Advertisement

ಡಾ. ಎಸ್‌. ವಿ. ನರಸಿಂಹನ್

“ಹಸ್ತಿನಾವತಿ”: ಇದು ಭಾರತದ ಕಥೆ….

ಆ ಚುನಾವಣೆಯಲ್ಲಿ ಸಂಜಯ್ ಸರ್ಕಾರ್ ಸ್ಪರ್ಧಿಸಿದ್ದರೆ ಬಹುಮತದಿಂದ ಗೆದ್ದು ಬರುತ್ತಿದ್ದರು. ಅವರು ಆ ಕೆಲಸ ಮಾಡಲಿಲ್ಲ. ನ್ಯಾಷನಲ್ ಪಾರ್ಟಿಯೇ ಮತ್ತೆ ಅಧಿಕಾರಕ್ಕೆ ಬರುವತನಕ ಕಾದರು. ನಂತರ ಸರ್ಕಾರದ ಲೋಪಗಳನ್ನು ಎತ್ತಿ ತೋರಿದರು. ನ್ಯಾಷನಲ್ ಪಾರ್ಟಿಯ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದ್ದಂತೆ, ಸಂಜಯ್ ಸರ್ಕಾರ್ ತಮ್ಮ ಹೊಸ ಪಕ್ಷವನ್ನು ಹುಟ್ಟುಹಾಕಿದರು. ಅದಕ್ಕೆ ಮಾತೃಭೂಮಿ ಎಂದು ಹೆಸರಿಟ್ಟರು. ಸಂಜಯ್ ಸರ್ಕಾರ್ ಜತೆ ಹೋರಾಟದ ಉದ್ದಕ್ಕೂ ಜತೆಗಿದ್ದ ಚಿದಾನಂದ ಪಾಂಡೆಯನ್ನು ಪಕ್ಷದ ಅಧ್ಯಕ್ಷರೆಂದು ಘೋಷಿಸಿದರು.
ನೆನ್ನೆಯಷ್ಟೇ ಬಿಡುಗಡೆಯಾದ ಜೋಗಿಯವರ ಕಾದಂಬರಿ “ಹಸ್ತಿನಾವತಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮಿಲ್ಟ್ರಿ ಟ್ರಂಕೊಳಗಿನ ಕಥೆಗಳು….

ಇಲ್ಲಿ ಅಧಿಕಾರ ಕೇಂದ್ರವಿರುವ ದಕ್ಷಿಣದ ಕರ್ನಾಟಕದ ಎದುರು, ಉತ್ತರ ಕರ್ನಾಟಕ ವಿಶಿಷ್ಟವಾದ ಭಾಷೆಯನ್ನಾಗಲಿ ಅನುಭವವನ್ನಾಗಲಿ ವೈಭವೀಕರಿಸುವುದಿಲ್ಲ, ಇಲ್ಲವೇ ಕೀಳೀಕರಿಸುವುದಿಲ್ಲ. ತನ್ನ ಪಾಲಿಗೆ ಕನ್ನಡ ನಾಡಿನ ಬದುಕೆಲ್ಲ ಒಂದೇ ಎಂಬ ಸಮದರ್ಶಿಯಾದ ದೃಷ್ಟಿಕೋನವು ಇಲ್ಲಿ ಕೆಲಸಮಾಡುತ್ತದೆ. ಹೀಗಾಗಿ ಇಲ್ಲಿನ ಸ್ಮೃತಿಚಿತ್ರಗಳು ರೋಚಕವಾದ ಅನುಭವವನ್ನು ಮಂಡಿಸಿ ಓದುಗರನ್ನು ರಂಜಿಸುವುದಕ್ಕೆ ಉತ್ಸುಕವಾಗುವುದಿಲ್ಲ. ಎಲ್ಲ ಭಾಗದ ಜೀವನದಲ್ಲಿರುವ ವಿಷಾದಕರ ದುರಂತಗಳನ್ನು ದಾಖಲಿಸುತ್ತವೆ. ಜನರ ಹಸಿವು ಬಡತನ ದುಡಿಮೆ ಹೋರಾಟ ಜೀವಂತಿಕೆಗಳನ್ನು ತಾಳ್ಮೆಯಿಂದ ಘನತೆಯಿಂದ ಕಾಣಿಸುತ್ತವೆ.
ಡಾ. ಲಕ್ಷ್ಮಣ ವಿ.ಎ. ಬರಹಗಳ ಸಂಕಲನ “ಮಿಲ್ಟ್ರಿ ಟ್ರಂಕು”ಕ್ಕೆ ರಹಮತ್‌ ತರೀಕೆರೆ ಬರೆದ ಮುನ್ನುಡಿ

Read More

ಯಶಸ್ವಿನಿ ಎಂ.ಎನ್‌. ಬರೆದ ಈ ದಿನದ ಕವಿತೆ

“ಹಾಳೆಗೆ ಅಂಟಿರುವ ತಾರೀಕಿನ ಚೌಕಟ್ಟಿನೊಳಗೆ
ಸಮಯ ಕರಗುವ ಸರದಿ
ಸುಕ್ಕುಗಟ್ಟಿರುವ ದೇಹದ ಮೇಲೆ ಸುಡುವ ನೀರು ಕಡುಗಪ್ಪು ಇದ್ದಿಲು
ಸಿಕ್ಕುಗಟ್ಟಿರುವ ನೆರೆತ ತುರುಬಿನೊಳಗೆ
ಒದ್ದೆಯಾಗಿದ್ದವು ನೆನಪುಗಳು”- ಯಶಸ್ವಿನಿ ಎಂ.ಎನ್‌. ಬರೆದ ಈ ದಿನದ ಕವಿತೆ

Read More

ಶಾಂತಿನಾಥ ದೇಸಾಯಿಯವರ ಕೃತಿಗಳಲ್ಲಿ ವ್ಯಕ್ತಿಸ್ವಾತಂತ್ರ್ಯದ ಬಿಕ್ಕಟ್ಟುಗಳು

ಆಧುನಿಕತೆಯು ನಮ್ಮ ಮನಸ್ಸಿಗೆ ಇತ್ತ ಸ್ವಾತಂತ್ರ್ಯವನ್ನು ಮೊಟ್ಟಮೊದಲ ಬಾರಿಗೆ ಕನ್ನಡ ಗದ್ಯ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಗ್ರಹಿಸಿದವರು ದೇಸಾಯರು. ಅವರ ಪಾತ್ರಗಳು ಈ ಸ್ವಾತಂತ್ರ್ಯವನ್ನು ನಿಭಾಯಿಸಲಾಗದ ತಮ್ಮ ವೈಫಲ್ಯದಿಂದ ಕಂಗೆಡುವಂಥವರು. ಸಂಪೂರ್ಣ ಸ್ವಾತಂತ್ರ್ಯವನ್ನು ಭರಿಸುವುದು ಎಷ್ಟು ಕ್ಲಿಷ್ಟಕರವಾದದ್ದು ಮತ್ತು ಈ ಹಾದಿ ಹೆಜ್ಜೆಹೆಜ್ಜೆಗೂ ಎಂಥ ವೈಫಲ್ಯಗಳಿಂದ ಕೂಡಿದ್ದು ಎಂಬುದು ಅವರ ಕಥೆಗಳ ಅಂತರಂಗವನ್ನು ಪ್ರವೇಶಿಸಿದಾಗಲೇ ಗೊತ್ತಾಗುವ ಸಂಗತಿ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿನ ಕಥೆಗಾರ ವಿವೇಕ ಶಾನಭಾಗ ಬರೆದ ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ