Advertisement

ಕ್ಷಮಾ ವಿ. ಭಾನುಪ್ರಕಾಶ್

ಶಾಂತಿನಾಥರೊಂದಿಗೆ ಸ್ಕಾಚ್…

ಶಾಂತಿನಾಥರ ಸಾಹಿತ್ಯ ಆಗಿನ ಕಾಲಕ್ಕೂ ಹೊಸ ಮತ್ತು ಯಾರೂ ಪ್ರಯತ್ನಿಸಿರದ ಆಯಾಮಗಳನ್ನು ತೆರೆದಿಡುತ್ತಿತ್ತು ಎನ್ನುವುದು ನಿಜ. ಹೀಗೆ ಮಡಿವಂತಿಕೆಯೇ ಇಲ್ಲದೇ ಬರೆಯುತ್ತಿದ್ದ ಶಾಂತಿನಾಥರು ಯಾವುದೇ ವಿವಾದಕ್ಕೆ ಒಳಗಾಗಲಿಲ್ಲ. ತಮ್ಮಷ್ಟಕ್ಕೆ ತಾವು ನಿರ್ಭಿಢೆಯಿಂದ ಬರೆದರು. ತಮ್ಮ ವಿಸ್ತಾರವಾದ ಸಾಹಿತ್ಯ- ಮಾನಸಶಾಸ್ತ್ರ – ಸಮಾಜಶಾಸ್ತ್ರ – ರಾಜಕೀಯದ ಓದು ಮತ್ತು ಒಳನೋಟಗಳ ಹಿನ್ನೆಲೆ ಅವರ ಕಥೆಯ ಕಟ್ಟುವಿಕೆಯಲ್ಲಿದೆ.
“ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿ ಎಂ.ಎಸ್.ಶ್ರೀರಾಮ್ ಬರೆದ ಲೇಖನ ನಿಮ್ಮ ಓದಿಗೆ

Read More

“ಹಸ್ತಿನಾವತಿ”: ಇದು ಭಾರತದ ಕಥೆ….

ಆ ಚುನಾವಣೆಯಲ್ಲಿ ಸಂಜಯ್ ಸರ್ಕಾರ್ ಸ್ಪರ್ಧಿಸಿದ್ದರೆ ಬಹುಮತದಿಂದ ಗೆದ್ದು ಬರುತ್ತಿದ್ದರು. ಅವರು ಆ ಕೆಲಸ ಮಾಡಲಿಲ್ಲ. ನ್ಯಾಷನಲ್ ಪಾರ್ಟಿಯೇ ಮತ್ತೆ ಅಧಿಕಾರಕ್ಕೆ ಬರುವತನಕ ಕಾದರು. ನಂತರ ಸರ್ಕಾರದ ಲೋಪಗಳನ್ನು ಎತ್ತಿ ತೋರಿದರು. ನ್ಯಾಷನಲ್ ಪಾರ್ಟಿಯ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದಂತೆ, ಸಂಜಯ್ ಸರ್ಕಾರ್ ತಮ್ಮ ಹೊಸ ಪಕ್ಷವನ್ನು ಹುಟ್ಟುಹಾಕಿದರು. ಅದಕ್ಕೆ ಮಾತೃಭೂಮಿ ಎಂದು ಹೆಸರಿಟ್ಟರು. ಸಂಜಯ್ ಸರ್ಕಾರ್ ಜತೆ ಹೋರಾಟದ ಉದ್ದಕ್ಕೂ ಜತೆಗಿದ್ದ ಚಿದಾನಂದ ಪಾಂಡೆಯನ್ನು ಪಕ್ಷದ ಅಧ್ಯಕ್ಷರೆಂದು ಘೋಷಿಸಿದರು.
ನೆನ್ನೆಯಷ್ಟೇ ಬಿಡುಗಡೆಯಾದ ಜೋಗಿಯವರ ಕಾದಂಬರಿ “ಹಸ್ತಿನಾವತಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮಿಲ್ಟ್ರಿ ಟ್ರಂಕೊಳಗಿನ ಕಥೆಗಳು….

ಇಲ್ಲಿ ಅಧಿಕಾರ ಕೇಂದ್ರವಿರುವ ದಕ್ಷಿಣದ ಕರ್ನಾಟಕದ ಎದುರು, ಉತ್ತರ ಕರ್ನಾಟಕ ವಿಶಿಷ್ಟವಾದ ಭಾಷೆಯನ್ನಾಗಲಿ ಅನುಭವವನ್ನಾಗಲಿ ವೈಭವೀಕರಿಸುವುದಿಲ್ಲ, ಇಲ್ಲವೇ ಕೀಳೀಕರಿಸುವುದಿಲ್ಲ. ತನ್ನ ಪಾಲಿಗೆ ಕನ್ನಡ ನಾಡಿನ ಬದುಕೆಲ್ಲ ಒಂದೇ ಎಂಬ ಸಮದರ್ಶಿಯಾದ ದೃಷ್ಟಿಕೋನವು ಇಲ್ಲಿ ಕೆಲಸಮಾಡುತ್ತದೆ. ಹೀಗಾಗಿ ಇಲ್ಲಿನ ಸ್ಮೃತಿಚಿತ್ರಗಳು ರೋಚಕವಾದ ಅನುಭವವನ್ನು ಮಂಡಿಸಿ ಓದುಗರನ್ನು ರಂಜಿಸುವುದಕ್ಕೆ ಉತ್ಸುಕವಾಗುವುದಿಲ್ಲ. ಎಲ್ಲ ಭಾಗದ ಜೀವನದಲ್ಲಿರುವ ವಿಷಾದಕರ ದುರಂತಗಳನ್ನು ದಾಖಲಿಸುತ್ತವೆ. ಜನರ ಹಸಿವು ಬಡತನ ದುಡಿಮೆ ಹೋರಾಟ ಜೀವಂತಿಕೆಗಳನ್ನು ತಾಳ್ಮೆಯಿಂದ ಘನತೆಯಿಂದ ಕಾಣಿಸುತ್ತವೆ.
ಡಾ. ಲಕ್ಷ್ಮಣ ವಿ.ಎ. ಬರಹಗಳ ಸಂಕಲನ “ಮಿಲ್ಟ್ರಿ ಟ್ರಂಕು”ಕ್ಕೆ ರಹಮತ್‌ ತರೀಕೆರೆ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ