Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಸಾರಾ ಉಮ್ಮಾ ತೀರಿಕೊಂಡರು…

ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ ಸಾರಾ ಅಬೂಬಕ್ಕರ್ ಮಂಗಳವಾರ ಮಧ್ಯಾಹ್ನ ತೀರಿಕೊಂಡರು. ಚಂದ್ರಗಿರಿಯ ತೀರದಲ್ಲಿ ಕಾದಂಬರಿಯ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಪ್ರವೇಶಿಸಿದ ಸಾರಾ, ಲೇಖಕಿಯಾಗಿಯಷ್ಟೇ ಅಲ್ಲ, ಉದಾರವಾದಿ ಚಿಂತಕಿಯಾಗಿಯೂ ಗುರುತಿಸಿಕೊಂಡರು. ಅವರ ಕುರಿತು ಕಳೆದ ವರ್ಷ ಕೆಂಡಸಂಪಿಗೆಯಲ್ಲಿ ಪ್ರಕಟವಾದ ಬರಹವೊಂದು ಇಲ್ಲಿದೆ.

Read More

ಬೆಟ್ಟ ಅಗೆದು ಗಂಗೆಯನ್ನು ತಂದವರು

ಅಮೈ ಮಹಾಲಿಂಗ ನಾಯ್ಕ ಅವರು ಬಂಟ್ವಾಳದ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ಎಂಬ ಊರಿನ ನಿವಾಸಿ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಜೀವನವು ಮರೆಯಾಗುತ್ತಿದೆ ಎಂಬ ಆತಂಕ ಕವಿಯುತ್ತಿರುವ ಸಂದರ್ಭದಲ್ಲಿ ಅಮೈ ಮಹಾಲಿಂಗ ನಾಯ್ಕರು ಬೋಳುಗುಡ್ಡವನ್ನು ಹಸನು ಮಾಡುವ ಕಾಯಕದಲ್ಲಿ ನಿರತರಾಗಿದ್ದರು. ಕೃಷಿ ಕಾಯಕದ ಮೂಲಕ ಸ್ವಾವಲಂಬಿ ಜೀವನ ಸಾಧ್ಯ ಎಂಬುದನ್ನು ಆಧುನಿಕ ತಲೆಮಾರಿಗೆ ತೋರಿಸಿಕೊಟ್ಟಿದ್ದಾರೆ. ಅವರು ಜೀವನದಲ್ಲಿ ಪ್ರಯತ್ನಗಳಿಗೆ ಎಂದೂ ‘ರಜಾ’ ತೆಗೆದುಕೊಂಡಿದ್ದೇ ಇಲ್ಲ. ಅವರ ಬಗ್ಗೆ ಕೋಡಿಬೆಟ್ಟು ರಾಜಲಕ್ಷ್ಮಿ ಅವರ ಬರಹ ಇಲ್ಲಿದೆ.

Read More

ಕತೆ ಹೇಳಿಸಿಕೊಳ್ಳುವ ಉಮ್ಮ, ಪುಸ್ತಕ ಕೊಡಿಸು ಎನ್ನುವ ಬಾಪಾ

ತಾನು ಕತೆಗಾರನೆಂದು ಹೇಳಿಕೊಳ್ಳುವ ಮುನವ್ವರ್‌ ಜೋಗಿಬೆಟ್ಟು ಅವರ ಅಂತರಂಗದಲ್ಲೊಂದು ಹಾಡಿದೆ. ಅದು ಅವರ ಪರಿಸರ ಪ್ರೀತಿಯ ಹಾಡು. ಅದೇ ಪ್ರೀತಿಯಲ್ಲಿ ಅವರು ಕೆಂಡಸಂಪಿಗೆಗೆ ಸರಣಿ ಬರಹಗಳನ್ನು ಬರೆಯುತ್ತಾ ತಮ್ಮ ಬರವಣಿಗೆಯನ್ನು ಮತ್ತಷ್ಟು ಚಂದಮಾಡಿಕೊಂಡರು. ʻಇಷ್ಕಿನ ಒರತೆಗಳುʼ ಎಂಬ ಕವನ ಸಂಕಲನ ಪ್ರಕಟಿಸಿದರು. ಅವರಿಗೆ ಇಂದು ವಿಜಯಕರ್ನಾಟಕ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಬಂದಿದೆ. ಈ ಬಹುಮಾನ ಬಂದ ಖುಷಿಯಲ್ಲಿ ತುಂಬಾ ಮಾತನಾಡಿದರು.

Read More

ಛಂದ ಪ್ರಶಸ್ತಿ ಪಡೆದ ಫಾತಿಮಾ ರಲಿಯಾ….

ಕೆಂಡಸಂಪಿಗೆಯ ಮೂಲಕ ಬರಹಲೋಕಕ್ಕೆ ಕಾಲಿಟ್ಟ ಫಾತಿಮಾ ರಲಿಯಾ ಕವಿತೆಗಳನ್ನು ಬರೆಯಲಾರಂಭಿಸಿ ಪ್ರಬಂಧಗಳನ್ನು ತುಂಬಾ ಪ್ರೀತಿಸಿದರು. ಕರಾವಳಿಯ ಸಾಮಾಜಿಕತೆಯನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವ  ಭರವಸೆಯ ಲೇಖಕಿ. ಅವರ ಕಥಾ ಸಂಕಲನದ ಹಸ್ತಪ್ರತಿಗೆ ಛಂದಪುಸ್ತಕ ಬಹುಮಾನ ಬಂದಿದೆ. ಕವಿತೆಯ ಮೂಲಕ ಸಾಹಿತ್ಯ ಲೋಕ ಪ್ರವೇಶಿಸಿದ ತಾನು ಪ್ರಬಂಧಗಳ ಲೋಕದಲ್ಲಿ ವಿಹರಿಸಿ ಈ ಕಥಾಲೋಕವನ್ನು ಪ್ರವೇಶಿಸಿದ್ದೇನೆ ಎನ್ನುವ ಫಾತಿಮಾ ರಲಿಯಾ ಅವರು ತಮ್ಮಖುಷಿಯನ್ನು ಕೆಂಡಸಂಪಿಗೆಯ ಜೊತೆಗೆ ಹಂಚಿಕೊಂಡರು.  ಅವರೊಡನೆ ನಡೆಸಿದ ಮಾತುಕತೆಯ ಒಂದಿಷ್ಟು ವಿಚಾರಗಳು ಇಲ್ಲಿವೆ.

Read More

ಕೈ ಹಿಡಿದು ಮುನ್ನಡೆಸುವ ಕತೆಗಳೆಂಬ ದೋಣಿಗಳು

ಸೂರ್ಯೋದಯದಲ್ಲೋ, ಸೂರ್ಯಾಸ್ತದಲ್ಲೋ ಆಗಸದಲ್ಲಿ ಚೆಲ್ಲಿ ಹೋದ ಬಣ್ಣಗಳು ಕ್ಷಣ ಕ್ಷಣಕ್ಕೂ ಬದಲಾಗುತ್ತಾ ಹೋದಂತೆ, ಗ್ರಹಿಕೆಗಳು ಒಬ್ಬರಿಂದ ಮತ್ತೊಬ್ಬರಿಗೆ ಬದಲಾಗುತ್ತಲೇ ಇರುತ್ತವೆ. ಒಬ್ಬನೇ ವ್ಯಕ್ತಿಯು ಒಂದೊಂದು ಕಾಲದಲ್ಲಿ ಬದುಕನ್ನು ಗ್ರಹಿಸುವ ರೀತಿಯೂ ಬದಲಾಗಿರುತ್ತದೆಯಲ್ಲವೇ. ಹಾಗೆಯೇ ಈ ಕತೆಗಳು ಕೂಡ ಎಂದೆನಿಸುತ್ತದೆ. ಹಾಗೆ ನೋಡಿದರೆ ಎಷ್ಟೊಂದು ಕಲಾತ್ಮಕವಾದ ಕತೆಗಳನ್ನು ಬರೆದರೂ ʻಕತೆಗಾರರುʼ ರೂಪುಗೊಳ್ಳುವುದು ಓದುಗರ ಮನಸ್ಸಿನಲ್ಲಿ ಅಲ್ಲವೇ.
ಕತೆಗಳ ಜಾಡು ಹಿಡಿದ ಬರಹವೊಂದನ್ನು ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ