Advertisement

ಆನಂದ್ ಕುಂಚನೂರ

ಸುಧಾ ಆಡುಕಳ ಅನುವಾದಿಸಿದ ಎ. ಜೆ. ಥೋಮಸ್ ಅವರ ಎರಡು ಕವಿತೆಗಳು

“ಶಾಶ್ವತ ಸಾಲಗಾರನಾಗಿದ್ದರೂ ಅವನೆಂದಿಗೂ
ಆತ್ಮಸಾಕ್ಷಿಯಿಂದ ವಿಚಲಿತನಾಗಲಿಲ್ಲ
ಮನೆಯಿಲ್ಲದವರು ಮಾತ್ರವೇ ಅದ್ಭುತ ಸಂಚಾರಿಯಾಗಬಲ್ಲರು!
ಭವ್ಯ ವಾಸಸ್ಥಾನಕ್ಕೆ ಅವನು ನೀಡುವ ಮೌಲ್ಯ ಅತ್ಯಲ್ಪ
ಅವನ ದೀರ್ಘವಾಸದ ಮನೆಗೆ ಸುರೂಪ ಚಿಕಿತ್ಸೆ ನೀಡಿದವರನ್ನೂ
ಬಹುಶಃ ಅವನು ಕ್ಷಮಿಸಬಹುದೇನೊ?”- ಸುಧಾ ಆಡುಕಳ ಅನುವಾದಿಸಿದ ಎ. ಜೆ. ಥೋಮಸ್ ಅವರ ಎರಡು ಕವಿತೆಗಳು

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ

ಮುಕಾಂಬಿಕಮ್ಮ ಇದ್ದುದರಲ್ಲೇ ಅಚ್ಚುಕಟ್ಟಾಗಿ ಸಂಸಾರ ನಡೆಸಿಕೊಂಡು ಬಂದ ನಿತ್ಯಸಂತೋಷಿ ಜೀವ. ಬೆಳಗ್ಗೆ ಐದುಗಂಟೆಗೆ ಅವರ ಮನೆಗೆಲಸದಚಕ್ರ ಸುತ್ತಲಾರಂಭಿಸಿದರೆ ನಿಂತು ಅಡ್ಡವಾಗುವುದು ಮಧ್ಯಾಹ್ನ ಎರಡುಗಂಟೆಗೆ. ಮತ್ತೆ ಐದುಗಂಟೆಗೆ ಎದ್ದು ಸುತ್ತತೊಡಗಿದರೆ ನಿಲ್ಲುವುದು ರಾತ್ರಿ ಒಂಭತ್ತು ಗಂಟೆಗೆ. ‘ಮುಕಾಂಬಮ್ಮನಂತೆ ಮನೆಯನ್ನು ಒಪ್ಪ ಓರಣವಾಗಿ ಇಟ್ಕೊಳ್ಳುವವರು ಹೊಸನಗರದಲ್ಲೇಕೆ?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಾತ್ಯಾಯಿನಿ ಕುಂಜಿಬೆಟ್ಟು ಬರೆದ ಕತೆ “ಮೇಷ್ಟ್ರಮನೆ”

Read More

ಕಂದಹಾರ್ ಏರ್‌ಬೇಸಿನ ಅಪಾಯಕಾರಿ ಉಪಕ್ಯಾಂಪುಗಳು

ಕಚೇರಿಗೆ ಬಂದಾಗ ಡಾಕ್ಟರ್ ಕಿರ್ಕಿಗೆ ಕರೆ ಬಂದು ಅಗತ್ಯ ವೈದ್ಯಕೀಯ ನೆರವಿಗಾಗಿ ಅವಘಡ ನಡೆದ ಜಾಗಕ್ಕೆ ಹೋದನೆಂದು ಗೊತ್ತಾಯ್ತು. ಇಂತಹ ಪ್ರಮುಖ ಅವಘಡಗಳಾದಾಗ ಕ್ಯಾಂಪಿನಲ್ಲಿನ ಇಂತಹ ಖಾಸಗಿ ವೈದ್ಯರನ್ನು ಘಟನೆಯ ಜಾಗಕ್ಕೆ ನೆರವಿಗಾಗಿ ಕರೆಸಲಾಗುತ್ತದೆ. ನಾನು ನೋಡಿದ ವಿವರಗಳನ್ನು ಆಂಟೋನಿಯೋ ಮತ್ತು ಅಲ್ಲಿದ್ದ ಇತರೆ ಆಲ್ಬೇನಿಯನ್ ಜನರಿಗೆ ವಿವರಿಸಿದೆ. ಎಲ್ಲರೂ ಆಘಾತಕ್ಕೊಳಗಾದಂತೆ ದೊಡ್ಡ ನಿಟ್ಟುಸಿರುಬಿಟ್ಟರು. ಆಂಟೋನಿಯೋ ಮಾತ್ರ ತುಂಬಾ ಕಂಗಾಲಾದವನಂತೆ ತಲೆಮೇಲೆ ಕೈಹೊತ್ತು ಏನೇನೋ ಮನಸ್ಸಿಗೆ ಬಂದಂತೆ ಅವನ ಭಾಷೆಯಲ್ಲಿ ಗೊಣಗಲು ಶುರುಮಾಡಿದ.
ಮಂಜುನಾಥ್‌ ಕುಣಿಗಲ್‌ ಬರೆದ “ಕುಣಿಗಲ್‌ ಟು ಕಂದಹಾರ್” ಕೃತಿಯಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ರವಿಶಂಕರ ಪಾಟೀಲ ಬರೆದ ಈ ದಿನದ ಕವಿತೆ

“ಇಲ್ಲಿ ಯಾರು ತಾನೇ ಕತ್ತಲಿಗೆ ಹೆದರಲಾರರು
ಹಗಲಿಗೆ ಹೆದರದವರು ಕತ್ತಲಿಗೆ ಹೆದರೇ ಹೆದರುತ್ತಾರೆ
ಇಲ್ಲೊಂದೂರಿನಲ್ಲಿ ಹಗಲಿಗೂ ಹೆದರುವವರು ಕೋಟಿಗಟ್ಟಲೇ ಇದ್ದಾರೆ
ಇಡಿಯ ಭೂಮಂಡಲವೇ ಒಂದು ಊರೀಗ”- ರವಿಶಂಕರ ಪಾಟೀಲ ಬರೆದ ಈ ದಿನದ ಕವಿತೆ

Read More

ಆಚೆ ಕೇರಿಯ ಭಾಗ್ಯಮ್ಮ ಮತ್ತು ಈಚೆ ಕೇರಿಯ ದೇವಮ್ಮ

ಮಾರ್ಗೋಡನಹಳ್ಳಿಯ ಒಕ್ಕಲುಗೇರಿಯ ಭಾಗ್ಯಮ್ಮ ಬನ್ನೂರು ಬಸ್ಟಾಂಡಿನ ಬಳಿ ಸೊಪ್ಪು ಮಾರುತ್ತಿದ್ದವರು. ಸಮಯ ಸಿಕ್ಕಾಗ ದನದ ದಲ್ಲಾಳಿ ಕೆಲಸ, ಹೆಣ್ಣು ತೋರೋದು, ನಾಟಿ ಕೀಳೋದೂ ಇತ್ಯಾದಿಗಳನ್ನೂ ಮಾಡುತ್ತಿದ್ದರು. ಇವರ ಗೆಳತಿ ದಲಿತರ ಕೇರಿಯ ದೇವಮ್ಮನದು ಕೂಲಿಯ ಕೆಲಸ. ಸಮಯ ಒದಗಿ ಬಂದಾಗ ಭಾಗ್ಯಮ್ಮನ ಜೊತೆ ಸೊಲ್ಲು ಹೇಳಲು ಹೋಗುತ್ತಾರೆ. ಇವರಿಬ್ಬರು ಸೊಲ್ಲೆತ್ತಿ ಹಾಡಲು ತೊಡಗಿದರೆ ಇಬ್ಬರಲ್ಲಿ ಯಾರು ಹಿಂದು ಯಾರು ಮುಂದು, ಯಾರು ಜಾಣೆ ಯಾರು ಮುಗ್ಧೆ ಎಂಬುದು ಗೊತ್ತಾಗುವುದಿಲ್ಲ. ಕಳೆದ ಮಂಗಳವಾರ ಇರುಳು ತೀರಿಹೋದ ಭಾಗ್ಯಮ್ಮನವರ ನೆನಪಿನಲ್ಲಿ ಸೂರ್ಯಪುತ್ರ ಈ ಹಿಂದೆ ಬರೆದಿದ್ದ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ