Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಹೂ ಅರಳುವ ಸಮಯ…

ʻನಿಮ್ಮ ಕಾವ್ಯದಲ್ಲಿ ನೀವು ಬರೆಯಲೇಬೇಕೆಂಬ ಮಾತುಗಳು ಇರುವಂತೆಯೇ ನೀವು ಬರೆದೂ ಬರೆದೂ ಜಾಳಾಗಬಹುದಾದ ಕೆಲವು ಸಂವೇದನೆಗಳು ಸಹ ಜಾಗ ಪಡೆದಿವೆ. ಇದು ಪ್ರತಿ ಕವಿಗೂ ಇರುವ ತೊಡಕು. ನೀವು ಬರೆಯಲಾರಂಭಿಸಿದ ತಕ್ಷಣ ನಿಮಗೆ ಒಂದು ಶೈಲಿಯು ಸಿದ್ಧಿಸುತ್ತದೆ. ಅದನ್ನು ಬಳಕೆ ಮಾಡುತ್ತಾ ಹೋದಂತೆ ಅದರ ಸಾರ ಕಡಿಮೆಯಾದಂತೆ ಅನ್ನಿಸುತ್ತದೆ. ಪ್ರಾಯಶಃ ನೀವು ಆವಾಹಿಸಿಕೊಳ್ಳುವ ಪ್ರೀತಿಯ ವ್ಯಾಮೋಹ ಅನೇಕ ಕವಿತೆಗಳಲ್ಲಿ ಪುನಾರಾವರ್ತನೆ ಆಗುವ ಅಪಾಯದಲ್ಲಿವೆ. ಒಂದು ವಿಷಯವನ್ನು ವೃತ್ತಾಕಾರವಾಗಿ ನಿಧನಿಧಾನವಾಗಿ ಪ್ರವೇಶಿಸಿ ಅದರ ಗಾಢತೆಯನ್ನು ಅರಿಯುವುದು ಒಂದು ತಂತ್ರʼ.
ಚೈತ್ರ ಶಿವಯೋಗಿಮಠ ಕವನ ಸಂಕಲನ “ಪೆಟ್ರಿಕೋರ್‌”ಗೆ ತಾರಿಣಿ ಶುಭದಾಯಿನಿ ಬರೆದ ಮಾತುಗಳು

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ

ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ