Advertisement

ಉಮಾರಾವ್

ಅಂತೂ ಇಂತೂ ಗ್ರೆಗರಿಯವರಿಗೆ ತೀರ್ಪು ಸಿಕ್ಕಿತು

ಎಂಆರ್ ಪಿಎಲ್ ಕಂಪೆನಿಗೆ ತಮ್ಮ ಕೃಷಿ ಜಮೀನನ್ನು ಬಿಟ್ಟುಕೊಡುವುದಿಲ್ಲ ಎಂದು ಹೋರಾಟ ನಡೆಸಿದವರು ಗ್ರೆಗರಿ ಪತ್ರಾವೋ. ಕೊನೆಗೆ ತಮ್ಮ ಫಲವತ್ತಾದ ಕೃಷಿ ಜಮೀನನ್ನು ಬಿಟ್ಟುಕೊಡುವುದು ತೀರಾ ಅನಿವಾರ್ಯವಾದಾಗ, ಜುಜುಬಿ ಬೆಲೆಗೆ ಭೂಮಿ ಬಿಟ್ಟುಕೊಡುವುದಿಲ್ಲ ಎಂಬ ಹೋರಾಟವನ್ನು ನಿರಂತರವಾಗಿ ನಡೆಸಿದವರು. ಅವರ ಹೋರಾಟದ ದೀರ್ಘ ಹಾದಿಯೊಂದಕ್ಕೆ ಈಗ ವಿರಾಮ ಬಿದ್ದಿದೆ. ಸುಪ್ರೀಂ ಕೋರ್ಟ್ ನಲ್ಲಿಅವರು ಎಂಆರ್ ಪಿಎಲ್ ವಿರುದ್ಧ ದಾಖಲಿಸಿದ ಪ್ರಕರಣದಲ್ಲಿ ತೀರ್ಪು ಅವರ ಪರವಾಗಿ ಬಂದಿದೆ.ಗ್ರೆಗರಿ ಕ್ರಮಿಸಿದ ಹಾದಿಯ ಕುರಿತು ಸ್ಥೂಲವಾಗಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ನಾಳೆಗೆಂದು ತೆಗೆದಿರಿಸಿದ ಮುಷ್ಟಿ ಪೃಥುಕ

ನಾಳೆಯೆಂಬುದು ನಿಜವೋ ಸುಳ್ಳೋ ಬೇರೆ ಮಾತು. ಆದರೆ ಇಂದಿನ ಜೀವನವನ್ನು ದಾಟುವುದಕ್ಕಾಗಿ ಪ್ರೇರಣೆಯಾಗಿರುವುದು ಈ ʻನಾಳೆʼಗಳು ಅಲ್ಲವೇ. ಜಗತ್ತಿನ ಎಲ್ಲ ಜೀವಿಗಳೂ ನಾಳೆಗಳನ್ನು ಎಷ್ಟೊಂದು ಜತನ ಮಾಡುತ್ತವೆ. ಅದಕ್ಕಾಗಿ ಸದಾ ಶ್ರಮಿಸುತ್ತಲೇ ಇರುತ್ತವೆ. ಆದರೆ ಅದ್ಯಾಕೋ, ಈ ಜೀವಿಗಳ ಸಾಲಿನಲ್ಲಿ ಮನುಷ್ಯನ ಸ್ವಭಾವ ಮಾತ್ರ ವಿಭಿನ್ನವಾಗಿರುತ್ತವೆ. ಮನುಷ್ಯನೂ ನಾಳೆಗಳ ಬಗ್ಗೆ ಯೋಚಿಸಿದರೂ, ಅದಕ್ಕಾಗಿ ಮಾಡುವ ತಯಾರಿ ಮಾತ್ರ ತದ್ವಿರುದ್ಧವಾದುದು. ಸಂಪತ್ತನ್ನು ಜಮೆ ಮಾಡಿದಷ್ಟೂ ತಮ್ಮ ನಾಳೆಗಳು ಭದ್ರವಾಗಿರುತ್ತವೆ ಎಂದು ಭಾವಿಸುತ್ತ ಎಲ್ಲ ಜೀವಿಗಳಿಗೂ ತೊಂದರೆಯುಂಟು ಮಾಡುತ್ತಾನೆ ಎಂದು ಅನಿಸುತ್ತದೆ.
ಕೋಡಿಬೆಟ್ಟು ರಾಜಲಕ್ಷ್ಮಿಬರೆದ ಲೇಖನ

Read More

ಸುಮ್ಮನಿರುವುದು ಸಾಧ್ಯವಿಲ್ಲ ಎನ್ನುವ ಮಹಾಭಾರತ ಕತೆ

ಮನುಷ್ಯರು ಒಳ್ಳೆಯ ವಿಚಾರಗಳನ್ನೇ ಆಯ್ಕೆ ಮಾಡಿ ಅದೇ ದಾರಿಯಲ್ಲಿ ನಡೆಯಲು ಸಾಯುಜ್ಯ, ಮೋಕ್ಷ ಎಂಬ ಪರಿಕಲ್ಪನೆಗಳನ್ನು ಹಿರಿಯರು ಪ್ರತಿಪಾದಿಸಿದ್ದಾರೆ. ದೇವರು ಎಂಬ ಪರಿಕಲ್ಪನೆಯೂ ಇದೇ ಮಾದರಿಯದು ಎಂದೇ ಇಟ್ಟುಕೊಳ್ಳುವುದಾರೆ, ದೇವರನ್ನು ತಲುಪಲು ಎರಡು ದಾರಿಗಳನ್ನು ಆಯ್ಕೆ ಮಾಡಿಕೊಂಡಿರುವುದು ಪ್ರಧಾನವಾಗಿ ತೋರುತ್ತದೆ. ತಪಸ್ಸು, ಅಧ್ಯಯನ ಅನುಶಾಸನದಂತಹ ವಿಧಾನಗಳು ಒಂದು ದಾರಿ. ಹಾಡು, ನೃತ್ಯ, ಚಿತ್ರ ಮುಂತಾದ ಲಲಿತಕಲೆಗಳ ಮೂಲಕ ನಡೆಯುವ ದೇವರ ಆರಾಧನೆಯು ಇನ್ನೊಂದು ದಾರಿ. ಎರಡೂ ದಾರಿಯನ್ನು ಸದೃಢಗೊಳಿಸಲು ಆಧಾರವಾಗಿ ನಿಲ್ಲುವುದು ಭಾರತ ಕತೆ. ಅದು ಸರಳವಾದ ಓದಿಗೆ ದಕ್ಕುವುದು ವಚನ ಭಾರತ ವೆಂಬ ಕೃತಿಯಲ್ಲಿ. ‘ವಚನ ಭಾರತ’ ಪುಸ್ತಕದ ಓದಿನ ನೆನಪುಗಳನ್ನು ಉಲ್ಲೇಖಿಸಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಸ್ಪರ್ಧೆಗಳ ಗುಂಗಿನಲ್ಲೊಂದು ಕಥಾ ಕಾಲಕ್ಷೇಪ

ಕಾವ್ಯ, ಪ್ರಬಂಧ, ನಾಟಕ, ಪದ್ಯ, ಕಂದ ಪದ್ಯಗಳು, ಚುಟುಕು, ಸುನೀತ ಎಂದೆಲ್ಲ ಹತ್ತಾರು ಪ್ರಕಾರಗಳನ್ನು ನಾವು ಸಾಹಿತ್ಯ ಲೋಕದಲ್ಲಿ ಗುರುತಿಸಿದರೂ, ಈ ಕತೆಯೆಂಬ ಮಾಯಾವಿ ಮಾತ್ರ ಈ ಎಲ್ಲ ಪ್ರಕಾರದೊಳಗೂ, ಹೂವೊಳಗೆ ಕಂಪು ಸೇರಿದಂತೆ ವ್ಯಾಪಿಸಿಕೊಂಡುಬಿಡುತ್ತದೆ. ಕಾವ್ಯದೊಳಗೊಂದು ಕತೆಯ ಛಾಯೆಯಿರುತ್ತದೆಯಲ್ಲವೇ. ಪ್ರಸ್ತುತ ಸಾಹಿತ್ಯ ಲೋಕದ ಸ್ಪರ್ಧೆಗಳನ್ನು ತೆಗೆದುಕೊಂಡರೂ, ಕಥಾ ಸ್ಪರ್ಧೆಗಳು ಸದ್ದು ಮಾಡಿದಷ್ಟು ಇತರ ಸ್ಪರ್ಧೆಗಳು ಸದ್ದು ಮಾಡುವುದು ಅಪರೂಪ. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ