Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ನಾಗ ಐತಾಳರು ಇನ್ನಿಲ್ಲ….

ಬಾವಿಕಟ್ಟೆಯ ಪಶ್ಚಿಮಕ್ಕೆ ಬಚ್ಚಲು ಮನೆ. ಸ್ನಾನ ಮಾಡಲು ಬಚ್ಚಲು ಹೊಂಡವಿದ್ದಿತು, ಸ್ನಾನಕ್ಕೆ ಬಿಸಿನೀರು ಕಾಯಿಸಲೊಂದು ಬಹಳಷ್ಟು ದೊಡ್ಡ ಗಾತ್ರದ ಹಂಡೆ, ಬಟ್ಟೆ ಬದಲಾಯಿಸಲು ಸಾಕಷ್ಟು ವಿಸ್ತಾರವಾದ ಸ್ಥಳ. ಚಿಕ್ಕಂದಿನಲ್ಲಿ ನಾನು ನನ್ನ ತಮ್ಮಂದಿರನ್ನು ಕೂಡಿಕೊಂಡು ಬಚ್ಚಲು ಒಲೆಯ ಮುಂದೆ ಚಳಿಗಾಲದಲ್ಲಿ ಮೈ ಕಾಯಿಸುತ್ತ, ಹುಲ್ಲು ಕಡ್ಡಿಗಳಿಗೆ ಬೆಂಕಿ ತಗುಲಿಸಿ, ಸಿಗರೇಟು ಸೇದುತ್ತಿದ್ದೇವೆಂಬ; ಆಟವಾಡಿದ ದಿನಗಳ ನೆನಪಾಗುತ್ತಿದೆ.
ಹಿರಿಯ ಸಾಹಿತಿಗಳಾದ ನಾಗ ಐತಾಳರು (ಆಹಿತಾನಲ) ನೆನ್ನೆ ತೀರಿಕೊಂಡರು. ಅವರ ನೆನಪಿನಲ್ಲಿ ಅವರ “ಕಾಲ ಉರುಳಿ ಉಳಿದುದಷ್ಟೇ ನೆನಪು” ಆತ್ಮಕತೆಯ ಭಾಗವೊಂದನ್ನು ನಿಮ್ಮ ಓದಿಗೆ ಇಲ್ಲಿ ಹಂಚಿಕೊಳ್ಳಲಾಗಿದೆ

Read More

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More

ವಸು ವತ್ಸಲೆ ಬರೆದ ಈ ದಿನದ ಕವಿತೆ

“ಅಸ್ಪಷ್ಟ ಭಾವಗಳು ಲಾವಾರಸದಂತೆ ಉಕ್ಕಿ
ಕುದಿ ಮೌನ ಈರ್ಷ್ಯೆಯಲಿ ಕಣ್ಣೊಳಗೆ ನುಂಗುತ್ತಿದೆ…
ಮುಲಾಜಿಲ್ಲದ ಮಾತು ಭಯ ಉದ್ವೇಗ ಮೀರಿ
ಬದುಕನ್ನು ಮುದ್ದಿಸುವುದ ಮರೆತು
ತಗುಲಿಕೊಂಡಿದೆ ಕ್ರೂರ ಕೋಪದ ಹರಿತ
ಕತ್ತಿಯ ತುದಿಗೆ ….”- ವಸು ವತ್ಸಲೆ ಬರೆದ ಈ ದಿನದ ಕವಿತೆ

Read More

ವಾಸ್ತವವಾದಿ ನೆಲೆಯಲ್ಲಿ ಮೈತಳೆದ ಕತೆಗಳು

ಸಿನಿಕತನದಲ್ಲಾಗಲೀ, ಅಸಹಾಯಕತೆಯಲ್ಲಾಗಲೀ ಇವರು ಅಳುತ್ತಾ, ಹಣೆಬರೆಹವನ್ನು ಹಳಿಯುತ್ತಾ ಕೂಡುವುದಿಲ್ಲ. ಹೀಗಿದ್ದಾಗಲೂ ಬಿಗಿಹುಬ್ಬಿನ ಕಾರ್ಪಣ್ಯದ, ಶಠತ್ವದ ಬದುಕನ್ನೂ ಇವರು ನಡೆಸುವುದಿಲ್ಲ. ಬದಲಿಗೆ ಅದೇ ಜೀವನೋತ್ಸಾಹದ, ಲವಲವಿಕೆಯ ವ್ಯಕ್ತಿತ್ವವನ್ನು ಕೊನೆಯವರೆಗೂ ಉಳಿಸಿಕೊಳ್ಳುತ್ತಾರೆ. ತಿಳಿಗೇಡಿಯನ್ನು ಕಟ್ಟಿಕೊಂಡೇ ಬದುಕನ್ನು ಗೆಲ್ಲುತ್ತಾ ಹೋಗುವ ಈ ಹೆಣ್ಣು ಮಕ್ಕಳು ಇವರಿಬ್ಬರೂ ಮನೆಯಲ್ಲಿಲ್ಲದ ಹೊತ್ತಿನಲ್ಲಿ ಆತ ಮಿತಿಮೀರಿ ತಿಂದ ಜಾಮೂನಿನ ಕಾರಣಕ್ಕೆ ಕಳೆದುಕೊಳ್ಳುವುದು ವಿಕಟ ವ್ಯಂಗ್ಯದಂತೆ ನಮಗೆ ಕಾಣಿಸುತ್ತದೆ.
ಶೋಭಾ ಗುನ್ನಾಪೂರ ಕಥಾ ಸಂಕಲನ “ಭೂಮಿಯ ಋಣ”ಕ್ಕೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ