Advertisement

ಸುಮಾವೀಣಾ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ನರೇಂದ್ರ ಪೈ ಕತೆ

ಈಗಲೂ ರಾತ್ರಿ ಎರಡೂವರೆ, ನಾಲ್ಕುಗಂಟೆಗೆಲ್ಲ ಒಮ್ಮೊಮ್ಮೆ ಎಚ್ಚರವಾದಾಗ ನಾನು ಆವತ್ತು ಎದೆ ಕಲ್ಲು ಮಾಡಿಕೊಂಡು ನಡೆದು ಬಂದುಬಿಟ್ಟ ಕ್ಷಣ ನೆನಪಾಗಿ ಇನ್ನು ಮಲಗುವುದು ಸಾಧ್ಯವೇ ಇಲ್ಲ ಎಂದು ಎದ್ದು ಕೂರುತ್ತೇನೆ. ಆವತ್ತು ನಾನು ಆ ಭಟ್ಟನ ಮಾತು ಕೇಳಿ ತಿರುಗಿ ನೋಡದೇ ಬಂದು ಬಿಡಬಾರದಾಗಿತ್ತು. ಅಷ್ಟು ಹತ್ತಿರದಿಂದ ಅಮ್ಮ, ಸುಚೀ, ಅಮ್ಮಿ ಮೂವರೂ ಸ್ಪಷ್ಟವಾಗಿ ನನ್ನನ್ನು ಕರೆದಿದ್ದು ಖಂಡಿತಾ ಸುಳ್ಳಲ್ಲ, ಭ್ರಮೆಯಲ್ಲ. ಅವರು ನನಗೆ ಮರಳಿ ಸಿಗುತ್ತಿದ್ದರೋ ಇಲ್ಲವೋ ಆ ಪ್ರಶ್ನೆ ಬೇರೆ.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ನರೇಂದ್ರ ಪೈ ಕತೆ “ಭೇಟಿ” ನಿಮ್ಮ ಓದಿಗೆ

Read More

ಮಹಿಳಾ ಕಾವ್ಯ- ಅಲಕ್ಷಿತ ಮಹಿಳಾ ಸಾಹಿತ್ಯ ಚರಿತ್ರೆಯ ಆಕರ: ಸಬಿಹಾ ಭೂಮಿಗೌಡ

ಕವಯಿತ್ರಿಯರ ಸ್ಮೃತಿಯಲ್ಲಿ ಮತ್ತು ಅನುಭವದಲ್ಲಿ ಅಮ್ಮನ ಪಾತ್ರ, ಕಾರ್ಯ, ಲೋಕದೃಷ್ಟಿಗಳು ವಿಶಿಷ್ಟವಾಗಿವೆ. ಅಮ್ಮನನ್ನು ಅರ್ಥ ಮಾಡಿಕೊಳ್ಳಬೇಕೆಂದರೆ ಮೊದಲು ಅವಳು ಮನೆಯಿಂದ ಹೊರಹಾಕುವ ಕಸವನ್ನು ಅರ್ಥ ಮಾಡಿಕೊಳ್ಳಬೇಕು ಎನ್ನುತ್ತಾರೆ ಹಿರಿಯ ಕವಯಿತ್ರಿ! ಅಮ್ಮ ತನ್ನ ಮನೆಯ, ಮನದ, ಸಂಬಂಧದ ಯಾವ ವಸ್ತು ವಿಚಾರಗಳನ್ನೂ ಅವುಗಳಿಂದ ಪುನರ್ ಬಳಕೆ ಸಾಧ್ಯವಿಲ್ಲ ಎನಿಸುವವರೆಗೂ ಹೊರಹಾಕುವುದಿಲ್ಲ, ಅನಂತರವೇ ವಿವಿಧ ಲಕೋಟೆಗಳಲ್ಲಿ ಹಾಕಿ ಮನೆ, ಮನದಿಂದ ಹೊರ ಅಟ್ಟುತ್ತಾಳೆ ಎಂಬ ಚಿಂತನೆಯು ಹೊಸ ಒಳನೋಟವನ್ನು ನೀಡುತ್ತದೆ.
ಪ್ರೊ. ಸಬಿಹಾ ಭೂಮಿಗೌಡ ಸಂಪಾದಿಸಿದ “ಕನ್ನಡ ಮಹಿಳಾ ಕಾವ್ಯ” ಕೃತಿಗೆ ಬರೆದ ಅವರ ಮಾತುಗಳು ಇಲ್ಲಿವೆ…

Read More

ನಾಗಶ್ರೀ ಶ್ರೀರಕ್ಷ ಬರೆದ ಮೂರು ಕವಿತೆಗಳು

“ಒಂದು ದೊಡ್ಡ ಹಾಳೆಯಲ್ಲಿ
ಚಿತ್ರಗಳು ಕುಳಿತಿವೆ ಅಲುಗಾಡದೆ
ಗಂಡು ಹೆಣ್ಣು ಅದು ಇದು ಎಲ್ಲವೂ
ಗಾಳಿಬೀಸಿದರೂ ಯಾರೂ
ಕದಲುತ್ತಿಲ್ಲ ಹಾಗೆಯೇ ಇದ್ದ ಹಾಗೆಯೇ
ಅಲ್ಲಿಂದಲೇ ಎದ್ದು ಜೀವಂತವಾಗಿ
ಬಂದಿರುವೆ ನಾನು”- ಸಣ್ಣ ಪ್ರಾಯದಲ್ಲೇ ತೀರಿಹೋದ ಕನ್ನಡದ ಅನನ್ಯ ಕವಯಿತ್ರಿ ನಾಗಶ್ರೀ ಶ್ರೀರಕ್ಷ ಬದುಕಿದ್ದರೆ ಇಂದಿಗೆ ಅವರಿಗೆ ಮೂವತ್ತೇಳರ ಹರಯ. ಕೆಂಡಸಂಪಿಗೆಯ ಉಪ ಸಂಪಾದಕಿಯೂ ಆಗಿದ್ದ ಅವರ ಚೇತೋಹಾರಿ ನೆನಪಿಗೆ ಅವರ ‘ನಕ್ಷತ್ರ ಕವಿತೆಗಳು’ ಸಂಕಲನದಿಂದ ಆಯ್ದ ಮೂರು ಕವಿತೆಗಳು.

Read More

ಸಹಜತೆಯ ಚೆಲುವಿನ ಕಥೆಗಳು: ಅನುಪಮಾ ಪ್ರಸಾದ್‌ ಕೃತಿಗೆ ಕೇಶವ ಮಳಗಿ ಮಾತುಗಳು

ಸಂಕಲನದ ಕಥೆಗಳು ವಿಷಯ, ವ್ಯಾಪ್ತಿ ಹಾಗೂ ಹರಹುಗಳ ದೃಷ್ಟಿಯಿಂದಲೂ ಗಮನಾರ್ಹ. ಅನುಭವದಿಂದ ಮಾಗಿದ ಕಥೆಗಾರ್ತಿಯ ಈ ಬಗೆಯ ಸೂಕ್ಷ್ಮ ಆಯ್ಕೆಯಿಂದಾಗಿ ಸಂಕಲನಕ್ಕೊಂದು ಸಹಜ ವೈವಿಧ್ಯತೆ ದೊರಕಿ ಓದುಗರು ಪ್ರತಿ ಕಥೆಯ ವಾಚನದಲ್ಲಿಯೂ ಹೊಸ ಅನುಭವವನ್ನು ಪಡೆಯಬಲ್ಲರು. ಯಾವುದೇ ಸಂವೇದನಾಶೀಲ ಲೇಖಕ ಇಂಥದ್ದನ್ನು ಸಾಧಿಸುವುದು ಗರಿಮೆಯ ಸಂಗತಿಯೇ. ಇಲ್ಲಿನ ಹದಿಮೂರು ಕಥೆಗಳು ಓದುಗರಿಗೆ ನೀಡುವ ಅನುಭವ, ಲೋಕದೃಷ್ಟಿ, ಆರ್ದ್ರತೆಯ ಸ್ಪರ್ಶದಿಂದಾಗಿ ಅವರು ನಮ್ಯವಾಗಬಲ್ಲರು. ಅರೆಚಣ ಚಿಂತಿತರಾಗಬಲ್ಲರು.
ಅನುಪಮಾ ಪ್ರಸಾದ್‌ ಕಥಾ ಸಂಕಲನ “ಚೋದ್ಯ”ಕ್ಕೆ ಕೇಶವ ಮಳಗಿ ಬರೆದ ಮಾತುಗಳು

Read More

ಎಚ್ ವಿ ಶ್ರೀನಿಧಿ ಬರೆದ ಈ ದಿನದ ಕವಿತೆ

“ಪೇಟೆಯ ಧಾರಣೆ ದುರಾಸೆಗೆ
ಬಟವಾಡೆ ಆಗದೆ ಬೀದಿಪಾಲಾದ
ಹೂವುಗಳೆ, ಕೊಂಡು ತಂದು
ವಾರಕ್ಕೆ ಬೋರಾದ ವಸ್ತುಗಳೆ
ಹಣದ ಅರ್ಥವೇನು

ಷೇರುಪೇಟೆಯ ಗುಡ್ಡಗೆರೆಗಳೆ
ಹಾಳುಕೋಟೆಯ ಟಂಕಸಾಲೆಗಳೆ
ಯಾರು ಮುಟ್ಟದ ಹರಿದ ನೋಟುಗಳೆ
ಹಣದ ಅರ್ಥವೇನು”- ಎಚ್ ವಿ ಶ್ರೀನಿಧಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ