ಲಿಂಗರಾಜ ಸೊಟ್ಟಪ್ಪನವರ ಬರೆದ ಈ ದಿನದ ಕವಿತೆ
“ಆ ಹಾಲು ಹಸುಳೆಯ ವಂಚಿಸಿದೆ
ಹೆಪ್ಪಿಟ್ಟರೂ ಮೊಸರಾಗುವದಿಲ್ಲವದು
ಇಲ್ನೋಡು
ಪಾಪಿ ಆತ್ಮಗಳಿಗೆ ಅಮೃತವ ಸುರಿಸುರಿದು ಸೋತು ಹೋಗಿವೆ
ಈ ಜೋತು ಬಿದ್ದ ಪಡಿಪಾಟಲಿಗೆ
ಒಂದಿಷ್ಟು ಕರುಣೆ ಸುರಿ ಮಾರಾಯ”- ಲಿಂಗರಾಜ ಸೊಟ್ಟಪ್ಪನವರ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Mar 10, 2023 | ದಿನದ ಕವಿತೆ |
“ಆ ಹಾಲು ಹಸುಳೆಯ ವಂಚಿಸಿದೆ
ಹೆಪ್ಪಿಟ್ಟರೂ ಮೊಸರಾಗುವದಿಲ್ಲವದು
ಇಲ್ನೋಡು
ಪಾಪಿ ಆತ್ಮಗಳಿಗೆ ಅಮೃತವ ಸುರಿಸುರಿದು ಸೋತು ಹೋಗಿವೆ
ಈ ಜೋತು ಬಿದ್ದ ಪಡಿಪಾಟಲಿಗೆ
ಒಂದಿಷ್ಟು ಕರುಣೆ ಸುರಿ ಮಾರಾಯ”- ಲಿಂಗರಾಜ ಸೊಟ್ಟಪ್ಪನವರ ಬರೆದ ಈ ದಿನದ ಕವಿತೆ
Posted by ಕೆಂಡಸಂಪಿಗೆ | Mar 10, 2023 | video of the day |
ಡಾ. ಗೀತಾ ವಸಂತ ಅವರಿಂದ ಜಿ. ಎಸ್. ಶಿವರುದ್ರಪ್ಪ ಅವರ ಭಿಮಾಲಾಪ ಕವಿತೆಯ ವಿಶ್ಲೇಷಣೆ
ಕೃಪೆ: ಡಾ. ಗೀತಾ ವಸಂತ
Read MorePosted by ಕೆಂಡಸಂಪಿಗೆ | Mar 9, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಕಥಾಗತವನ್ನು ಓದುತ್ತಾ ಹೋದಂತೆ ಇಂದಿನ ಕಾಲಮಾನದಿಂದ ಕೊಂಡೊಯ್ಯುವ ಕಲೆ ಡಾ. ನವೀನ್ ಅವರು ಸಿದ್ಧಿಸಿಕೊಂಡದ್ದು ವೇದ್ಯವಾ ಆಶ್ಚರ್ಯವಾಗುತ್ತದೆ. ಜೊತೆಗೆ ತಮಿಳಿನ ಕುರಿತಾದ ಭಾವನೆ ಸ್ಪುಟವಾಗುವುದು ಮಧ್ಯದಲ್ಲಿ, ಮಹಾಬಲಿಪುರವನ್ನು ಚಾಳುಕ್ಯರ ಶಿಲ್ಪಕ್ಕೆ ತಂದು ನಿಲ್ಲಿಸುವ ತುಲನೆಯ ಜೊತೆಗೆ ಒಂದು ವಿಷಾದ ಹೊರಹೊಮ್ಮುತ್ತದೆ. ಸುನಾಮಿಯ ಹೊಡೆತಕ್ಕೆ ಮುಲು ಇದು ಸಿಗಲಾರದೇನೋ ಎನ್ನುವ ಭಾವನೆ ಕೆದಕುತ್ತದೆ. ಮಗಧ ಮಹಾಜನಪದ ಇರಬಹುದು ನಾಲಂದಾ ಇರಬಹುದು, ಇವರ ಬರಹದಲ್ಲಿ ಕಾಡಿ ಕೆದಕುತ್ತದೆ.
ನವೀನ ಗಂಗೋತ್ರಿ ಕಥಾಸಂಕಲನ “ಕಥಾಗತ”ಕ್ಕೆ ಸದ್ಯೋಜಾತ ಭಟ್ಟ ಬರೆದ ಮುನ್ನುಡಿ
Posted by ಕೆಂಡಸಂಪಿಗೆ | Mar 8, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ಹೆಣ್ಣು ಮಾಡುವುದೆಲ್ಲ ಕಾಯಕವೇ ಎಂದು ತಮ್ಮ ಬಾಲ್ಯದಿಂದ ತಾವು ಇಂದಿನವರೆಗೆ ಕಂಡ ಹೆಂಗಸರನ್ನೆಲ್ಲ ಪುರುಷರು ನೆನೆದರು. ಯಾವ ಸ್ವಾರ್ಥವೂ ಇಲ್ಲದೆ, ಕಾಯಕ ಎಂಬ ಹೆಸರಿಲ್ಲದೆ, ಗುರುತಿಲ್ಲದೆ, ಸಂಭಾವನೆಯಿಲ್ಲದೆ, ರಜೆಯಿಲ್ಲದೆ, ವಿರಾಮವಿಲ್ಲದೆ ಸಾಯುವ ತನಕ ಒಂದಲ್ಲ ಒಂದು ಕೆಲಸ ಮೈಮೇಲೆಳೆದುಕೊಂಡು ಮಾಡುವ ಹೆಂಗಸರಿಲ್ಲದಿದ್ದರೆ ಲೋಕ ನಡೆಯುವುದೇ ಇಲ್ಲ ಎಂದ ಮಾರಯ್ಯ. ತನ್ನ ತಾಯಿಯು ಏನಾದರೂ ಮಾತಾಡುವಾಗ, ಕತೆ ಹೇಳುವಾಗ ಕೈಗೊಂದು ಕೆಲಸ ಅಂಟಿಸಿಕೊಂಡುಬಂದು ಕೂರುತ್ತಿದ್ದಳೆಂದೂ, ಕೆಲಸವಿಲ್ಲದಿದ್ದರೆ ಅವಳ ಬಾಯಿಂದ ಮಾತೇ ಬರುತ್ತಿರಲಿಲ್ಲವೆಂದೂ ಉಗ್ಘಡಿಸುವ ಗುಬ್ಬಿದೇವಯ್ಯ ನೆನಪಿಸಿಕೊಂಡು ಹೇಳಿದ.
ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಡಾ. ಎಚ್.ಎಸ್. ಅನುಪಮಾ ಅವರ “ಬೆಳಗಿನೊಳಗು ಮಹಾದೇವಿಯಕ್ಕ” ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ
Posted by ಕೆಂಡಸಂಪಿಗೆ | Mar 6, 2023 | ದಿನದ ಪುಸ್ತಕ, ಪುಸ್ತಕ ಸಂಪಿಗೆ |
ನೀರಿಗೆಂದು ಅಗೆದಾಗ ದ್ರವರೂಪದ ಚಿನ್ನ ಎನ್ನಿಸಿದ ಪೆಟ್ರೋಲ್ ಸಿಕ್ಕರೆ? ಕರ್ನಾಟಕದಲ್ಲಿ ಕಂಡಕಂಡೆಡೆ ಬೋರ್ವೆಲ್ ತೋಡುತ್ತಿರುವ ನೀರ್ ಸಾಬರು ಎನ್ನಿಸಿರುವ ನಜೀರ್ ಸಾಬರೂ ಕಡಿಮೆ ಆಗುತ್ತಿರುವ ನೀರಿನ ಮಟ್ಟವನ್ನು ಗಣಿಸದೆ ಬೋರ್ವೆಲ್ ತೋಡುವ ಕೆಲಸವನ್ನು ಇನ್ನೂ ಚುರುಕುಗೊಳಿಸಿದರೆ ನೀರಿಗೆ ಬದಲು ನಮಗೂ ಪೆಟ್ರೋಲ್ ಸಿಕ್ಕರೆ ನೀರ್ಸಾಬರು ಪೆಟ್ರೋಲ್ ಸಾಬ್ ಆಗಬಹುದು. ಕಾವೇರಿ ಬೇಸಿನ್ನಲ್ಲಿ ತೈಲ ಸಿಕ್ಕ ಸುದ್ದಿ ಆಗಾಗ್ಗೆ ಬರುತ್ತಿರುವಾಗ ಕರ್ನಾಟಕಕ್ಕೇಕೆ ಈ ದ್ರವರೂಪದ ಚಿನ್ನ ಬೇಡ? `ಬೋರ್ವೆಲ್’ ತೋಡುವುದು ಹೆಚ್ಚಾಗಬಹುದು.
ಜೋಗಿ ಸಂಪಾದಿಸಿದ “ವೈಯೆನ್ಕೆ UNLIMITED ವಾಚಿಕೆ” ಕೃತಿಯ ಆಯ್ದ ಬರಹ ನಿಮ್ಮ ಓದಿಗೆ
ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ
editor@kendasampige.comಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿ
