Advertisement

ಕ್ಷಮಾ ವಿ. ಭಾನುಪ್ರಕಾಶ್

ಅರ್ಚನಾ ಎಚ್‌. ಬರೆದ ಎರಡು ಕವಿತೆಗಳು

“ಅದೆಷ್ಟು ನೋವುಗಳ ಹುದುಗಿಸಿತ್ತೋ ಅದು!?
ಇರುಳ ಆಪ್ತ ಸಂಗಾತಿ..!!
ಬೋರೆ ಬಿದ್ದು ಅವಡುಗಚ್ಚಿ
ಅವುಚಿದ ಮುಖ, ಹುದುಗಿದ್ದು ಅದರೊಳಗೆ….!
ಕಣ್ಣೀರ ಹೀರಿ; ಒಡಲ ಬೆಚ್ಚಗಪ್ಪುಗೆ
ನೀಡುತ್ತಾ….. ಮತ್ತವನ ಸಖ್ಯ ಜ್ಞಾಪನ!!”- ಅರ್ಚನಾ ಎಚ್‌. ಬರೆದ ಎರಡು ಕವಿತೆಗಳು

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕತೆ

ಭಾಳ ಸಿಹಿಸುದ್ದಿಯೇನೂ ಅಲ್ಲ. ಆದರೂ, ಕಹಿಯಂತೂ ಅಲ್ಲಲ. ತೇರಿಗೆ ಹೂವುಹಣ್ಣು ಹಾಕವರಿದ್ರ ಇವತ್ತೇ ತಗೊಂಡು ತಯಾರಾಗ್ರಿ. ನಾಳೆ ಶಿಗತಾವೋ ಇಲ್ಲೋ. ಭಯಂಕರ ತುಟ್ಟಿನು ಇರತಾವು. ಬಿಸಿಲು ಏರಾಕ ಹೊಂಟೈತಿ. ಜರಾ ಚಹಾ ಕುಡೀತಿರೇನು ನೋಡ್ರಿ, ಹೇಳುತ್ತ ತಾನೂ ಹಗುರಾದಂತೆ ಬೋಲ್ಡಿ ಬಾಬಾ ಕೊಳವೆಗೆ ತಂಬಾಕು ತುಂಬಿ ಕಿಡಿ ಹಚ್ಚಿದ. ರುಕುಮವ್ವ, ಚಂದ್ರವ್ವಳನ್ನು ಕೈಯಿಂದ ಎಳೆದುಕೊಳ್ಳುತ್ತ ಬೆನ್ನು ಸವರಿ, ಸಮಾಧಾನ ಆತಿಲ್ಲವಾ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೇಶವ ಮಳಗಿ ಬರೆದ ಕಥೆ

Read More

ನೀಲಾಕಾಶದ ನಿಹಾರಿಕೆಗಳ ನೋವು ತಿಳಿದಿರಲಿ…

ಚಾಂದ್ ಪಾಷಾರಿಗೆ ಇರುವ ಸವಾಲೆಂದರೆ ಒಂದು mood ಅಥವಾ ಒಂದು ಹೊಳಹನ್ನು ಎಷ್ಟು ಸಶಕ್ತವಾಗಿ ಹೇಳಬಲ್ಲರೋ ಅದೇ ಸಾಮರ್ಥ್ಯವನ್ನು ಸಂಕೀರ್ಣ ವಸ್ತುವಿನ ನಿರ್ವಹಣೆಯಲ್ಲಿಯೂ ಸಾಧಿಸಬೇಕಾಗುತ್ತದೆ. ಹೇಳಿದ್ದನ್ನು ಚುರುಕಾಗಿ, ಪ್ರಭಾವಿಯಾಗಿ ಹೇಳುವುದು ಎಷ್ಟು ಮುಖ್ಯವೋ ಕಾವ್ಯದಲ್ಲಿ ಒಂದು ಅನುಭವವನ್ನು ಸಾಂದ್ರವಾಗಿ ಗಂಭೀರ ಚಿಂತನೆಯೊಂದಿಗೆ ಅಭಿವ್ಯಕ್ತಿಸುವುದು ಅಷ್ಟೇ ಮುಖ್ಯ. ಈ ಹಿಂದಿನ ಸಂಕಲನಗಳಲ್ಲಿ ಮತ್ತು ಪ್ರಸ್ತುತ ಕೃತಿಯಲ್ಲಿ ಈ ಸಾಮರ್ಥ್ಯದ ಝಲಕುಗಳನ್ನು ಚಾಂದ್‌ ಪಾಷಾ ತೋರಿದ್ದಾರೆ.
ಚಾಂದ್‌ ಪಾಷ ಎನ್.ಎಸ್. ಕವನ ಸಂಕಲನ “ಒದ್ದೆಗಣ್ಣಿನ ದೀಪ”ಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

“ಮುಕ್ತಿ” ಒಂದು ಟಿಪ್ಪಣಿ: ಯಶವಂತ ಚಿತ್ತಾಲ

ಈ ಕೊನೆಯೇ ಗೌರೀಶ-ಡೊಲಿಯರ ನಡುವಿನ ಸಂಬಂಧದ ನೈತಿಕತೆಯನ್ನು ನಿಶ್ಚಯಿಸಬೇಕು. ನಿಜವಾಗಿ ನೋಡಿದರೆ, ಕಾದಂಬರಿಯ ಹೆಸರು ಮುಕ್ತಿ-ಕಾದಂಬರಿಯ ಆರಂಭದಲ್ಲಿ ತೋರುವ ಭೂತಕಾಲದಿಂದ ಪಡೆಯಲಿಚ್ಚಿಸುವ ಬಿಡುಗಡೆಗಿಂತ ಹೆಚ್ಚಾಗಿ ಗೌರೀಶನನ್ನು ಜೀವನಾಭಿಮುಖಿಯನ್ನಾಗಿ ಮಾಡಿದ ಈ ಹೊಸ ಸಂಬಂಧದಿಂದ ಸಾರ್ಥಕಗೊಳ್ಳುತ್ತದೆ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯ ಯಶವಂತ ಚಿತ್ತಾಲರ ಬರಹ ನಿಮ್ಮ ಓದಿಗೆ

Read More

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ