Advertisement
ರಂಜಾನ್ ದರ್ಗಾ

ಕನ್ನಡದ ಹಿರಿಯ ಲೇಖಕರು ಮತ್ತು ಪತ್ರಕರ್ತರು. ಬಂಡಾಯ ಕಾವ್ಯದ ಮುಂಚೂಣಿಯಲ್ಲಿದ್ದವರು. ವಿಜಾಪುರ ಮೂಲದ ಇವರು ಧಾರವಾಡ ನಿವಾಸಿಗಳು. ಕಾವ್ಯ ಬಂತು ಬೀದಿಗೆ (ಕಾವ್ಯ -೧೯೭೮), ಹೊಕ್ಕಳಲ್ಲಿ ಹೂವಿದೆ (ಕಾವ್ಯ), ಸಾಹಿತ್ಯ ಮತ್ತು ಸಮಾಜ, ಅಮೃತ ಮತ್ತು ವಿಷ, ನೆಲ್ಸನ್ ಮಂಡೇಲಾ, ಮೂರ್ತ ಮತ್ತು ಅಮೂರ್ತ, ಸೌಹಾರ್ದ ಸೌರಭ, ಅಹಿಂದ ಏಕೆ? ಬಸವಣ್ಣನವರ ದೇವರು, ವಚನ ಬೆಳಕು, ಬಸವ ಧರ್ಮದ ವಿಶ್ವಸಂದೇಶ, ಬಸವಪ್ರಜ್ಞೆ, ನಡೆ ನುಡಿ ಸಿದ್ಧಾಂತ, ಲಿಂಗವ ಪೂಜಿಸಿ ಫಲವೇನಯ್ಯಾ, ಜಾತಿ ವ್ಯವಸ್ಥೆಗೆ ಸವಾಲಾದ ಶರಣರು, ಶರಣರ ಸಮಗ್ರ ಕ್ರಾಂತಿ, ಬಸವಣ್ಣ ಮತ್ತು ಅಂಬೇಡ್ಕರ್, ಬಸವಣ್ಣ ಏಕೆ ಬೇಕು?, ಲಿಂಗವಂತ ಧರ್ಮದಲ್ಲಿ ಏನುಂಟು ಏನಿಲ್ಲ?, ದಾಸೋಹ ಜ್ಞಾನಿ ನುಲಿಯ ಚಂದಯ್ಯ (ಸಂಶೋಧನೆ) ಮುಂತಾದವು ಅವರ ಪ್ರಕಟಿತ ಕೃತಿಗಳಾಗಿವೆ.  ಕರ್ನಾಟಕ ಸರ್ಕಾರದ ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಗೌರವ ಪ್ರಶಸ್ತಿ ಮುಂತಾದ ೫೨ ಪ್ರಶಸ್ತಿಗಳಿಗೆ ಭಾಜನರಾದ ರಂಜಾನ್ ದರ್ಗಾ ಅವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿಶಾಲಿ ಕವಿಗಳಲ್ಲಿ ಒಬ್ಬರು. ಅಮೆರಿಕಾ, ನೆದರ್‌ಲ್ಯಾಂಡ್ಸ್, ಲೆಬನಾನ್, ಕೆನಡಾ, ಫ್ರಾನ್ಸ್, ಆಸ್ಟ್ರೇಲಿಯಾ ಸೇರಿದಂತೆ ಇನ್ನೂ ಹಲವು ದೇಶಗಳಲ್ಲಿ ಶರಣ ಸಂಸ್ಕೃತಿ, ಶಾಂತಿ ಮತ್ತು ಮಾನವ ಏಕತೆ ಕುರಿತು ಉಪನ್ಯಾಸ ನೀಡಿದ್ದಾರೆ.

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ ಕತೆ

ನನ್ನೊಳಗೆ ಉಷಾ ಜೀವಂತವಾಗಿಯೇ ಇದ್ದಳು. ಕೆಲವೊಮ್ಮೆ ಕನಸುಗಳಲ್ಲಿ ಬಂದು ತನ್ನ ದುಃಖದ ಕಥೆಗಳನ್ನು ಹೇಳಿಕೊಂಡಳು. ಇನ್ನು ಕೆಲವೊಮ್ಮೆ ಅವಳೊಬ್ಬ ಸದ್ಗೃಹಿಣಿಯಾಗಿ ತಲೆಗೆ ಮಿಂದು, ಕೂದಲು ಕಟ್ಟಿಕೊಂಡು, ಬಟ್ಟೆ ತುರುಬು ಹಾಕಿ, ಮಂಗಲ ಕುಂಕುಮವನ್ನಿಟ್ಟುಕೊಂಡು ನಂದಿನಿ ಹಾಲಿನ ಪ್ಯಾಕೆಟ್ ಮನೆಯೊಳಗೆ ತರುತ್ತಿರುವಂತೆ ಕನಸಾಗುತ್ತಿತ್ತು. ‘ಸದಾಶಿವಯ್ಯನವರ ಮಾತನ್ನು ಎಂದಿಗೂ ನಂಬಬೇಡ’ ಎಂದು ಒಂದು ಸಲ ಹೇಳಿ ಹೋದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ

Read More

ಅಬ್ದುಲ್ ರಶೀದ್ ಕೃತಿಗೆ ಭಾರತಿ ಬಿ.ವಿ. ಬರೆದ ಮುನ್ನುಡಿ

“ರಶೀದ್ ಬರಹಗಳನ್ನು ಮೊದಲಲ್ಲಿ ಓದುವಾಗ ಒಂದು ಪ್ರಶ್ನೆ ಸದಾ ಕಾಡುತ್ತಿತ್ತು ‘ಅದು ಹೇಗೆ ಇವರ ಬದುಕಿನಲ್ಲಿ ನನಗೆ ಅಸಾಧ್ಯವಾದ ಏನೆಲ್ಲ ಆಗುತ್ತದಲ್ಲ’ ಎಂದು. ಅದು ಕೇವಲ ನನ್ನ ಪ್ರಶ್ನೆಯಲ್ಲದೇ ಬೆರಗು ಕೂಡಾ ಆಗಿತ್ತು! ಬದುಕನ್ನು ತುಂಬ ಕಠೋರವಾಗಿ… ಅಂದರೆ ಅಗತ್ಯಕ್ಕಿಂತ ಹೆಚ್ಚು ಕಠೋರವಾಗಿ ಬದುಕುವ ಅಗತ್ಯವಿಲ್ಲ ಮತ್ತು ಸಣ್ಣದೊಂದು ಕಾರುಣ್ಯದ ಹನಿ ಜಗತ್ತಿಗೆ ಚುಮುಕಿಸಲು ಹೆಚ್ಚೇನೂ ಶ್ರಮ ವಹಿಸಬೇಕಿಲ್ಲ ಎಂದು ಅರ್ಥವಾದ ನಂತರ, ಅವರ ಕಷ್ಟಸುಖ ಕೇಳುತ್ತಲೇ ಎದೆಯಲ್ಲಿ ಕಾರುಣ್ಯ ಮೂಡಿ, ತುಸು ‘ಹೆಚ್ಚು ಮನುಷ್ಯಳಾಗುತ್ತಾ’ ಹೋದೆ ಅನ್ನಬಹುದು”
ಕತೆಗಾರ ಅಬ್ದುಲ್ ರಶೀದ್ ಅವರ ‘ಮೈಸೂರು ಪೋಸ್ಟ್’ ಕೃತಿಗೆ  ಭಾರತಿ ಬಿ.ವಿ. ಬರೆದ ಮುನ್ನುಡಿ

Read More

ಸ್ಮಿತಾ ರಾವ್ ತೆಗೆದ ಈ ದಿನದ ಫೋಟೋ

ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿರುವ ಸ್ಮಿತಾ ಅವರಿಗೆ ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ಇಷ್ಟ.  ಮೂಲತಃ ಶಿವಮೊಗ್ಗದವರಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದಾರೆ.  -ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.

ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ