Advertisement

ದೇವಿಕಾ ನಾಗೇಶ್

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಮೆಹಬೂಬ್ ಮಠದ ಬರೆದ ಈ ದಿನದ ಕವಿತೆ

“ಝಗಮಗಿಸುವ ಇಂದ್ರನ ಅರಮನೆಗಳು
ನರಳುತ್ತಿವೆ
ಅಷ್ಟದಿಗ್ಭಂದನ ನಡುವೆ
ಮೈತುಂಬಾ ಹೊಲಿಗೆ ಹಾಕಿಸಿಕೊಂಡ
ಗುಡಿಸಲುಗಳು ಗುನುಗುವ
ಹಾಡಿನ ಬೊಗಸೆ ತುಂಬಾ
ನಳ ನಳಿಸುವ ಪ್ರೀತಿ”- ಮೆಹಬೂಬ್ ಮಠದ ಬರೆದ ಈ ದಿನದ ಕವಿತೆ

Read More

ನಾಗ ಐತಾಳರು ಇನ್ನಿಲ್ಲ….

ಬಾವಿಕಟ್ಟೆಯ ಪಶ್ಚಿಮಕ್ಕೆ ಬಚ್ಚಲು ಮನೆ. ಸ್ನಾನ ಮಾಡಲು ಬಚ್ಚಲು ಹೊಂಡವಿದ್ದಿತು, ಸ್ನಾನಕ್ಕೆ ಬಿಸಿನೀರು ಕಾಯಿಸಲೊಂದು ಬಹಳಷ್ಟು ದೊಡ್ಡ ಗಾತ್ರದ ಹಂಡೆ, ಬಟ್ಟೆ ಬದಲಾಯಿಸಲು ಸಾಕಷ್ಟು ವಿಸ್ತಾರವಾದ ಸ್ಥಳ. ಚಿಕ್ಕಂದಿನಲ್ಲಿ ನಾನು ನನ್ನ ತಮ್ಮಂದಿರನ್ನು ಕೂಡಿಕೊಂಡು ಬಚ್ಚಲು ಒಲೆಯ ಮುಂದೆ ಚಳಿಗಾಲದಲ್ಲಿ ಮೈ ಕಾಯಿಸುತ್ತ, ಹುಲ್ಲು ಕಡ್ಡಿಗಳಿಗೆ ಬೆಂಕಿ ತಗುಲಿಸಿ, ಸಿಗರೇಟು ಸೇದುತ್ತಿದ್ದೇವೆಂಬ; ಆಟವಾಡಿದ ದಿನಗಳ ನೆನಪಾಗುತ್ತಿದೆ.
ಹಿರಿಯ ಸಾಹಿತಿಗಳಾದ ನಾಗ ಐತಾಳರು (ಆಹಿತಾನಲ) ನೆನ್ನೆ ತೀರಿಕೊಂಡರು. ಅವರ ನೆನಪಿನಲ್ಲಿ ಅವರ “ಕಾಲ ಉರುಳಿ ಉಳಿದುದಷ್ಟೇ ನೆನಪು” ಆತ್ಮಕತೆಯ ಭಾಗವೊಂದನ್ನು ನಿಮ್ಮ ಓದಿಗೆ ಇಲ್ಲಿ ಹಂಚಿಕೊಳ್ಳಲಾಗಿದೆ

Read More

ತಿಪಟೂರು ಸೀಮೆಯ ಘಮಲು

ಕೇವಲ ನಿರೂಪಕಿ ಆಗದೆ ಕತೆಗಳ ಒಳಗಿನಿಂದ ಬಂದು ಮಾತನಾಡುವ ಕತೆಗಾರ್ತಿಗೆ ಆ ಕಾರಣಕ್ಕೆ ಒಂದು ರೀತಿಯ ಸಹಜ ಯಜಮಾನಿಕೆ ಪ್ರಾಪ್ತವಾಗಿದೆ. ಭಾರತದ ಮಹಾವ್ಯಾಖ್ಯಾನಗಳನ್ನು ನೀಡಿದ ವಾಲ್ಮೀಕಿ ವ್ಯಾಸರು ಕತೆಯ ಒಳಗಿನವರು. ತಾವೂ ತಮ್ಮ ಕತೆಯಲ್ಲಿ ಪಾತ್ರಧಾರಿಗಳು ಅಥವಾ ತಮ್ಮಿಂದಲೇ ಕತೆಗಳನ್ನು ಆರಂಭಿಸಿದವರು. ಕತೆಗಾರಿಕೆಗೆ ಇದೊಂದು ಅತ್ಯುತ್ತಮ ಮಾದರಿ. ತಾನೇ ಊರಾಡಿ ಎತ್ತಿಕೊಂಡು ಬಂದ ಕತೆಗಳಂತಿರುವ ಸಮೂಹ ಪ್ರಜ್ಞೆ ಈ ಕತೆಗಳ ಸತ್ವ. ಕತೆಗಳು ಸಮೂಹದ ಸ್ವತ್ತು. ಸಮೂಹ ಕೊಡುತ್ತಿರುವ ಸಮಸ್ತ ಬೈಗುಳಗಳಾದಿಯಾಗಿ ಯಾವುದನ್ನೂ ಸೋಸದೆ ಇಡಿಯಾಗಿ ನಮಗೆ ತಲುಪಿಸಲಾಗಿದೆ.
ದಯಾ ಗಂಗನಘಟ್ಟ ಕಥಾ ಸಂಕಲನ “ಉಪ್ಪುಚ್ಚಿ ಮುಳ್ಳು”ಗೆ ನಟರಾಜ್‌ ಬೂದಾಳು ಬರೆದ ಮುನ್ನುಡಿ

Read More

ವಸು ವತ್ಸಲೆ ಬರೆದ ಈ ದಿನದ ಕವಿತೆ

“ಅಸ್ಪಷ್ಟ ಭಾವಗಳು ಲಾವಾರಸದಂತೆ ಉಕ್ಕಿ
ಕುದಿ ಮೌನ ಈರ್ಷ್ಯೆಯಲಿ ಕಣ್ಣೊಳಗೆ ನುಂಗುತ್ತಿದೆ…
ಮುಲಾಜಿಲ್ಲದ ಮಾತು ಭಯ ಉದ್ವೇಗ ಮೀರಿ
ಬದುಕನ್ನು ಮುದ್ದಿಸುವುದ ಮರೆತು
ತಗುಲಿಕೊಂಡಿದೆ ಕ್ರೂರ ಕೋಪದ ಹರಿತ
ಕತ್ತಿಯ ತುದಿಗೆ ….”- ವಸು ವತ್ಸಲೆ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ