ಮರಗಳೂ ಮಾತಾಡುತ್ವೆ ಗೊತ್ತಾ!: ಕ್ಷಮಾ ವಿ.ಭಾನುಪ್ರಕಾಶ್ ಬರೆಯುವ ಕಥಾ ಸರಣಿ
“ಈ ವೀವಿಲ್ ಆಗ್ಲೀ, ಅಥವಾ ಯಾವುದೇ ಪ್ರಭೇದದ ಕೀಟವಾಗ್ಲೀ, ಅದರ ಬಾಯನ್ನು ಎಲೆಗಳಿಗೋ, ಹಣ್ಣು-ಕಾಯಿಗಳಿಗೋ ಹಾಕಿದ ಕ್ಷಣವೇ, ಅದರ ಜೊಲ್ಲು ಅಥವಾ ಎಂಜಿಲಿರತ್ತಲ್ಲಾ? ಅದರ ರುಚಿಯನ್ನ ಗುರುತಿಸಿದ ಮರಗಳು, ಕರೆಕ್ಟಾಗಿ ಅದು ಯಾವ ಪ್ರಭೇದದ ಕೀಟ ಅಂತ ಕಂಡುಹಿಡಿದು ಬಿಡತ್ವೆ. ಪ್ರತೀ ಜೀವಿಯ ಜೊಲ್ಲೂ ಜೀವರಾಸಾಯನಿಕವಾಗಿ ವಿಶಿಷ್ಟವೇ. ಈ ಜೊಲ್ಲಿನ ರುಚಿಯನ್ನು ಗುರುತಿಸಿದ ಮರಗಳು, ಆ ಕೀಟವನ್ನ ಓಡಿಸಿ, ತಮ್ಮ ಎಲೆಗಳನ್ನ, ಕಾಯಿಗಳನ್ನ ಕಾಪಾಡಿಕೊಳ್ಳೊಕೆ ಒಂದು ಪ್ಲಾನ್ ಮಾಡತ್ವೆ. ಏನು ಪ್ಲಾನ್ ಇರ್ಬಹುದು ಹೇಳಿ ನೋಡೋಣ?” ಎಂದು ಪ್ರಶ್ನಿಸಿದಳು.
ಕ್ಷಮಾ ವಿ. ಭಾನುಪ್ರಕಾಶ್ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ದಲ್ಲಿ ಒಂಭತ್ತನೆಯ ಕತೆ

