Advertisement

ಸುಮಾವೀಣಾ

ಸೂರ್ಯಕೀರ್ತಿ ಬರೆದ ಐದು ಕವಿತೆಗಳು

“ಪ್ರೇಮ ಪರೀಕ್ಷೆಯಲ್ಲಿ
ಈ ಜಗತ್ತು ರೋಗಿಯಾಗಿದೆ.
ಸದಾ ಬಳಲುವ, ತೃಷೆಯ
ತೂತು ಮಡಿಕೆಯ ಹೋಲುತ್ತದೆ.
ಯುದ್ಧ, ಅಹಂಕಾರ, ಮದ
ಕಾಮ, ಮೋಹದ ಬಲೆಯಲ್ಲಿ
ಈ ಜಗತ್ತು ರೋಗದ ಮನೆಯಾಗಿದೆ.”- ಸೂರ್ಯಕೀರ್ತಿ ಬರೆದ ಐದು ಕವಿತೆಗಳು

Read More

ಮೊಟ್ಟೆಕೋಳಿಯೇ ಬೇಕೆಂದ ಅಳಿಯರು!: ಸೂರ್ಯಕೀರ್ತಿ ಪ್ರಬಂಧ

‘ಏನೇ ನಿಮ್ಮವ್ವ ಅಳಿಯಂದ್ರ ನೋಡೋ ಹುಟ್ಟೇನೆ ಇದು, ಇದೊಂದು ಬಾಳಾಟ ಅಂತ ನಾನು ಅಂದುಕೊಂಡಿರಲಿಲ್ಲ, ಅಕ್ಕಪಕ್ಕದವರೆಲ್ಲ ಎಷ್ಟು ಚೆಂದವಾಗಿ ಅಳಿಯರನ್ನು ಕರ್ದು ಕಳಿಸ್ತಾರೆ ಅನ್ನೋದ್ನ ನೋಡಿ ಕಲಿಬೇಕು’ ಎಂದೆಲ್ಲ ಅಂದಿದ್ದನ್ನು ನೋಡಿ. ಮೇಯಲು ಹೋದ ಕೋಳಿಗಳ ಬಿಡದೆ ಅಟ್ಟಾಡಿಸಿಕೊಂಡು ಹಿಡಿದು ಕೂಯ್ದು ತಿಂದು ತಮ್ಮ ಹೆಂಡತಿಯರ ಜೊತೆ ಹೊರಟು ನಿಂತರು. ಅಜ್ಜಿ ಮಕ್ಕಳ ಖುಷಿಯ ನೋಡಿ ತನ್ನೆರಡು ಕೈಗಳ ಎತ್ತಿ ಆಶೀರ್ವಾದದ ಜೊತೆ ಒಂದಿಷ್ಟು ಕಣ್ಣೀರು ಹಾಕಿದಳು. ಎಲ್ಲರಿಗೂ ತಿಂಡಿ ತಿನಸುಗಳ ಕಟ್ಟಿ ‘ಜೋಪಾನ’ ಎಂದು ಹೇಳಿದಳು.
ಇತ್ತೀಚೆಗೆ ಬಿಡುಗಡೆಯಾದ ಸೂರ್ಯಕೀರ್ತಿ ಅವರ ಪ್ರಬಂಧಗಳ ಸಂಕಲನ “ಮಳೆ”ಯ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಶಾಂತಾ ಜಯಾನಂದ್ ಬರೆದ ಈ ದಿನದ ಕವಿತೆ

“ರೇಖಾಗಣಿತ ಈಗಷ್ಟೆ
ಬದುಕಿನ ಪಾಠ
ಆರಂಭಿಸಿದೆ,
ಇತಿಹಾಸ ಗತ ಸೇರಿದೆ,
ವ್ಯಂಜನ, ಸ್ವರ, ವ್ಯಂಜನಗಳು
ಅರ್ಥೈಸಿಕೊಳ್ಳದೆ ಸೋತಿವೆ,”- ಶಾಂತಾ ಜಯಾನಂದ್ ಬರೆದ ಈ ದಿನದ ಕವಿತೆ

Read More

ಲಂಡನ್‌ ಮತ್ತು ಟಿಪ್ಪೂ ಸುಲ್ತಾನ್: ಜೆ. ಬಾಲಕೃಷ್ಣ ಬರಹ

ಬ್ರಿಟಿಷರಿಗೆ ಆ `ವ್ಯಾಘ್ರಸ್ವಪ್ನ’ ಎಷ್ಟು ನಿದ್ರೆ ಕೆಡಿಸಿತ್ತೆಂದರೆ ಅವರು ಆ ಸಿಟ್ಟನ್ನು ಕಾಡಿನಲ್ಲಿನ ನಿಜವಾದ ಹುಲಿಗಳನ್ನು ಕೊಂದು ಅವುಗಳ ಮೇಲೆ ಕಾಲನ್ನಿಟ್ಟು ಫೋಟೊ ತೆಗೆಸಿಕೊಂಡು ಗರ್ವದಿಂದ ಬೀಗುತ್ತಿದ್ದರು. ಟಿಪ್ಪು ಹುಲಿಯೊಂದಿಗೆ ಸೆಣಸುತ್ತಿರುವ ಹಲವಾರು ಚಿತ್ರಗಳು ಟಿಪ್ಪೂನ ಕಾಲದ ನಂತರ ರಚಿತವಾಗಿವೆ. ಟಿಪ್ಪೂ ನಿಜವಾಗಿ ಹುಲಿಯೊಂದಿಗೆ ಸೆಣಸಿದ ದಾಖಲೆಗಳಿಲ್ಲವೆನ್ನುತ್ತಾರೆ ಚರಿತ್ರಕಾರರು. ಆದರೆ, ಟಿಪ್ಪೂನ ಕಾಲದ್ದೇ ಆದ ದಂತ ಕತೆಯೊಂದರಲ್ಲಿ ಹೈದರಾಲಿ ಟಿಪ್ಪೂನನ್ನು ಹೈದರಾಬಾದ್‌ಗೆ ಒಪ್ಪಂದವೊಂದರೆ ವಿಚಾರಕ್ಕೆ ಕಳುಹಿಸಿದ್ದಾಗ ಅಲ್ಲಿನ ಕಾಡೊಂದರಲ್ಲಿ ಹುಲಿಯೊಂದನ್ನು ಎದುರಿಸಿದ್ದನಂತೆ.
ಡಾ. ಜೆ. ಬಾಲಕೃಷ್ಣ ಅವರ ಹೊಸ ಕೃತಿ “ನಡೆದಷ್ಟು ದೂರ” ಪ್ರವಾಸ ಕಥನದ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ಸೂರ್ಯನಿಗೋ ಯಾರು ಹುಟ್ಟಿದರೆಷ್ಟು? ಯಾರು ಸತ್ತರೆಷ್ಟು? ಅವನ ಕೆಲಸ ಅವನದ್ದೇ. ಬೆಳಗಿನ ಮೋಟಾರು ಗಾಡಿ ಬಂದು ಹೋದ ಸದ್ದಾಯಿತು. ಬಸವಣ್ಣನ ಅಣ್ಣನ ಮಗ ಮಲ್ಲೇಶ ಬಾಗಿಲಲ್ಲಿ ಬಂದು ನಿಂತಿದ್ದ. ನಿಧಾನಕ್ಕೆ ಬಸವಣ್ಣನ ಬಳಿಗೆ ಬಂದ. ಬೆನ್ನು ಸವರಿದ. ಅವರಿಬ್ಬರೆ ತಾನೆ ಗೋಪುವನ್ನು ಕೊನೆಯ ಬಾರಿಗೆ ನೋಡಿದವರು. ಕಾಣುತ್ತಿದ್ದಂತೇ ಕೈಜಾರಿ ಬಿದ್ದ ಗೋಪು ಅಪ್ಪಾ ಅಪ್ಪಯ್ಯಾ ಎಂದು ಕೂಗಿದ್ದೊಂದೇ ಗೊತ್ತು.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ “ಭೂಮಿಯೊಳಗಿದೆ ಬದುಕು” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ