ ಕಸವನ್ನು ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ಹಿರಿಯ ಕವಯಿತ್ರಿ! ಅಮ್ಮ ತನ್ನ ಮನೆಯ, ಮನದ, ಸಂಬಂಧದ ಯಾವ ವಸ್ತು ವಿಚಾರಗಳನ್ನೂ ಅವುಗಳಿಂದ ಪುನರ್ ಬಳಕೆ ಸಾಧ್ಯವಿಲ್ಲ ಎನಿಸುವವರೆಗೂ ಹೊರಹಾಕುವುದಿಲ್ಲ, ಅನಂತರವೇ ವಿವಿಧ ಲಕೋಟೆಗಳಲ್ಲಿ ಹಾಕಿ ಮನೆ, ಮನದಿಂದ ಹೊರ ಅಟ್ಟುತ್ತಾಳೆ ಎಂಬ ಚಿಂತನೆಯು ಹೊಸ ಒಳನೋಟವನ್ನು ನೀಡುತ್ತದೆ.
ಪ್ರೊ. ಸಬಿಹಾ ಭೂಮಿಗೌಡ ಸಂಪಾದಿಸಿದ “ಕನ್ನಡ ಮಹಿಳಾ ಕಾವ್ಯ” ಕೃತಿಗೆ ಬರೆದ ಅವರ ಮಾತುಗಳು ಇಲ್ಲಿವೆ…

Read More

ನಾಗಶ್ರೀ ಶ್ರೀರಕ್ಷ ಬರೆದ ಮೂರು ಕವಿತೆಗಳು

“ಒಂದು ದೊಡ್ಡ ಹಾಳೆಯಲ್ಲಿ
ಚಿತ್ರಗಳು ಕುಳಿತಿವೆ ಅಲುಗಾಡದೆ
ಗಂಡು ಹೆಣ್ಣು ಅದು ಇದು ಎಲ್ಲವೂ
ಗಾಳಿಬೀಸಿದರೂ ಯಾರೂ
ಕದಲುತ್ತಿಲ್ಲ ಹಾಗೆಯೇ ಇದ್ದ ಹಾಗೆಯೇ
ಅಲ್ಲಿಂದಲೇ ಎದ್ದು ಜೀವಂತವಾಗಿ
ಬಂದಿರುವೆ ನಾನು”- ಸಣ್ಣ ಪ್ರಾಯದಲ್ಲೇ ತೀರಿಹೋದ ಕನ್ನಡದ ಅನನ್ಯ ಕವಯಿತ್ರಿ ನಾಗಶ್ರೀ ಶ್ರೀರಕ್ಷ ಬದುಕಿದ್ದರೆ ಇಂದಿಗೆ ಅವರಿಗೆ ಮೂವತ್ತೇಳರ ಹರಯ. ಕೆಂಡಸಂಪಿಗೆಯ ಉಪ ಸಂಪಾದಕಿಯೂ ಆಗಿದ್ದ ಅವರ ಚೇತೋಹಾರಿ ನೆನಪಿಗೆ ಅವರ ‘ನಕ್ಷತ್ರ ಕವಿತೆಗಳು’ ಸಂಕಲನದಿಂದ ಆಯ್ದ ಮೂರು ಕವಿತೆಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ