Advertisement

ಎಚ್. ಗೋಪಾಲಕೃಷ್ಣ

ತಾಳ್ಮೆಯೆಂಬ ಕಾವ್ಯಶಕ್ತಿಯ ಧ್ಯಾನದಲ್ಲಿ

ಇತ್ತೀಚೆಗೆ ಟೊಟೊ ಪ್ರಶಸ್ತಿ ಪಡೆದ ಶ್ರೀಕೃಷ್ಣ ದೇವಾಂಗಮಠ, ಬರವಣಿಗೆಯನ್ನೂ ಪೋಟೋಗ್ರಫಿಯನ್ನೂ ಬಹುವಾಗಿ ಇಷ್ಟಪಡುವವರು. ಗದ್ಯ ಓದಲು ಭಾರೀ ತಾಳ್ಮೆ ಬೇಕಾಗುತ್ತದೆ ಎಂದು ಹೇಳುತ್ತಾ, ಬಯಲಿನಲ್ಲಿ ಕೀಟವೊಂದರ ಚಲನೆಯನ್ನು ಸೆರೆ ಹಿಡಿಯಲು ಗಂಟೆಗಟ್ಟಲೆ ‘ಕಮಕ್ ಕಿಮಕ್’ ಎನ್ನದೇ ಕಾಯುವವರು. ವೃತ್ತಿ, ತಿಂಗಳ ಸಂಬಳ, ಬದುಕು ಎಂಬ ಸಾಮಾನ್ಯ ಚೌಕಟ್ಟನ್ನು ದಾಟಿ ಕವಿತೆಗಳನ್ನೂ ಕೀಟಗಳನ್ನೂ ಹುಡುಕುತ್ತ ಅಲೆಯುವುದನ್ನು ಇಷ್ಟಪಡುವವರು.

Read More

ಜಗಳ ನಮ್ಮ ಮನೆದೇವರು

ಜಗಳಗಳೆಂದರೆ ಎಲ್ಲರಿಗೂ ಪ್ರತ್ಯಕ್ಷವಲ್ಲದಿದ್ದರೂ ಪರೋಕ್ಷವಾಗಿಯಾದರೂ ಇಷ್ಟವಾಗುತ್ತದೆ. ಹಸಿವು ನಿದ್ದೆಯ ಅಗತ್ಯವಿದ್ದಂತೆ, ಮನಸ್ಸಿಗೆ ಒಂದಿಷ್ಟು ಜಗಳದ ಅವಶ್ಯಕತೆಯೂ ಇದೆಯೇನೋ. ಆದರೆ ಅದು ಮನುಷ್ಯನ ಬದುಕಿಗೇ ಕುತ್ತು ತಂದಾಗ ಸಮಸ್ಯೆಗಳು ಬೆಳೆಯಲಾರಂಭಿಸುತ್ತವೆ. ಗುಬ್ಬಿಯನ್ನು ಕಂಡರೆ ಅಕ್ಕರೆ ಮೂಡಿದಂತೆ, ಬೆಕ್ಕುಗಳನ್ನು ಕಂಡರೆ ಮುದ್ದು ಬಂದಂತೆ, ಜಗಳಗಳಿಗೂ ಸಾಮಾನ್ಯವಾದುದೊಂದು ಕಾರಣವಿದೆಯೇ.. ಕೋಡಿಬೆಟ್ಟು ರಾಜಲಕ್ಷ್ಮಿ ಬರಹ

Read More

ಭಾಷಾಸತ್ರದ ಕಡೆಗಿನ ಪಯಣದಲ್ಲಿ ಜ್ಞಾನವಿಕಾಸದ ಹೆಜ್ಜೆಗುರುತುಗಳು

ನಾಲ್ಕು ವರ್ಷಗಳ ದೀರ್ಘಕಾಲದ ಬರಹದೊಂದಿಗೆ ರೂಪುಗೊಂಡ ಕಾದಂಬರಿ ಎನ್ನಬಹುದಾದ ಪ್ರಕಾರದಲ್ಲಿರುವ ಕೃತಿ ‘ವರ್ಣಕ’. ಹಾಗೆ ನೋಡಿದರೆ, ಇದನ್ನು ಕಾದಂಬರಿ ಎಂದರೆ ತುಸು ಹೃಸ್ವವಾದದಂತೆ ಭಾಸವಾಗುತ್ತದೆ. ಬಣ್ಣದ ಹೂವುಗಳ ಮಾಲೆಯನ್ನು ನೇಯ್ದಂತೆ, ಭಾಷಾ ಕ್ಷೇತ್ರದ ವೈವಿಧ್ಯಮಯ ಬೆಳವಣಿಗೆಗಳನ್ನು ಕಥೆಯೆಂಬ ಸೂತ್ರದಲ್ಲಿ ಲೇಖಕರು ಬಂಧಿಸಿದ್ದಾರೆ . ಅಲ್ಲಿ ಕಥೆಯ ಮುನ್ನಡೆಗೋಸ್ಕರ ವಿಸ್ಮಯ, ಭ್ರಮೆಯೆಂಬಂತಹ ಕಲ್ಪನೆಗಳ ನೆರವನ್ನು ಪಡೆದಿದ್ದಾರೆ. ಭಾರತೀಯ ಭಾಷಾ ಗಣಕ ಪಿತಾಮಹ ಕಿನ್ನಿಕಂಬಳ ಪದ್ಮನಾಭ ರಾವ್‍ ಬರೆದ ‘ವರ್ಣಕ’ ಕಾದಂಬರಿಯ ಕುರಿತು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ  ಇಲ್ಲಿದೆ. 

Read More

ಅಂತಿಮ ನ್ಯಾಯಾಧೀಶರು ಜನರೇ ಅಲ್ವೇ..

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕಿ ಮಹಾಶ್ವೇತಾ ದೇವಿ ಅವರು ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡವರು. ದೇಶದ ವಿವಿಧೆಡೆಗಳಲ್ಲಿ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ಜೊತೆಗೆ ದೀರ್ಘಕಾಲ ಉಳಿದುಕೊಂಡು ಅವರ ಹಾಡುಕಥೆಗಳನ್ನು ಗ್ರಹಿಸಲು ಪ್ರಯತ್ನಿಸುತ್ತ, ಅವರ ಜೀವನಮೌಲ್ಯಗಳ ಕುರಿತು ಕಾದಂಬರಿ, ಕತೆಗಳನ್ನು ಬರೆದವರು. ಅಷ್ಟು ಮಾತ್ರವಲ್ಲ, ಅವರ ಹಕ್ಕುಗಳ ಪರವಾಗಿ ಹೋರಾಡಿದರು. ಜನವರಿ ೧೪ ಅವರು ಹುಟ್ಟಿದ ದಿನ. ಅವರನ್ನು ಕೇರಳದಲ್ಲಿ ಭೇಟಿ ಮಾಡಿದ ಸಂದರ್ಭವನ್ನು ನೆನಪಿಸಿಕೊಂಡು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ

Read More

ಸಮಯದ ಆಡಿಟಿಂಗ್ ಎಂಬೊಂದು ಲಾಭದಾಯಕ ಸಂಗತಿ

ಡಿಜಿಟಲ್ ಲೋಕವು ಬದುಕಿಗೆ ವೇಗವನ್ನು ಕೊಡುತ್ತದೆ. ಎಲ್ಲಿಗೋ ಪ್ರಯಾಣಿಸುವುದಕ್ಕಾಗಿ ಸಮಯವನ್ನು ಮೀಸಲಿಡಬೇಕಿಲ್ಲ, ಯಾವುದೋ ವಸ್ತುವನ್ನು ತರಿಸಿಕೊಳ್ಳಲು ಸಮಯವನ್ನು ಖರ್ಚು ಮಾಡಬೇಕಿಲ್ಲ. ತಿಂಡಿ ತಿನಿಸು, ಉಡುಪು, ಸಾಮಾಜಿಕ ಚರ್ಚೆಗಳು, ಕಾರ್ಯಕ್ರಮಗಳು, ಸಂಭ್ರಮಗಳೆಲ್ಲವೂ ಡಿಜಿಟಲ್ ಲೋಕವನ್ನು ಸರ ಸರನೇ ಪ್ರವೇಶಿಸಿಬಿಟ್ಟಿವೆ. ಹೀಗೆ ನಮಗೆ ಉಳಿತಾಯವಾಗುವ ಸಮಯವೆಷ್ಟು, ಅದನ್ನು ನಾವು ಹೇಗೆಲ್ಲಾ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ