Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಕಾವ್ಯೋತ್ಸವದಲ್ಲಿ ಸ.ಉಷಾ ಅವರ ಉಪನ್ಯಾಸ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಕಾವ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ನಡೆಸಿದ ಕಾವ್ಯೋತ್ಸವದಲ್ಲಿ ಲಕ್ಷ್ಮೀಶನ ಜೈಮಿನಿ ಭಾರತದ ಕುರಿತು ಪ್ರೊ. ಸ. ಉಷಾ  ಅವರ ಮಾತುಗಳು ಇಲ್ಲಿವೆ. ಕೆಂಡಸಂಪಿಗೆಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು...

Read More

ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

“ಬಂದವರೆಲ್ಲ ತಲೆಸವರಿ
ಅಂಗೈ ತುರಿಕೆ
ತೀರಿಸಿಕೊಂಡು
ಹೊರಟುಬಿಡುತ್ತಾರೆ;
ತಲೆಯ ಮೇಲೆ
ಸತ್ತ ಮತ್ಸ್ಯದ ಶವ
ಕೇಶವಾಗಿ ಸಿಂಗರಿಸಿದೆ”-ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

Read More

ಕನ್ನಡಕ್ಕೆ ಬಂದ ತೆಲುಗಿನ ಕತೆಗಳ ಮುನ್ನುಡಿಯಿದು

ಜಾಗತಿಕ ಮುಕ್ತ ಮಾರುಕಟ್ಟೆಯ ಕಬಂಧ ಬಾಹುಗಳು ದೇಶದ ಅಧಿಕಾರಶಾಹಿಗಳ ಸ್ವಾರ್ಥ ರಾಜಕಾರಣದ ಬೆಂಬಲದೊಂದಿಗೆ ಚಾಚಿಕೊಂಡದ್ದರಿಂದಾಗಿ ರೈತರ ಬದುಕು ಮೂರಾಬಟ್ಟೆಯಾದ ಕಥೆಯನ್ನು ಹೇಳುವ ‘ಕೈಗೊಂಬೆ’, ಬೆವರು ಸುರಿಸಿ ಪ್ರಾಮಾಣಿಕವಾಗಿ ದುಡಿಯುವ ಶ್ರಮಜೀವಿಗಳ ಕಷ್ಟದ ದುಡಿಮೆಯನ್ನು ಸೊಳ್ಳೆಗಳು ರಕ್ತ ಹೀರುವಂತೆ ದರೋಡೆಗೈದು ಅವರ ಬದುಕನ್ನು ನರಕಸದೃಶವಾಗಿಸುವ ಭ್ರಷ್ಟಾಚಾರಿ ಅಧಿಕಾರಿವರ್ಗದವರ ಅನ್ಯಾಯದ ಜಾಲವನ್ನೂ ಅಲ್ಲಿ ಸೃಷ್ಟಿಯಾಗುವ ಹೃದಯವಿದ್ರಾವಕ ಸನ್ನಿವೇಶಗಳನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಕಥೆ ‘ನಿಗೂಢ ಹಸ್ತಗಳು’.
ತೆಲುಗು ಕತೆಗಾರ ಪೆದ್ದಿಂಟಿ ಅಶೋಕ್‌ ಕುಮಾರ್‌ ಅವರ ಒಂದಷ್ಟು ಕತೆಗಳನ್ನು “ಜಾಲ” ಎಂಬ ಸಂಕಲನದ ಮೂಲಕ ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಅದಕ್ಕೆ ಡಾ. ಪಾರ್ವತಿ ಜಿ. ಐತಾಳರು ಬರೆದ ಮುನ್ನುಡಿ ಇಲ್ಲಿದೆ.

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕತೆ

ಈ ಮನು ಹಾಗೇನೆ ತಲೆಗೇನಾದ್ರೂ ಬಂತಂದ್ರೇ ಪಟ್ಟು ಹಿಡಿದು ಮಾಡದೆ ಬಿಡೋನಲ್ಲ. ಅಷ್ಟೇ ಜಲ್ದಿನೂ ಯಾವಾಗ್ಲೂ. ಅವನು ಹೋದಲ್ಲೆಲ್ಲಾ ನಗುವಿನ ಬುಗ್ಗೆ. ಅವನಿದ್ದಲ್ಲೆಲ್ಲಾ ಗದ್ದಲ, ಖುಷಿ, ಸಂಭ್ರಮ ಯಾವತ್ತೂ. ಸಾಮಾನ್ಯ ನಾವಿಬ್ರೂ ಬೈಕ್ನಲ್ಲಿ ಹೊರಟರೆ ತನಗಿಷ್ಟವಾದ ಸಿನಿಮಾದ್ದೋ ಇಲ್ಲ ನಾಟಕದ್ದೋ ಡೈಲಾಗ್ಸ್ ಹೇಳ್ತಿರ್ತಾನೆ. ಇಲ್ಲಾಂದ್ರೆ ಆಯಾ ಸಿಚುಯೇಷನ್‌ಗೆ ತಕ್ಕನಾಗಿ ಹಾಡ್ತಾ ಇರ್ತಾನೆ, ಅದೂ ಇಲ್ಲ ಅಂದ್ರೆ ದಾರೀಲಿ ಹೋಗೋ ಬರೋರ್ನೆಲ್ಲಾ ಕಾಡೋಕೆ ಶುರು ಮಾಡ್ತಾನೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಜಾಹ್ನವಿ ಬಿ.ಟಿ. ಬರೆದ ಕಥೆ “ನೆರೆ ಹಾವಳಿ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ