ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ
“ಯಪ್ಪಾ ದೇವರೇ!
ಕನಿಷ್ಠ ಶಿಸ್ತು ಇಲ್ಲದೇ ಎಂಗೆಂಗೋ ಬದುಕಿದರೆ
ಸೇಡು ತೀರಿಸಿಕೊಳ್ಳತ್ತದೆ ಸಾವು
ಬರಬರಾದ್ದನ್ನು ಬರಿಸಿ”- ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 9, 2023 | ದಿನದ ಕವಿತೆ |
“ಯಪ್ಪಾ ದೇವರೇ!
ಕನಿಷ್ಠ ಶಿಸ್ತು ಇಲ್ಲದೇ ಎಂಗೆಂಗೋ ಬದುಕಿದರೆ
ಸೇಡು ತೀರಿಸಿಕೊಳ್ಳತ್ತದೆ ಸಾವು
ಬರಬರಾದ್ದನ್ನು ಬರಿಸಿ”- ವಿಶಾಲ್ ಮ್ಯಾಸರ್ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Oct 9, 2023 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಶಿದ್ದಲಿಂಗೇಶ್ ಮತ್ತೂರ್. ಮೂಲತಃ ಧಾರವಾಡದವರು. ಖಾಸಗಿ ಕಂಪನಿಯೊಂದರಲ್ಲಿ ರೋಬೋಟಿಕ್ ಎಂಜುನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವನ್ಯಜೀವಿ ಛಾಯಾಗ್ರಹಣದಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read MorePosted by ಕೆಂಡಸಂಪಿಗೆ | Oct 7, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಹಿಂಗೆ ಪ್ರಾಣಿಗಳ ಕಾಟದ ಜೊತೆಗೆ ಎರೆನೆತ್ತಿಯ ಕಾಡಿನೊಳಕ್ಕೆ ಆಗಾಗ ದೂರದ ಊರುಗಳಿಂದ ದರೋಡೆಕೋರರು ಬಂದು ಸೇರಿಕೊಂಡುಬಿಡುತ್ತಿದ್ದರಂತೆ. ಆಗ ಅಪ್ಪಿತಪ್ಪಿಯೂ ಸುತ್ತಲ ಹಳ್ಳಿಗಳ ಜನರು ಅತ್ತ ಸುಳಿಯುತ್ತಿರಲಿಲ್ಲವಂತೆ. ಪೊಲೀಸರಿಗೆ ದೂರು ಕೊಟ್ಟರೂ ಅತ್ತ ಹೋಗಲು ಅವರೂ ಹಿಂಜರಿಯುತ್ತಿದ್ದರಂತೆ. ಸುತ್ತಮುತ್ತಲ ಹಳ್ಳಿಗಳಲ್ಲಿ ಸಾಕಷ್ಟು ಕಳ್ಳತನ ಮಾಡಿದ ಮೇಲೆ ಆ ದರೋಡೆಕೋರರು ಅವರಾಗಿಯೇ ಜಾಗ ಖಾಲಿ ಮಾಡುತ್ತಿದ್ದರಂತೆ. ಎರೆನೆತ್ತಿಯ ಬಗ್ಗೆ ಇಂಥ ಪುಕಾರುಗಳನ್ನು ನನ್ನ ಅಜ್ಜನಷ್ಟೇ ಅಲ್ಲ ಊರಿನ ಹಲವು ಹಿರಿಯ ತಲೆಗಳು ಹೇಳುತ್ತಿದ್ದುದರಿಂದ ಅದು ನನ್ನಂಥವರೊಳಗೆ ಒಂದು ನಿಗೂಢ ಲೋಕವಾಗಿ ಉಳಿದುಬಿಟ್ಟಿತ್ತು.
ಕಥೆಗಾರ ಎಸ್. ಗಂಗಾಧರಯ್ಯ ಅವರ ಈತನಕದ ಕತೆಗಳ ಸಂಕಲನ “ಎರೆನೆತ್ತಿ”ಗೆ ಅವರೇ ಬರೆದ ಮಾತುಗಳು ಇಲ್ಲಿವೆ
Posted by ಕೆಂಡಸಂಪಿಗೆ | Oct 5, 2023 | ದಿನದ ಫೋಟೋ |
ಈ ದಿನದ ಫೋಟೋ ತೆಗೆದವರು ಎನ್. ಆರ್. ತಿಪ್ಪೇಸ್ವಾಮಿ ಚಿಕ್ಕಹಳ್ಳಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ವಾಸವಾಗಿದ್ದಾರೆ. ತಾ.ಪಂ ಕಚೇರಿ, ಹಿರಿಯೂರು ಇಲ್ಲಿ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಹಂಪಿಯ ಕನ್ನಡ ವಿ.ವಿ.ಯಲ್ಲಿ ಪಿ.ಹೆಚ್ ಡಿ ಸಂಶೋಧನಾ ಅಧ್ಯಯನ ಮಾಡುತ್ತಿದ್ದಾರೆ. ಹಲವು ಪತ್ರಿಕೆಗಳಲ್ಲಿ ಇವರ ಕತೆಗಳು ಪ್ರಕಟವಾಗಿವೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Posted by ಕೆಂಡಸಂಪಿಗೆ | Oct 4, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಬೆಳಗಿನ ಜಾವ ಕಣ್ಣುಬಿಟ್ಟಾಗ ಎಲ್ಲೆಲ್ಲೂ ಜಾತ್ರೆಯದೇ ಆದ ಒಂದು ಬೆಡಗಿನ ಸೊಬಗು. ತಣ್ಣನೆಯ ಗಾಳಿ-ಪಕ್ಷಿಗಳ ಕಲರವ. ಸೂರ್ಯೋದಯ. ದೇವಸ್ಥಾನದ ಆವರಣದಿಂದ ಕೇಳಿಬರುವ ಶರಣರ ವಚನಗಳ ಹಾಡುಗಳು. ಸುತ್ತೆಲ್ಲ ಹಸಿರು ಗಿಡಮರಗಳಿಂದ ತುಂಬಿದ ತಂಪಾದ ಸ್ಥಳದಲ್ಲಿ ಚೆನ್ನಬಸವಣ್ಣನ ದೇವಸ್ಥಾನ ದೂರ ದಿಂದಲೇ ಕಂಗೊಳಿಸುತ್ತದೆ. ಎತ್ತರದ ಗೋಪುರದಲ್ಲಿ ಶಿವಶರಣರ ಶಿಲ್ಪ ಕೃತಿಗಳು. ಅವರವರ ವೃತ್ತಿಗೆ ತಕ್ಕಂತೆ ಕೆತ್ತನೆಗಳಿವೆ. ೧೨ನೆಯ ಶತಮಾನದ ಶರಣರೆಲ್ಲ ಕಣ್ಣಿಗೆ ಕಟ್ಟುವಂತೆ ಕಾಣುತ್ತಾರೆ. ದೇವಸ್ಥಾನ ತಳಿರು ತೋರಣಗಳಿಂದ ಶೋಭಿತಗೊಂಡಿದೆ.
ಡಾ. ಲತಾ ಗುತ್ತಿ ಹೊಸ ಕಾದಂಬರಿ “ಚದುರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
