Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಆರಕ್ಕೇರದ ಮೂರಕ್ಕಿಳಿಯದ ಬಡವರ ಬದುಕು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿದ್ದ ಮಣಿ, “ಸರ್ ಅವರೆಲ್ಲರ ಹೆಸರುಗಳು ಏನೇನು ಅಂತ ಗೊತ್ತ ಸರ್?” ಎಂದ. ಲೋಗನಾಥನ್, “ಗೊತ್ತಿಲ್ಲ” ಎಂದ. ಮಣಿ “ಕರ್ಣನ್, ಧರ್ಮರಾಯನ್, ಭೀಮನ್, ಅರ್ಜುನನ್, ನಖುಲನ್ ಮತ್ತು ಸಹದೇವನ್” ಎನ್ನುತ್ತಿದ್ದಂತೆ, ಲೋಗನಾಥನ್ “ಇನ್ನೂ ಮೂವರ ಹೆಸರು?” ಕೇಳಿದರು. ಗೋವಿಂದ, “ಮೊದಲ ಇಬ್ಬರು ಸತ್ತೋದರಂತೆ ಸರ್. ಐದು ಜನ ಗಂಡು ಮಕ್ಕಳಾದ ಮೇಲೆ ನಾನು ಹುಟ್ಟಿ, ನನಗೆ ಗೋವಿಂದಾ ಅಂತ ಹೆಸರು ಇಟ್ಟ ಮೇಲೆ ನಮ್ಮಮ್ಮನಿಗೆ ಮಕ್ಕಳಾಗುವುದು ನಿಂತೋಯಿತಂತೆ” ಎಂದ ಗೋವಿಂದನೆ ಬಿದ್ದೂಬಿದ್ದು ನಕ್ಕ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಮಿಂಚಿಹೋದ ಕಾಲ….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಸೆಲ್ವಿ ಗಣಿ ಕಾರ್ಮಿಕ ಮಣಿಯನ್ನು ಮದುವೆ ಮಾಡಿಕೊಂಡಿದ್ದು. ಮಣಿ ತಂದೆ ಸೆಲ್ವಮ್ ಅಪಘಾತದಲ್ಲಿ ಸತ್ತುಹೋಗಿದ್ದು. ಅವಳ ತಂದೆ ಅಯ್ಯಪ್ಪನಿಗೆ ಸಿಲಿಕೋಸಿಸ್ ಬಂದು ಸತ್ತುಹೋಗಿದ್ದು. ಮಣಿ ಮತ್ತು ಸೆಲ್ವಿಯ ಮಧ್ಯೆ ತೊಂದರೆಗಳು; ಹೀಗೆ ಸಾಲು ಸಾಲಾಗಿ ಅವಳನ್ನು ಕಾಡತೊಡಗಿದವು. ಇಪ್ಪತ್ತು ವರ್ಷಗಳ ಹಿಂದೆ ಸೆಲ್ವಿ ತಾನು ಬಸರಿಯಾದಾಗ ಅಪ್ಪ ಅಮ್ಮನಿಗೆ ಹೇಳಿ ಬಸರಿ ತೆಗೆಸಿ ಡಿಗ್ರಿ ಮುಗಿಸಿ ಒಂದು ಕೆಲಸಕ್ಕೆ ಸೇರಿಕೊಂಡು ಬೇರೆ ಯಾರನ್ನಾದರೂ ಮದುವೆ ಮಾಡಿಕೊಂಡಿದ್ದರೆ? ತನ್ನ ಬದುಕು ಈ ರೀತಿ ಇರುತ್ತಿರಲಿಲ್ಲ!
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಬದುಕೆಂದರೆ ಜಟಕಾ ಬಂಡಿಯೇ ಇನ್ನೇನೂ ಅಲ್ಲ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿ ಸ್ಟೂಲ್ ಮೇಲೆ ಕುಳಿತಿರುವ ವಿಜಯ ಕೂಡ ಸಣ್ಣಗೆ ಇಳಿದುಹೋಗಿದ್ದಾಳೆ. ಆದರೂ ಅವಳ ಮುಖದ ಮೇಲಿನ ಕಾಂತಿ ಇನ್ನೂ ಒಂದಷ್ಟು ಉಳಿದುಕೊಂಡಿದೆ. ಅವಳ ಗಂಡ ಚಿನ್ನದ ಗಣಿಗಳಲ್ಲಿ ಕೆಲಸ ಮಾಡುತ್ತಿರುವ ಜ್ಞಾಪಕದಂತೆ ಅವಳ ಕಿವಿಗಳಲ್ಲಿ ಚಿನ್ನದ ಓಲೆಗಳು ಕಾಣಿಸುತ್ತಿವೆ. ವಾರ್ಡ್‌ನ ಎರಡೂ ಕಡೆ ಗೋಡೆಗಳ ಪಕ್ಕ ಸಾಲಾಗಿ ಹಾಸಿರುವ ಹಾಸಿಗೆಗಳ ಮೇಲೆ ಗಣಿ ಕಾರ್ಮಿಕರು ಹಾಸಿಗೆಗಳಲ್ಲಿ ಕುಳಿತು ಮಲಗಿ ಮಾತನಾಡುತ್ತಿದ್ದಾರೆ. ಈ ವಾರ್ಡ್‌ನಲ್ಲಿ ಬರೀ ಗಣಿ ರೋಗಗಳಿಂದ ಬಳಲುತ್ತಿರುವ ಕಾರ್ಮಿಕರನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೇಳನೆಯ ಕಂತು ನಿಮ್ಮ ಓದಿಗೆ

Read More

ಹಸೆಮಣೆಯೇರಿದ ತಾಯಿ…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪದ್ಮನಾಭನ್, ಸುಮತಿ ಕೊರಳಿಗೆ ತಾಳಿ ಕಟ್ಟುತ್ತಾನೆ. ಮದುವೆ ನಡೆಸುತ್ತಿದ್ದ ಹಿರಿಯಾತ ಎದ್ದು ಕುಂಡದ ಸುತ್ತಲೂ ಏಳು ಸುತ್ತುಗಳನ್ನು ಹಾಕುವಂತೆ ಹೇಳುತ್ತಾರೆ. ಸೆಲ್ವಿ ನಿಧಾನವಾಗಿ ಹೊಟ್ಟೆಯನ್ನು ಹಿಡಿದುಕೊಂಡು ಎದ್ದುನಿಂತು ಗಂಡನ ಹಿಂದೆ ನಡೆಯುತ್ತಾಳೆ. ಸುತ್ತಲೂ ನೆರೆದಿದ್ದವರೆಲ್ಲ ಸೆಲ್ವಿಯ ಹೊಟ್ಟೆಯನ್ನೇ ನೋಡುತ್ತಾರೆ. ಸೆಲ್ವಿ ಕ್ಲಾಸ್‌ಮೇಟ್ ಸ್ವಾಮಿ ಗುಂಪು ಮತ್ತು ಹುಡುಗಿಯರ ಗುಂಪು ಬೆರಗಾಗಿ ನೋಡುತ್ತಾರೆ. ಮದುವೆ ಮುಗಿದು ಎಲ್ಲರೂ ಅವರನ್ನು ವಿಶ್ ಮಾಡಿ ಪಕ್ಕದಲ್ಲಿದ್ದ ಪೆಂಡಾಲ್ ಒಳಕ್ಕೆ ಊಟಕ್ಕೆ ಹೊರಡುತ್ತಾರೆ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ನನಸಾಗದ ಕನಸುಗಳು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ವಿಜಯ ಮತ್ತು ಅಯ್ಯಪ್ಪನಿಗೆ ವಿಷಯದ ಗಾತ್ರ ಅರ್ಥವಾಯಿತು. ಕನಕ ಟೀ ಮಾಡಿಕೊಟ್ಟು ಕುಡಿದರು. ಅಷ್ಟರಲ್ಲಿ ಮಣಿ ಬಂದ. ಸಮತಿಯನ್ನು ಕರೆದು ಒಂದು ತಟ್ಟೆಯಲ್ಲಿ ತೆಂಗಿನಕಾಯಿ ಜೊತೆಗೆ ಎಲ್ಲವನ್ನು ಇಟ್ಟು ಕೊಟ್ಟಳು. ವಿಜಯ ತೆಗೆದುಕೊಳ್ಳುತ್ತ ಈಹೊತ್ತಿನಿಂದ “ನೀವು ನಾವು ನೆಂಟರಾದೆವು” ಎಂದಳು. ಸುಮತಿ ಎಲ್ಲವನ್ನೂ ಒಂದು ಸಣ್ಣ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಕೊಟ್ಟಳು. ವಿಜಯ, ಸುಮತಿಯನ್ನು ನೋಡುತ್ತ ಮನಸ್ಸಿನಲ್ಲಿ ಏನೋ ಲೆಕ್ಕಾಚಾರ ಹಾಕಿಕೊಳ್ಳುತ್ತಾ ಹಾಗೇ ಕುಳಿತುಕೊಂಡಿದ್ದಳು. ಅಯ್ಯಪ್ಪ, “ಹೋಗೋಣವ?” ಎಂದ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ