Advertisement

ದೇವಿಕಾ ನಾಗೇಶ್

ಪರಿಸರದ ಪಾಠಕ್ಕೆ ಇದೇ ಸೂಕ್ತ ತಾಣ!

ಪ್ರಕೃತಿಯ ಮೊದಲ ಪಾಠಗಳನ್ನು ನಾನು ಕಲಿತದ್ದು ಆ ಹಕ್ಕಲಿನಲ್ಲಿ ಎಂದು ಹೇಳಿದರೆ ತಪ್ಪಾಗದು. ಹಾಗೆ ನೋಡಿದರೆ, ನಮ್ಮ ಹಳ್ಳಿಯ ಮನೆಯ ಪರಿಸರವೇ ಒಂದು ಒಳ್ಳೆಯ ಪಾಠಶಾಲೆ. ಮನೆ ಎದುರು ಗದ್ದೆ, ಮನೆ ಸುತ್ತಲೂ ಮರಗಳು, ಮನೆಯ ಛಾವಣಿಯ ಮೇಲೆ ಚಾಚಿಕೊಂಡ ಭಾರೀ ಗಾತ್ರದ ಹಲಸಿನ ಮರ, ಇಪ್ಪತ್ತು ಅಡಿ ದೂರದಲ್ಲಿರುವ ಬೃಹತ್ ಗಾತ್ರದ ಎರಡು ತಾಳೆ ಮರಗಳ ಒಣಗಿದ ಎಲೆಗಳು ಮಾಡುವ ಬರಬರ ಸದ್ದು, ಅಂಗಳದ ಅಂಚಿನ ಹೂಗಿಡಗಳು, ಬಳ್ಳಿಗಳು, ದಾಸವಾಳ, ಬೆಟ್ಟ ತಾವರೆ – ಪಟ್ಟಿ ಮಾಡುತ್ತಾ ಹೋದರೆ ಬೇಗನೆ ಮುಗಿಯದು. ಜತೆಗೆ ನಾವು ಶಾಲೆಗೆ ಹೋಗುತ್ತಿದ್ದ ದಾರಿಯೂ ಇನ್ನೊಂದು ಪಾಠಶಾಲೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಶಶಿಧರ ಹಾಲಾಡಿಯವರ “ನಾ ಸೆರೆಹಿಡಿದ ಕನ್ಯಾಸ್ತ್ರೀ” ಪ್ರಬಂಧ ಸಂಕಲನದ ಒಂದು ಬರಹ ನಿಮ್ಮ ಓದಿಗೆ

Read More

ಸುಬ್ರಹ್ಮಣ್ಯ ಹೆಗಡೆ ಬರೆದ ಈ ದಿನದ ಕವಿತೆ

“ಮೂಲೆ ಸೇರಿದ ಮಬ್ಬು,
ಹಳೆ ಪಾತ್ರೆಯೊಂದ ಹುಡುಕಿ,
ಸೋಪಿನಿಂದ ಚನ್ನಾಗಿ ಉಜ್ಜಿ, ತಿಕ್ಕಿ, ತೀಡಿ
ತೊಳೆದು ‘ಲಕ,ಲಕಿಸಿ’,’ ಪಿಲ್ಟರ್’ ಮಾಡಿ,
ಕುದಿಸಿದ ಹಳೇ ನೀರ ತುಂಬಿಸಿ,
ಹೊಸತೆಂದು ಸಂಭ್ರಮಿಸಿದಂತೆ…!”- ಸುಬ್ರಹ್ಮಣ್ಯ ಹೆಗಡೆ ಬರೆದ ಈ ದಿನದ ಕವಿತೆ

Read More

ಹಳ್ಳಿಯ ಅಂತರಾತ್ಮದ ಆರ್ದ್ರ ಕಥನ

ಇಡೀ ಕಥೆಗಳ ಅಂತರಾಳದಲ್ಲಿ ವಿಷಾದದ ದನಿಯೊಂದು ಲಘು ಹಾಸ್ಯದ ಲೇಪನದೊಂದಿಗೆ ಅನಾವರಣಗೊಂಡಿದೆ. ಯಾವುದೇ ʻಇಸಂʼನಿಂದ ಮುಕ್ತಗೊಂಡಂತೆ ಕಾಣುವ ಇಲ್ಲಿನ ಲೋಕದಲ್ಲಿ ಮನಕುಲದ ಒಳಿತು ಹಾಗೂ ಜೀವಪರ ತುಡಿತವೇ ಮೇಲುಗೈಯ್ಯಾಗಿದೆ. ಈ ಸಂಕಲನದ ಬಹು ಮುಖ್ಯ ಸಂಗತಿ ಅಂದರೆ, ಇದುಅಪ್ಪಟ ಪ್ರಾದೇಶಿಕ ಸೊಗಡಿನಿಂದ ಲಕಲಕಿಸುತ್ತದೆ. ಅಂತೆಯೇ ಯಾವುದೇ ಮಡಿವಂತಿಕೆಯ ಸೋಗಿಲ್ಲದೆ ಪ್ರಾಮಾಣಿಕವಾಗಿ ಅನಿಸಿದ್ದನ್ನು ನೇರವಾಗಿ ಹೇಳುತ್ತದೆ.
ಮಂಜಯ್ಯ ದೇವರಮನಿ ಕಥಾ ಸಂಕಲನ “ದೇವರ ಹೊಲ”ಕ್ಕೆ ಎಸ್. ಗಂಗಾಧರಯ್ಯ ಬರೆದ ಮುನ್ನುಡಿ

Read More

ಮೌಲ್ಯ ಸ್ವಾಮಿ ಬರೆದ ಈ ದಿನದ ಕವಿತೆ

“ತಿಳಿ ಗುಲಾಬಿ ಚಿಟ್ಟೆಗಳ ತಿನ್ನಿಸಿ ನೀಲಿ ನೀಲಿ ಕತ್ತರಿಗಳ ನುಂಗಿಸುತ್ತಲೇ
ಪ್ರೇಮದ ಅಡಕತ್ತರಿಗೆ ನನ್ನ ಎಳೆರೆಕ್ಕೆಗಳ ಸತ್ಯ ಕುಡಿಸಿ ಮಣ್ಣು ಮಾಡಿಬಿಟ್ಟ

ಎಡ ಪಾರ್ಶ್ವದ ಮೂಲೆಯೊಂದರಲ್ಲಿ ಕಾಡ ನಡುವಿನ ಬಿಸಿನೀರ ಬುಗ್ಗೆಯಂತೆ
ಸಾವಿರ ವರ್ಷಗಳಷ್ಟು ಹಳೆಯ ಕತ್ತಲು ಉಕ್ಕುತ್ತಿದೆ
ಒಳಗೊಳಗೆ
ಬುಗ್ಗೆಯಂತೆ”-

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ