Advertisement

ಕ್ಷಮಾ ವಿ. ಭಾನುಪ್ರಕಾಶ್

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ… ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು ಕಾಣಿಸಿಕೊಂಡಿತ್ತು ಅಷ್ಟೆ. ಈಗ ಹುಷಾರಾಗಿದ್ದಾಳೆ’ ಎಂದರು. ಹುಂ… ಮಕ್ಕಳಿಗೆ ಇದೆಲ್ಲಾ ಗೊತ್ತಾಗಬಾರದು ಅಂತ ದೊಡ್ಡವರು ಹೀಗೆ ಸುಳ್ಳು ಹೇಳೋದು ಸಹಜವಲ್ಲವೇ..? ಚಿಕ್ಕಮ್ಮನನ್ನು ಡಿಸ್ಚಾರ್ಜ್ ಮಾಡಿಸಿಕೊಂಡು ಮನೆಗೆ ಕರೆದುಕೊಂಡು ಬಂದ ಕೆಲದಿನಗಳಲ್ಲಿ, ಮನೆಯಲ್ಲಿ ನಡೀತಾ ಇದ್ದ ಮಾತುಕತೆಗಳಿಂದಲೇ ತಿಳಿಯಿತು ಚಿಕ್ಕಮ್ಮ ಆತ್ಮಹತ್ಯೆಗೆ ಯತ್ನಿಸಿದ್ದರು ಅಂತ! ಯಾರೋ ಬಸ್ ಕಂಡೆಕ್ಟರ್ ಅಂತೆ.. ಗಾಢವಾಗಿ ಪ್ರೀತಿಸಿದ್ರಂತೆ..
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಬದುಕೆಂದರೆ ಹೀಗೇನೆ….

ಮನೆ ಭಾಗವಾದಾಗ ಮಧ್ಯಕ್ಕೆ ಪೂರ್ತಿ ಗೋಡೆ ಕಟ್ಟದೆ ಅಟ್ಟದವರೆಗೆ ಮಾತ್ರ ಕಟ್ಟಿದ್ದರಿಂದ‌ ಅಟ್ಟ ಎಲ್ಲರಿಗೂ ಒಂದೆ ಇತ್ತು ಹಾಗಾಗಿ ಪಕ್ಕದ ಮನೆಯಲ್ಲಿ ಮಾತಾಡುವುದೆಲ್ಲ ಪಕ್ಕದಲ್ಲೆ ಮಾತಾಡಿದಷ್ಟು ಸ್ಪಷ್ಟವಾಗೆ ಕೇಳುತ್ತಿತ್ತು. ಸಾವಿ ನಿದ್ದೆ ಬಾರದೆ ಗಂಡನನ್ನು ಹೇಗಾದರು ಮಾಡಿ ಸೂಳೆ ಸಹವಾಸ ಬಿಡಿಸಿ ನನ್ನ ಕಡೆ ಸೆಳೆಯಬೇಕೆಂದು ಯೋಚಿಸುತ್ತಿದ್ದಳು. ಪಕ್ಕದ ಮನೆಯಲ್ಲಿ ಮಾವ ಅಕ್ಕಂದಿರು ತನ್ನ ಗಂಡನ ಬಗ್ಗೆ ಪಿಸುಗುಡುವುದು ಗೊತ್ತಾಗುತಿತ್ತು. ಸಾವಿತ್ರಿ ತನಗರಿವಿಲ್ಲದೆ ಶೋಕಿಸುತ್ತ ಮಗಳು ಕನಕಳನ್ನು ತಬ್ಬಿ ಕಣ್ಣು ಮಿಟುಕಿಸಿದಾಗ ಕಣ್ತುಂಬಿದ್ದ ಅಶ್ರು ದಳದಳನೆ ಇಳಿದು ಎಣ್ಣೆ ಜಿಡ್ಡು ಮೆತ್ತಿ ಕೊಳಕಾಗಿದ್ದ ತಲೆದಿಂಬು ಸಹ ಅದನ್ನು ಹೀರದೆ ಕೆಳಕ್ಕೆ ಹರಿದವು.
ನಗೋಲತೆ ಬರೆದ “ಬೆದ್ಲು ಬದ್ಕು” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮಾಲತಿ ಶಶಿಧರ್ ಬರೆದ ಯುಗಾದಿ ಕವಿತೆ

“ಆಹಾ ಏನೆಲ್ಲಾ ಹೇಳುತ್ತಾನೆ ಅಪ್ಪ
ಅವನು ಕಾಲ ಗತಿಸಿದ ಹಾದಿಗೆ
ಇನ್ನು ಮರಳಲಿಲ್ಲ ಎನಿಸುವಾಗಲೆಲ್ಲಾ
ನನ್ನ ಕಾಲಮಾನದ ವೇಗದಲಿ
ಅಪ್ಪನ ಚಕ್ರ ಗಾಳಿ ಕಳೆದುಕೊಂಡಿರುವ ಚಿತ್ರ
ಕಣ್ಣಿಗೆ ಬೀಳುತ್ತದೆ”- ಮಾಲತಿ ಶಶಿಧರ್ ಬರೆದ ಯುಗಾದಿ ಕವಿತೆ

Read More

ಏಸ್ಕೈಲಸ್‌ ನ ಒರೆಸ್ಟಿಯಾ ನಾಟಕ ತ್ರಿವಳಿಯನ್ನು ಆಧರಿಸಿದ ನಾಟಕ “ಒರೆಸ್ತಿಸ್ ಪುರಾಣ”

ನೀನಾಸಮ್ ನಾಟಕ ೨೦೧೫‌ ಪ್ರಸ್ತುತಪಡಿಸುವ ಏಸ್ಕೈಲಸ್‌ ನ ಒರೆಸ್ಟಿಯಾ ನಾಟಕ ತ್ರಿವಳಿಯನ್ನು ಆಧರಿಸಿದ ನಾಟಕ “ಒರೆಸ್ತಿಸ್ ಪುರಾಣ”
ಕನ್ನಡ ಅನುವಾದ: ಡಾ|| ವಿಜಯಾ ಗುತ್ತಲ ನಿರ್ದೇಶನ: ಬಿ ಆರ್‌ ವೆಂಕಟರಮಣ ಐತಾಳ ಸಂಗೀತ: ಎಂ ಪಿ ಹೆಗಡೆ ಮತ್ತು ಭಾರ್ಗವ ಕೆ ಎನ್

ಕೃಪೆ: ಸಂಚಿ ಫೌಂಡೇಷನ್

Read More

ಸಿಕಾಡ- ಕೀಟಲೋಕದ ಸಂಗೀತಸಾಮ್ರಾಟ

ಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ ಹೆಣ್ಣುಸಿಕಾಡವು ಈ ಆಹ್ವಾನವನ್ನು ಒಪ್ಪಿ ಬಳಿಬಂದರೆ ಆಗ ಗಂಡು ಸಿಕಾಡವು ಹಾಡುವ ಹಾಡೇ ಬೇರೆ, ಅಕಸ್ಮಾತ್ ಆ ಆಹ್ವಾನ ತಿರಸ್ಕೃತಗೊಂಡರೆ ಮತ್ತೊಂದು ಶೋಕರಾಗವನ್ನು ಹೊರಡಿಸುತ್ತದೆ ಗಂಡು ಸಿಕಾಡ.
ಕ್ಷಮಾ ವಿ. ಭಾನುಪ್ರಕಾಶ್‌ ಬರೆದ ವಿಜ್ಞಾನ ಲೇಖನಗಳ ಸಂಕಲನ “ಜೀವಿವಿಜ್ಞಾನ”ದಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ