Advertisement

ಕ್ಷಮಾ ವಿ. ಭಾನುಪ್ರಕಾಶ್

ಗೋಕುಲದ ನಾಯಕರು ನಾವು….

ನಾನು ಒಂಟಿಯಾಗುತ್ತಿದ್ದಂತೆ ಮೊನ್ನೆಯ ಸಮುದ್ರ ತೀರದ ಹತ್ಯಾಕಾಂಡ ನೆನಪಾಯಿತು, ವಿಷಾದವಾಯಿತು. ಒಂದು ಕ್ಷಣ ಅರಮನೆಗೆ ಹೋಗಿಬಿಡಲೇ ಎನ್ನಿಸಿತು. ಅಲ್ಲಿ ಇನ್ನು ನನಗೇನು ಕೆಲಸ? ಎಂಬ ಪ್ರಶ್ನೆ ಮೂಡಿತು. ನಿನ್ನೆಯ ಹತ್ಯಾಕಾಂಡದ ಆರಂಭವನ್ನು ನೋಡಿದರೆ, ಬಹುಶಃ ಯಾದವ ಮುಖ್ಯರಲ್ಲಿ ಯಾರೂ ಬದುಕಿರಲಾರರು. ನಗರದಲ್ಲಿ, ಅರಮನೆಯಲ್ಲಿ ನನಗಿಂತ ಮುದುಕರಾದ ಕೆಲವರಿರಬಹುದು. ಈಗ ನಾನು ಮಾಡಬೇಕಾದ ಮಹತ್ವದ ಕರ‍್ಯ ಯಾವುದೂ ಇಲ್ಲ, ಸಾಧಿಸಬೇಕಾದ ಯಾವ ಆದರ್ಶವೂ ಇಲ್ಲ. ಅಂಥ ಶಕ್ತಿ, ಉತ್ಸಾಹಗಳೂ ದೇಹದಲ್ಲಿ ಉಳಿದಿಲ್ಲ.
ಸು. ರುದ್ರಮೂರ್ತಿ ಶಾಸ್ತ್ರಿ ಬರೆದ ಹೊಸ ಕಾದಂಬರಿ “ಶ್ರೀಕೃಷ್ಣ”ದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

“ನೀವು ಕೈ ಹಿಡಿದು
ಸುತ್ತಾಡಿಸಿದ ಪೇಟೆ ಬೀದಿಯಲ್ಲಿ
ಈಗ ಕೊಳ್ಳಲು ನಿಂತರೆ
ಜೇಬೆಲ್ಲ ಖಾಲಿ, ಅದರ ಹಿಂದೆಯೇ
ಪರ್ಸು ಜಾಗ್ರತೆ ಎಂಬ
ಎಚ್ಚರಿಕೆಯ ದನಿ.”- ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

Read More

ಕೆ.ವಿ. ತಿರುಮಲೇಶರು ಇನ್ನಿಲ್ಲ…

ಮನುಷ್ಯ ಸಮಾಜಕ್ಕೆ ಐಡೆಂಟಿಟಿಯನ್ನು ನೀಡುವುದು ಭಾಷೆಯೊಂದೇ ಅಲ್ಲ, ಸಾಮೂಹಿಕವಾದ ಧರ್ಮ, ಜಾತಿ, ಆಚಾರ ವಿಚಾರಗಳು, ಸಂಸ್ಕಾರಗಳು, ಕಲೆಗಳು, ನಿಷೇಧಗಳು, ನಂಬಿಕೆಗಳು, ದೇವಳಗಳು, ಮಠಗಳು, ನಿತ್ಯಕರ್ಮಗಳು, ಸ್ತ್ರೀಯರ ಸ್ಥಾನ ಮಾನ ಇತ್ಯಾದಿ ಹಲವಾರು ವಿಷಯಗಳು ಸಮಾಜದ ಗುರುತನ್ನು ರೂಪಿಸುತ್ತವೆ. ಕಾಸರಗೋಡಿನಲ್ಲಿ ಗುಡಿಗಳು, ದೇವಸ್ಥಾನಗಳು, ಭೂತಸ್ಥಾನಗಳು, ಮಸೀದಿಗಳು, ಇಗರ್ಜಿಗಳು ನಿಬಿಡವಾಗಿವೆ. ಇವೆಲ್ಲವೂ ಸುಖಶಾಂತಿಯಿಂದ, ಆದರ್ಶಕರವಾಗಿ ಯಾವತ್ತೂ ಸಹಬಾಳ್ವೆ ನಡೆಸುತ್ತಿವೆ ಎನ್ನಲಾರೆ.
ಇಂದು ಮುಂಜಾನೆ ಕನ್ನಡದ ಪ್ರಮುಖ ಬರಹಗಾರರಲ್ಲಿ ಒಬ್ಬರಾದ ಕೆ.ವಿ. ತಿರುಮಲೇಶರು ತೀರಿಹೋದರು. ಕೆಂಡಸಂಪಿಗೆಯೊಡನೆ ಅವರ ನಂಟು ಅನನ್ಯ. ನಮ್ಮ ಓದುಗರಿಗಾಗಿ ಅವರು ಬರೆದ ಕೆಲವು ಬರಹಗಳನ್ನು ಇಲ್ಲಿ ಹಂಚಿಕೊಳ್ಳಲಾಗಿದೆ…

Read More

ಕನಸು ಸಾಕಿಕೊಂಡವರ ಕಣ್ಣ ದೀಪದೆದುರು…

ಕನ್ನಡದ ಪ್ರಮುಖ ಬರಹಗಾರ ಪಿ.ಲಂಕೇಶ್ ಹೇಳುವಂತೆ ಒಬ್ಬ ಬರಹಗಾರನ ಭಾಷೆಯೇ ಆತನ ಅಸಲಿ ಮತ್ತು ಖೊಟ್ಟಿತನವನ್ನು ಬಯಲು ಮಾಡುವ ಸಾಧನ. ಬರಹದಲ್ಲಿ ಹೆಚ್ಚು ಹೊತ್ತು ಅದನ್ನು ಅವಿತಿಟ್ಟು ಆಟ ಆಡಲಾಗದು. ಇಲ್ಲಿ ಗೆದ್ದ ಮಾತಿವೆ, ಸೋತ ಮಾತಿವೆ. `ಕವಿಯ ಜೀವನಾನುಭವ ಮತ್ತೆ ಮತ್ತೆ ಕಸಿಗೊಂಡಾಗ ಆತನ ಕಾವ್ಯದಲ್ಲಿ ಹೊಸಕಳೆ ಕಾಣಬಹುದು. ಆ ಕಸುವು ಹೊಂದಿರುವ ಮಂಡಲಗಿರಿ ಪ್ರಸನ್ನ ಅವರ ಮುಂದಿನ ಬರಹಗಳು ಮತ್ತಷ್ಟು ಹೊಸತನದೊಂದಿಗೆ ಓದುಗ ವಲಯಕ್ಕೆ ತಲುಪಲಿ.
ಮಂಡಲಗಿರಿ ಪ್ರಸನ್ನ ಅವರ “ನಿದಿರೆ ಇರದ ಇರುಳು” ಗಜಲ್‌ ಸಂಕಲನಕ್ಕೆ ಡಾ. ರಮೇಶ ಅರೋಲಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ