“ಅಳವು ಅರಿಯದ ಭಾಷೆ” ಎಂಬ ಸಾವಿನ ಗಂಟೆ: ಕೆ. ಪಿ. ಸುರೇಶ ಬರಹ
ಈ ಮಾತು ಎಷ್ಟು? ಬೆಳಗಿನವರೆಗೆ ಪ್ರಸಂಗವನ್ನು ಕಟ್ಟಬೇಕಾದ ಕಾರಣ ಕ್ವಚಿತ್ತಾದ ಚೌಕಟ್ಟಿನ ಮಾತು ಪಾತ್ರಧಾರಿಗೆ ಸಾಲುವುದಿಲ್ಲ. ಆತ ಅಕ್ಷಯಾಂಬರದ ತರ ಮಾತಿನ ಎಳೆಗಳನ್ನು ಪೋಣಿಸುತ್ತಾ ಹೋಗಬೇಕು. ಈ ಸ್ವಾತಂತ್ರ್ಯವೇ ಯಕ್ಷಗಾನದ ವೃತ್ತಿ ಪ್ರದರ್ಶನಗಳ ಜೀವಾಳ ಮತ್ತು ಶಾಪ. ಇದು ಕಲಾವಿದರದ್ದೂ ಕೂಡ. ಹೀಗಾದಾಗ ಮಾತು ಸಡಿಲವಾಗುತ್ತಾ ಸ್ವೇಚ್ಛೆಯಾಗುತ್ತಾ ಹೋಗುವ ವಿಧಿ ಈ ಪ್ರಕಾರದೊಳಗೇ ಅಂತರ್ಗತವಾಗಿದೆ. ಈಗ ಹರಡಿರುವ ಹತ್ತಾರು ಮೇಳಗಳ ಕಲಾವಿದರ ಸಂಖ್ಯೆ ಮತ್ತು ಅವರ ಪ್ರತಿಭಾ ಶ್ರೇಣಿಯನ್ನು ಗಮನಿಸಿದರೆ ವಿದ್ವತ್ತು ಮತ್ತು ಮಾತಿನ ಪ್ರೌಢಿಮೆಗಳೆರಡೂ ಸಮಪಾಕಗೊಂಡ ಕಲಾವಿದರ ಪ್ರಮಾಣ ತೀರ ಕಡಿಮೆ ಸಂಖ್ಯೆಯದ್ದು.
ನಿತ್ಯಾನಂದ ಬಿ. ಶೆಟ್ಟಿ ಬರೆದ “ಅಳವು ಅರಿಯದ ಭಾಷೆ” ಕೃತಿಯ ಕುರಿತು ಕೆ.ಪಿ. ಸುರೇಶ ಬರಹ
