Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ರಂಗಸ್ಥಳದಲ್ಲೀಗ ಸಮಯಮಿತಿಯ ವಾಗ್ವಿಲಾಸ

1985 ಕ್ಕಿಂತ ಮುಂಚೆಯೇ  ಇಡಗುಂಜಿ ಮೇಳ ವಿವಿಧ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಕಾಲಮಿತಿಯ ಯಕ್ಷಗಾನ  ಪ್ರದರ್ಶನವನ್ನು ಆರಂಭಿಸಿತ್ತು. 1968 ರಲ್ಲಿ ಮತ್ತು 1971ರಲ್ಲಿ ದೆಹಲಿಯಲ್ಲಿ ಜರಾಸಂಧವಧೆ, ಕರ್ಣಪರ್ವ ಮುಂತಾದ ಪ್ರಸಂಗಗಳನ್ನು ಕಾಲಮಿತಿಯಲ್ಲಿ ಪ್ರದರ್ಶಿಸಿತ್ತು. ಆ ಸಂದರ್ಭದಲ್ಲಿ ಜನರ ಮನಸ್ಸು ಇನ್ನು ಸಮಯಮಿತಿಗೆ ಒಗ್ಗಿಕೊಳ್ಳದ ಸಂದರ್ಭವಾದರೂ, ಸುಮಾರು 75ಕ್ಕೂ ಮಿಕ್ಕಿ ಪ್ರದರ್ಶನ ನಡೆಯಿತು. ಹಾಗೆ ನೋಡಿದರೆ ಜಗತ್ತಿನ ಯಾವ ರಂಗಭೂಮಿಗೊ, ನಾಟ್ಯಪ್ರಕಾರಕ್ಕೋ ʻಕಾಲಮಿತಿʼ ಎಂಬುದು ಒಂದು ಚರ್ಚಿಸಬೇಕಾದ ವಿಷಯವೇ ಅಲ್ಲ ಎನ್ನುವ  ಹಿರಿಯ ಕಲಾವಿದ ಕೆರೆಮನೆ ಶಿವಾನಂದ ಹೆಗಡೆ ಅವರು ಮೇಳವನ್ನು ನಡೆಸುವವರೂ ಹೌದು. ಹಿರಿಯ ಕಲಾವಿದರೂ ಹೌದು. ಅವರು ಬರೆದ ಲೇಖನ ಇಂದಿನ ಓದಿಗಾಗಿ. 

Read More

ಕಲಾಕ್ಷೇತ್ರದ ಧ್ರುವ ನಕ್ಷತ್ರದಂತೆ ಹೊಳೆದ ಬಿರ್ಜು ಮಹಾರಾಜ್…

ಬಿರ್ಜು ಮಹಾರಾಜರು ಕಥಕ್ ನಿರ್ಧಿಷ್ಟ ಪರಂಪರೆಯಿಂದ ಬಂದವರಾದರೂ ಅವರು ಆ ಕ್ಷೇತ್ರದಲ್ಲಿ ಪ್ರಯೋಗಶೀಲರಾಗಿ ಕೆಲಸ ಮಾಡಿದರು. ಅವರ ವಿಶಿಷ್ಟವಾದ ಶೈಲಿಯಲ್ಲಿ “ಸಮ್” ತೋರಿಸುವ ವಿಧಾನದಲ್ಲಿ ಪರಂಪರೆಗೆ ಹೊಸ ಮಾದರಿ ತಂದರು. ಇದು ಕೆಲವರಲ್ಲಿ ಅಸಮಾಧಾನ ಉಂಟಾದರೂ ತನ್ನ ಬದಲಾವಣೆ ಹೇಗೆ ಕಥಕ್‌ನ ವಿವಿಧ ಕೋನಗಳ ನಿಲುವು ಭಂಗಿಯನ್ನು ಬಳಸಿಕೊಂಡೇ ಆದ ಹೊಸ ಆವಿಷ್ಕಾರ ಎಂದು ಪ್ರತಿಪಾದಿಸಿದಾಗ ವಿರೋಧ ಕರಗಿ ಘರಾಣೆಯ ಹಿರಿಯರಿಂದ ಪ್ರಶಂಸೆ ಬಂತು!
ಇತ್ತೀಚೆಗೆ ನಮ್ಮನ್ನು ಅಗಲಿದ, ಕಥಕ್ ಕ್ಷೇತ್ರದ ಅಪ್ರತಿಮ ಸಾಧಕ ಬಿರ್ಜು ಮಹಾರಾಜ್ ಕುರಿತು ಕೆರೆಮನೆ ಶಿವಾನಂದ ಹೆಗಡೆ ಬರೆದ ಬರಹ ಇಲ್ಲಿದೆ.

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ