Advertisement

ಚಿತ್ರಾ ವೆಂಕಟರಾಜು

‘ಸಮಷ್ಟಿ ನೀತಿ’ ಒಪ್ಪುವ ಔಚಿತ್ಯದ ಚರ್ಚೆ

ಯಕ್ಷಗಾನಕ್ಕೆ ಲಕ್ಷಣಗ್ರಂಥವಿಲ್ಲ, ಪ್ರಪಂಚದ ಹಲವು ಪ್ರದರ್ಶನ ಕಲೆಗಳಿಗೂ ಶಾಸ್ತ್ರ ಹೇಳುವ ‘ಪಠ್ಯ’ಗಳಿಲ್ಲ. ನಾಟ್ಯಶಾಸ್ತ್ರ, 11 ನೇ ಶತಮಾನದಲ್ಲಿ ಕ್ಷೇಮೆಂದ್ರ ಬರೆದ ‘ಔಚಿತ್ಯ ವಿಚಾರ ಚರ್ಚಾ’ ಇತ್ಯಾದಿ ಗ್ರಂಥಗಳಿದ್ದರೂ ಆ ಕಾಲದಲ್ಲೇ ಕಲಾಪ್ರಕಾರಗಳು ಅವುಗಳನ್ನು ಎಷ್ಟು ಅನುಸರಿಸುತ್ತಿದ್ದವೊ ಗೊತ್ತಿಲ್ಲ. ಆದರೆ ಪಠ್ಯಗಳು ಒಂದಕ್ಕೊಂದು ಪ್ರತಿಕ್ರಿಯಿಸುತ್ತಾ, ಒಂದನ್ನೊಂದು ವ್ಯಾಖ್ಯಾನಿಸುತ್ತಾ ತಮ್ಮದನ್ನು ಸೇರಿಸುವ ‘ಅಂತರ್ ಪಠ್ಯೀಯತೆ’ಯು ಪಠ್ಯ ಮತ್ತು ಪ್ರಯೋಗಕ್ಕೂ ಅನ್ವಯಿಸುತ್ತದೆ.  ಕೃತಿ ಆರ್. ಪುರಪ್ಪೇಮನೆ ಬರೆಯುವ ‘ಯಕ್ಷಾರ್ಥ  ಚಿಂತಾಮಣಿ’ ಸರಣಿಯಲ್ಲಿ ಯಕ್ಷಗಾನ ಔಚಿತ್ಯದ ಕುರಿತ ಲೇಖನ. 

Read More

ಯಕ್ಷಗಾನದ ವಿಮರ್ಶೆಯಲ್ಲಿ ‘ಔಚಿತ್ಯ’ದ ಪ್ರಯೋಗಗಳು…

ಯಕ್ಷಗಾನದಲ್ಲಿ ಈ ಪೂರ್ಣತೆಯ ಅರ್ಥವನ್ನೇ ಔಚಿತ್ಯ ಪಡೆದುಕೊಳ್ಳುವುದಾದರೂ, ಇಲ್ಲಿ ನಿತ್ಯದ ಸಮಾಜದೊಂದಿಗೆ ವ್ಯವಹರಿಸುವ ಯಕ್ಷಗಾನವು ಬದಲಾಗುತ್ತಿರುವ ತನ್ನ ಸುತ್ತಮುತ್ತಲಿನ ಸಮಾಜದ ಕ್ರಮಗಳ ಜೊತೆಗೆ ಚೌಕಾಶಿ ಮಾಡುತ್ತಾ ವ್ಯವಹರಿಸಬೇಕಾಗುತ್ತದೆ. ಅಂದರೆ ಹಿಂದಿನ ಜೀವನ ಕ್ರಮದ ನಡಾವಳಿಗೂ ಮತ್ತು ಈಗಿನ ಸಮಾಜದ ಕ್ರಮಗಳಿಗೂ ಕಲಾಪ್ರಕಾರಗಳು ಒಂದು ಸೇತುವೆಯನ್ನು ಕಟ್ಟಿಕೊಳ್ಳುತ್ತಾ ಹೋಗಬೇಕಾಗುತ್ತದೆ. ಯಕ್ಷಗಾನದ ‘ಮೂಲ ಉದ್ದೇಶ’ ಪುರಾಣದ ಪ್ರಸರಣವಾಗಿರಲಿ, ಅಥವಾ ಪ್ರಸಂಗ ಪಠ್ಯವನ್ನು ಗಾನ, ನೃತ್ಯ ಮಾತಿನಲ್ಲಿ ಪ್ರೇಕ್ಷಕರಿಗೆ ತೋರಿಸುವುದಷ್ಟೇ ಆಗಿರಲಿ, ಅದು ಈಗಿನ ಕಾಲಕ್ಕೆ ಸಂವಹನವಾಗಬಹುದಾದ….

Read More

ಸ್ವಾಯತ್ತತೆಯೆಡೆಗೆ ತುಡಿಯುವ ದಾಕ್ಷಾಯಿಣಿಯ ಪಾತ್ರ

ಸಂಸಾರಕ್ಕೆ ಯೋಗ್ಯವೆನಿಸುವ ಲಕ್ಷಣಗಳಾವುವೂ ಶಿವನಲ್ಲಿ ಇರುವಂತೆ ನಮಗೆ ಕಾಣಿಸುವುದಿಲ್ಲ. ಅವಳ ಅಪ್ಪನಾದ ದಕ್ಷನಿಗೂ ಹಾಗೆ ಕಂಡಿರಬೇಕು. ಇಲ್ಲಿ ನಾವು ಗಮನಿಸಬೇಕಾದ್ದು, ಶಿವನ ಅಲೆಮಾರಿತನ, ಒರಟುತನವು ‘ಗೃಹಸ್ಥ’ ನ ಲಕ್ಷಣಕ್ಕೆ ತೀರಾ ವಿರುದ್ಧವಾದುದು ಎನ್ನುವುದನ್ನು. ಲಹರಿಯಲ್ಲಿ ಯೋಚಿಸುತ್ತಾ ಹೋದರೆ, ಇದು ಹಲವು ಉತ್ತರಗಳನ್ನು ಮೇಲಿನ ಪ್ರಶ್ನೆಗಳಿಗೆ ಕೊಡುತ್ತಾ ಹೋಗುತ್ತದೆ.

Read More

ಒಂದು ದಕ್ಷಾಧ್ವರ ಪ್ರದರ್ಶನದಲ್ಲಿ ಜಗನ್ಮಾತೆಯಾಗುವ ದಾಕ್ಷಾಯಿಣಿ

ಒಂದು ನಿರ್ದಿಷ್ಟ ಪಠ್ಯವು ಇವತ್ತಿನ ತನಕ ರಂಗದಲ್ಲಿ ವ್ಯಾಖ್ಯಾನಗೊಂಡ ಲೋಕದೃಷ್ಟಿಯೊಳಗೆ ಮತ್ತು ಒಂದು ಕಲಾರೂಪದ ಮಿತಿಯೊಳಗೇ ಹೇಗೆ ವಿಸ್ತಾರಗೊಳ್ಳುತ್ತದೆ ಎನ್ನುವುದನ್ನು ನೋಡದಿದ್ದರೆ ಪ್ರದರ್ಶನಕ್ಕೆ ನ್ಯಾಯ ಒದಗಿಸಿದಂತಾಗುವುದಿಲ್ಲ. ಒಂದು ಪಾತ್ರವನ್ನು ಹೇಗೆ ಆ ಮಿತಿಯೊಳಗೇ ಅನಾವರಣಗೊಳಿಸಿ, ಬೇರೆ ರೀತಿಯ ಅಸ್ಮಿತೆಯನ್ನು ಸ್ಥಾಪಿಸಬಹುದೆಂದು…

Read More

ನದಿಯಂತೆ ಸಾಗುವ ಕತೆಗಳಿಗೆ ಮೂಲದ ಹಂಗೇಕೆ

ಎಲ್ಲವನ್ನೂ ಒಂದು ವ್ಯಾಖ್ಯಾನಕ್ಕೆ ಬಗ್ಗಿಸುವುದು, ನಮ್ಮ ಅನುಭವಕ್ಕೆಲ್ಲ ಹೆಸರಿಡುವುದು, ಖಚಿತತೆಗೆ ತಹತಹಿಸುವುದು ಅಥವಾ ಎಲ್ಲದಕ್ಕೂ ಸ್ಥಿರವಾಗಿರುವ ಕಠಿಣವಾಗಿರುವ ಉತ್ತರವೇ ಬೇಕೆಂದು ನಮಗೆ ಅನ್ನಿಸುವುದು, ಬದಲಾಗುತ್ತಿರುವ ಸಮಾಜದ ಅತಂತ್ರತೆಯನ್ನು ನಿಭಾಯಿಸುವ ತಂತ್ರಗಾರಿಕೆ ಇರಬಹುದು. ಹಿಂದಿನದನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ನಮ್ಮ ಅಧಿಕಾರ, ಸ್ಥಾನವನ್ನು ಉಳಿಸಿಕೊಳ್ಳುವ ಬಯಕೆಯಾಗಿಯೂ ಬಂದಿರಬಹುದು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ