Advertisement

ದೇವಿಕಾ ನಾಗೇಶ್

ಇದ್ದಂತೆ ಇರುವ ಪದ್ಯಸದ್ಯ

ಕವಿತೆ ಪ್ರಣಾಳಿಕೆಯೋ ವಾಗ್ವಾದವೋ ಉತ್ತರವೋ ಪ್ರತಿಭಟನೆಯೋ ಆಗಿ ಮೆರೆಯುತ್ತಿರುವ ದಿನಗಳಲ್ಲಿ ರಾಜು ಹೆಗಡೆ ಬರೆಯುತ್ತಿರುವ ಪದ್ಯಗಳಿಗೆ ವಿಶಿಷ್ಟವಾದ ಸ್ಥಾನವಿದೆ ಎಂದು ಹೇಳಲು ಅಂಜಿಕೆಯಾಗುತ್ತದೆ. ನಮ್ಮ ಕಾವ್ಯದ ಓದನ್ನು ರಾಜಕೀಯ ನಿಲುವು, ಸೈದ್ಧಾಂತಿಕತೆ ಮತ್ತು ಸಾಮಾಜಿಕನಿಲುವುಗಳು ನಿರ್ಧರಿಸುವ ಕಾಲ ಇದು. ಶುದ್ಧಕವಿತೆ ಎಂಬ ಮಾತನ್ನು ಗೇಲಿ ಮಾಡಲಾಗುತ್ತದೆ ಮತ್ತು ಶುದ್ಧ ಸಾಹಿತ್ಯವನ್ನು ಅಪರಾಧವೆಂಬಂತೆ ನೋಡಲಾಗುತ್ತಿದೆ. ಯಾವುದಾದರೊಂದು ರಾಜಕೀಯ ಪಕ್ಷದ ಅಘೋಷಿತ ಗೊತ್ತುವಳಿಯಂಥ ಸಾಲುಗಳನ್ನು ಪದ್ಯಗಳೆಂದು ಕರೆಯಲಾಗುತ್ತಿದೆ.
ರಾಜು ಹೆಗಡೆ ಕವನ ಸಂಕಲನ “ಕಣ್ಣಿನಲಿ ನಿಂತ ಗಾಳಿ” ಗೆ ಜೋಗಿ ಬರೆದ ಮುನ್ನುಡಿ

Read More

ಅರ್ಚನಾ ಹೆಚ್‌. ಬರೆದ ಈ ದಿನದ ಕವಿತೆ

“ಯೌವ್ವನದ ಅರ್ಧ ಭಾಗವನ್ನೆಲ್ಲಾ
ಆಪೋಶಿಸಿದ ನೈಟ್ ಶಿಫ್ಟುಗಳು..!
ಒಳಗಿನ ಏಸಿ ಚಳಿಗೆ ನಡುಗಿದ್ದು ಪ್ರಾಯ!
ವಾರವಾದರೂ ನೋಡದ ಮಗಳ ಮುಖ
ಮೊಬೈಲ್ ಸ್ಕ್ರೀನ್ನಲ್ಲಷ್ಟೇ…! ಮರೆತ ಸುಖ..!!”- ಅರ್ಚನಾ ಹೆಚ್‌. ಬರೆದ ಈ ದಿನದ ಕವಿತೆ

Read More

ಹೊಸ ಕಾಲವು ಕೊಟ್ಟ ದಿಟ್ಟತೆಯ ಕವಿತೆಗಳಿವೆಯಿಲ್ಲಿ!

ಆಶಾ ತೀರಾ ವಾಚ್ಯವಾಗಿಸಿ ಯಾವುದನ್ನೂ ಹೇಳುವುದಿಲ್ಲ. ಬಹುಶಃ ಬಂಡಾಯ, ದಲಿತ, ಸ್ತ್ರೀವಾದದ ಘೋಷಣಾ ಸಾಹಿತ್ಯ ಮುಗಿದಂತೆ ಕಾಣುತ್ತಿದೆ. ಆ ಎಲ್ಲ ಚಳುವಳಿಗಳು ಕನ್ನಡದ ಒಟ್ಟೂ ಸಮಾಜದ ಮೇಲೆ, ಸಾಹಿತ್ಯದ ಮೇಲೆ ಉಂಟುಮಾಡಿದ ಅದ್ಭುತ ಚಾಲನಾ ಪ್ರಭಾವವನ್ನು ಅರ್ಥೈಸಿಕೊಂಡು, ಮನದಲ್ಲೂ ಇಟ್ಟುಕೊಂಡು, ಅದೇ ಕಾಲಕ್ಕೆ ಘೋಷಣೆಯ ಕಾಲ್ತೊಡಕುಗಳನ್ನೂ ಕಳಚಿ ಬರೆಯುವ ಹೊಸ ಯುವ ಸಮೂಹವೊಂದು ಕನ್ನಡದಲ್ಲಿ ತಯಾರಾಗಿದೆ. ನಿರ್ವಿವಾದವಾಗಿ ಆಶಾ ಕೂಡಾ ಆ ಪಡೆಯ ಉತ್ತಮ ಸದಸ್ಯೆ.
ಆಶಾ ಜಗದೀಶ್‌ ಕವನ ಸಂಕಲನ “ನಡು ಮಧ್ಯಾಹ್ನದ ಕಣ್ಣು” ಕೃತಿಗೆ ಲಲಿತಾ ಸಿದ್ಧಬಸವಯ್ಯ ಬರೆದ ಮುನ್ನುಡಿ

Read More

ಭರತ್ ಬಾಬು ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ಭರತ್‌ ಬಾಬು. ಭರತ್ ಬಾಬು ಬೆಂಗಳೂರಿನವರು. ಇನ್ಸೂರೆನ್ಸ್ ಕಂಪನಿ ಅಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಓದು, ಸುತ್ತಾಟ ಮತ್ತು ಫೋಟೋಗ್ರಫಿ ಇವರ ಹವ್ಯಾಸಗಳು.
ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ