Advertisement

ಸುಮಾವೀಣಾ

ವಸಂತಸೇನೆ ಎಂಬ ನನ್ನ ಮುತ್ತಜ್ಜಿಯ ಕಥೆ: ಸತೀಶ್‌ ತಿಪಟೂರು ಬರಹ

ನಮ್ಮ ಅಜ್ಜಿಯರಿಂದ ಬಳುವಳಿಯಾಗಿ ಬಂದ ನಿವೇಶನದಲ್ಲಿ ಅರವತ್ತು ವರ್ಷಗಳ ಹಿಂದೆ ನಮ್ಮ ತಂದೆಯವರು ಕಟ್ಟಿದ್ದ ಈ ಮನೆಯಲ್ಲಿ ಇವರೆಲ್ಲರ ವೈವಿಧ್ಯಮಯ ಸ್ಮೃತಿ ಕಥನಗಳು ನೆಲೆಗೊಂಡಿವೆ. ಇಷ್ಟಲ್ಲದೇ ಈ ಮನೆಯೇ ಕೇಂದ್ರವಾಗಿ ಇಷ್ಟು ವರ್ಷಗಳಲ್ಲಿ ನಡೆಯುತ್ತಿರುವ ನೃತ್ಯಶಾಲೆ, ಸಂಗೀತ ಶಾಲೆ, ನಾಟಕ ಶಾಲೆಯ ನೂರಾರು ಹುಡುಗ ಹುಡುಗಿಯರು ಈ ಮನೆಯ ಒಡನಾಟದಲ್ಲಿ ಬೆಳೆದಿದ್ದಾರೆ. ಮತ್ತು ಹೋರಾಟ, ಚಳುವಳಿ, ಕ್ರಾಂತಿ ಎನ್ನುವ ಕಾಮ್ರೇಡ್‌ಗಳು, ಕವಿಗಳೂ, ಲೇಖಕರು, ಪತ್ರಕರ್ತರು, ಪ್ರಗತಿಪರ ರಾಜಕೀಯ ನೇತಾರರೂ ಅಟ್ಟದ ಮೇಲಿನ ಸಭೆಗಳಿಂದಾಗಿ ಈ ಮನೆಯ ಭಾಗವಾಗಿದ್ದಾರೆ. ಅಂದಿನ ದಿನಗಳ ಈ ಮನೆಯನ್ನು ಕೆಲವು ಸ್ನೇಹಿತರು ಜಾತ್ಯಾತೀತ ಮಠವೆಂದೂ; ಅಲ್ಲಿ ನಿತ್ಯ ದಾಸೋಹವೆಂದು ನೆನಪಿಸಿಕೊಂಡು ಮಾತನಾಡುತ್ತಿದ್ದುದುಂಟು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಅಧ್ಯಾಯ ನಿಮ್ಮ ಓದಿಗೆ

Read More

ಡಂಕಲ್‌ಪೇಟೆಯ ಒಳ-ಹೊರಗೆ: ಜಿ. ಪಿ.ಬಸವರಾಜು ಮಾತುಗಳು

ವೀರೇಂದ್ರ ವರ್ತಮಾನಕ್ಕೆ ಬೆನ್ನುಹಾಕುವ ಕಥೆಗಾರರಲ್ಲ; ಹಾಗೆಯೇ ಭೂತದ ವೈಭವದಲ್ಲಿ ಮೈಮರೆಯುವವರೂ ಅಲ್ಲ. ಭವಿಷ್ಯದ ಕನಸುಗಳಲ್ಲಿ, ಕಲ್ಪನೆಗಳಲ್ಲಿ ತೇಲುವ ಭಾವಜೀವಿಯೂ ಅಲ್ಲ. ಸುಡು ಸುಡು ವರ್ತಮಾನವೇ ಅವರ ಪ್ರಧಾನ ಅಖಾಡ. ಭೂತ-ಭವಿಷ್ಯತ್ತುಗಳಿಗೆ ಹೋಗಿ ಬಂದರೂ, ಅವರು ಸೆಣಸುವುದು, ಪಟ್ಟಿಗೆ ಪಟ್ಟು ಹಾಕುವುದು ಈ ಡಂಕಲ್‌ಪೇಟೆಯಲ್ಲಿಯೇ. ಕುಂವೀ ಅವರಂಥ ಸೃಜನಶೀಲರಲ್ಲಿ ಬಳ್ಳಾರಿ ಉಸಿರಾಡುವುದು ಒಂದು ಚೆಲುವಾದರೆ, ಇಲ್ಲಿ ಬಳ್ಳಾರಿ ಕೊಸರಾಡುವುದು ಇನ್ನೊಂದು ಸೊಗಸು. ನೆಲದಲ್ಲಿ ಬೇರಿಳಿಸಿದ ಮರವೇ ಆಕಾಶಕ್ಕೆ ರೆಂಬೆಕೊಂಬೆ ಚಾಚುವುದು ಸಾಧ್ಯ. ವೀರೇಂದ್ರರ ಕತೆಗಳಲ್ಲಿ ಈ ಸತ್ಯ ಗೋಚರವಾಗುತ್ತದೆ.
ವೀರೇಂದ್ರ ರಾವಿಹಾಳ್‌ ಕಥಾ ಸಂಕಲನ “ಡಂಕಲ್‌ಪೇಟೆ”ಗೆ ಜಿ.ಪಿ. ಬಸವರಾಜು ಬರೆದ ಮುನ್ನುಡಿ

Read More

ಎದೆಗೆ ಬಿದ್ದ ಕಲ್ಲು!: ಮಧು ವೈ.ಎನ್.‌ ಹೊಸ ಕಾದಂಬರಿಯ ಪುಟಗಳು

ಅವತ್ತು ಎಗ್ಸಿಬಿಶನ್ ಇತ್ತು. ನಾವೆಲ್ಲ ಕ್ಲಾಸ್ ರೂಮಲ್ಲಿ ಮಾಡೆಲ್ ಜೋಡಿಸ್ಕೊಂಡು ನಿಂತಿದ್ವಿ. ನನ್ ಪಕ್ಕ ಹಾಸನದೋನು ಇದ್ದ. ಯೂಕಲಿಪ್ಟಸ್ ಆಯಿಲ್‌ನಿಂದ ಸೊಳ್ಳೆ ಓಡಿಸ್ತೀನಿ ಅನ್ನೊ ಪ್ರಾಜೆಕ್ಟ್ ಮಾಡ್ಕಂಡ್ ಬಂದಿದ್ದ. ಹೆದರಬೇಡಿ ಅಂಗಂದ್ರೆ ನೀಲಗಿರಿ ಎಣ್ಣೆ ಆಟೆಯಾ. ನಾನು ಇಂಗ್ಲೀಷಲ್ಲಿ ಏನೇನು ಒದರಬೇಕು ಅಂತ ಮನ್ಸಲ್ಲೆ ಮಗ್ ಹೊಡಿತಿದ್ದೆ. ಬರಂಗಿಲ್ವಲ್ಲ. ಆ ಕ್ಷಣಕ್ಕೆ ಒಳ್ಳೆ ಸಿನಿಮಾ ಸೀನ್ ತರಹ ಈ ಹುಡುಗಿ ಬಂದ್ ಬಿಡ್ತು. ಎಗ್ಸಿಬಿಶನ್ ಇದ್ದಾಗ ಸ್ಪೋರ್ಟ್ಸ್ ಇರಲ್ಲ. ಹಂಗಾಗಿ ನಾನು ಯುನಿಫಾರ್ಮಲ್ಲಿದ್ರೆ ಅದು ಟ್ರ್ಯಾಕ್ ಸೂಟಲ್ಲಿ ಮಿಂಚ್ತಾ ಇತ್ತು.
ಮಧು ವೈ.ಎನ್.‌ ಬರೆದ ಹೊಸ ಕಾದಂಬರಿ “ಕನಸೇ ಕಾಡುಮಲ್ಲಿಗೆ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಆರ್ಯಕನೆಂಬ ನಾಯಕ: ಸತೀಶ್‌ ತಿಪಟೂರು ಬರಹ

ನಾವು ಮಾಡುವ ರಂಗಕೃಷಿಯು ಪ್ರಾಮಾಣಿಕವಾಗಿದ್ದರೆ ಪ್ರತಿಕ್ಷಣವೂ ಹುಟ್ಟುವ ಅಹಂಕಾರವನ್ನು ವಿಸರ್ಜಿಸುತ್ತಲೇ ಇರುತ್ತದೆ ಎಂದು ಹೇಳಿದೆ. ಯಾರ ಸ್ಮೃತಿಗಳು ಸಮಾಜದ ನೋವಿನಿಂದ ಅದ್ದುಕೊಂಡಿರುತ್ತದೋ, ಸಮುದಾಯದ ಕಾಳಜಿಗಳಲ್ಲಿ ಬೆಸೆದುಕೊಂಡಿರುತ್ತದೋ, ಅಂತಹ ಪ್ರಕೃತಿಗಳು ಹಣ, ಅಧಿಕಾರ, ಪ್ರಭಾವಳಿಗಳಿಂದ ಒದಗಿಬರಬಹುದಾದ ಅಹಂಕಾರದಿಂದ ಮುಕ್ತವಾಗಿರುತ್ತದೆ. ಇಲ್ಲಿ ಯಾರ ಬೇರುಗಳು ಸಡಿಲವಾಗಿರುತ್ತದೋ ಅಂತಹವರ ಪ್ರಕೃತಿ ಪಲ್ಲಟವಾಗುತ್ತದೆ; ಮತ್ತು ಹಾಗೆ ಆದುದಕ್ಕೆ ಇರುವ ಕಾರಣಗಳನ್ನು ದೊಡ್ಡದು ಮಾಡುತ್ತಾ ತಮ್ಮ ಇರುವಿಕೆಗೆ ಸಮರ್ಥನೆಯನ್ನು ನೀಡುತ್ತದೆ ಎಂದು ಹೇಳಿದೆ. ಹಣ, ಅಧಿಕಾರ, ಪ್ರಭಾವಳಿಗಳನ್ನು ಧಾರಣೆ ಮಾಡಿಕೊಂಡು ಜೀರ್ಣಿಸಿಕೊಳ್ಳುವ ಶಕ್ತಿಬೇಕು.
ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಮತ್ತೊಂದು ಅಧ್ಯಾಯ ನಿಮ್ಮ ಓದಿಗೆ

Read More

ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

“ಅಸ್ತವ್ಯಸ್ತ ಹಸಿರೆಲೆಗಳು
ಸುಟ್ಟ ಕರಕಲು ಪಾದಗಳು
ರಕ್ತಸಿಕ್ತ ನಕ್ಷತ್ರಗಳು
ಸ್ವಾಗತಿಸುತ್ತಿವೆ
ನೀರವ ಇರುಳ ದೀಪಗಳನ್ನ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ