Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಅರ್ಥವಾಗದ ವಯಸ್ಸು ಏನೆಲ್ಲ ಮಾಡಿಸುತ್ತದೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಅಯ್ಯಪ್ಪ ಮತ್ತೆ ಹೊರಕ್ಕೆ ಬಂದು ಕಲ್ಲು ಬಂಡೆಯ ಮೇಲೆ ಕುಳಿತುಕೊಂಡು ಅಂಗೈಯಿಂದ ಜೋರಾಗಿ ಕಲ್ಲು ಬಂಡೆಗೆ ಹೊಡೆದು ಕೈಕೈ ಹಿಸುಕಿಕೊಂಡರು. ರಾತ್ರಿ ಊಟದ ಸಮಯವಾಗಿ ವಿಜಯ ಊಟದ ತಟ್ಟೆ ಮತ್ತು ನೀರು ಅಯ್ಯಪ್ಪನಿಗೆ ತಂದುಕೊಟ್ಟು ಬಾಗಿಲು ಮುಂದೆ ಕೆಳಗಡೆ ಕುಳಿತುಕೊಂಡಳು. ಅಯ್ಯಪ್ಪ ಊಟ ಮಾಡುತ್ತ, “ಈ ಹುಡುಗಿ ಕಾಲೇಜ್ ಓದು ಮುಗಿದಂತೆಯೇ. ನಮ್ಮ ಮನೆಗಳಲ್ಲಿ ಹೆಣ್ಣು ಮಕ್ಕಳು ಇದುವರೆಗೂ ಯಾರೂ ಓದಿರಲಿಲ್ಲ. ಈ ಹುಡುಗಿಯನ್ನಾದರೂ ಚೆನ್ನಾಗಿ ಓದಿಸೋಣ ಅಂದುಕೊಂಡಿದ್ದೆ” ಎಂದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಒಳಗೊಂದು ಪರಿಸ್ಥಿತಿ.. ಹೊರಗೊಂದು ಪರಿಸ್ಥಿತಿ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮಣಿ, “ಸೆಲ್ವಿ ನನ್ನ ಮಾತು ಕೇಳು. ಅಬಾರ್ಶನ್ ಮಾಡಿಕೊಂಡರೆ ಎಲ್ಲವೂ ಸರಿಯೋಗುತ್ತದೆ. ಮುಂದೆ ಅಂತಹ ತಪ್ಪು ನಡೆಯದಂತೆ ನೋಡಿಕೊಳ್ಳೋಣ. ನೀನು ಮುಂದಕ್ಕೆ ಓದಬಹುದು. ನಾನೂ ಹೇಗಾದರು ಮಾಡಿ ರಾತ್ರಿ ತರಗತಿಗಳಿಗೆ ಹೋಗಿ ಡಿಗ್ರಿ ಮುಗಿಸಬಹುದು. ಕಾಲೇಜಿನಲ್ಲಿ ಹೇಗೊ ರಾತ್ರಿಯೊತ್ತು ಆರ್ಟ್ ತರಗತಿಗಳಿಗೆ ಪಾಠ ಮಾಡ್ತಾರೆ” ಎಂದ. ಸೆಲ್ವಿ, “ಇಲ್ಲ ನಾನು ಅಬಾರ್ಶನ್ ಮಾತ್ರ ಮಾಡಿಕೊಳ್ಳುವುದಿಲ್ಲ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಕಪ್ಪು ಸುರಂಗಗಳು ಮತ್ತು ಕಾರ್ಮಿಕರ ಭವಣೆಗಳು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಮೊದಲನೇ ದಿನ ಕೆಲಸ ಮುಗಿಸಿದ ಮಣಿ ಸಂಪೂರ್ಣವಾಗಿ ಬೆವರಿನಿಂದ ಒದ್ದೆಯಾಗಿಹೋಗಿದ್ದ. ನಂತರ ಪಂಜರದ ಮೂಲಕ ನೆಲದ ಮೇಲಕ್ಕೆ ಬರುವಷ್ಟರಲ್ಲಿ ಸುಸ್ತಾದರೂ ಹೊಸ ಜಗತ್ತಿಗೆ ಬಂದಂತೆ ಆಹ್ಲಾದಕರವಾಗಿ ಕಾಣುತ್ತಿತ್ತು. ಈ ಗಣಿ ಕೆಲಸವನ್ನು ಖಂಡಿತ ಮಾಡಬಾರದು. ಓದು ಮುಂದುವರಿಸಿ ಡಿಗ್ರಿ ಮುಗಿಸಿ ಬೇರೆ ಯಾವುದಾದರು ಸರ್ಕಾರಿ ಇಲಾಖೆಯಲ್ಲಿ ಕೆಲಸಕ್ಕೆ ಸೇರಿಕೊಳ್ಳಬೇಕು ಎಂದುಕೊಳ್ಳುತ್ತ ಸೈಕಲ್ ತುಳಿಯುತ್ತಾ ಮನೆ ಕಡೆಗೆ ಹೊರಟ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ

Read More

ಮೊಗ್ಗಿನ ಜಡೆಯ ಹುಡುಗಿಯರು…: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಎದುರಿಗೆ ಸಿಕ್ಕಿದವರಿಗೆಲ್ಲ ಮಣಿ ತನ್ನ ಕೆಲಸದ ಬಗ್ಗೆ ಹೇಳಿಕೊಂಡ. ಕಮ್ಯೂನಿಟಿ ಹಾಲ್ ಒಳಕ್ಕೆ ಹೋಗಿ ಅಲ್ಲಿ ಇರುವವರಿಗೆಲ್ಲ ಹೇಳಿದ. ಮಣಿಗೆ ಏನು ಮಾಡಬೇಕೊ ಯಾರಿಗೆಲ್ಲ ಹೇಳಬೇಕೊ ಒಂದೂ ಅರ್ಥವಾಗಲಿಲ್ಲ. ಅವನ ಖುಷಿಗೆ ಪಾರವೇ ಇರಲಿಲ್ಲ. ಸೆಲ್ವಿಗೆ ಹೇಳುವುದು ಹೇಗೆ? ಆಲೋಚಿಸತೊಡಗಿದ. ರಾತ್ರಿ ಅವರ ಕಾಲೋನಿಗೆ ಹೋಗುವುದು ಸರಿಯಲ್ಲ. ನಾಳೆ ಹೇಳಿದರೆ ಆಯಿತು ಎಂದುಕೊಂಡ. ಕೊನೆಗೆ ಎಲ್ಲಾ ಸುತ್ತಿಕೊಂಡು ಬಂದು ಕತ್ತಲಲ್ಲಿ ಕಲ್ಲು ಬಂಡೆಯ ಮೇಲೆ ಸೀನ ಮತ್ತು ಮಣಿ ಕುಳಿತುಕೊಂಡರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಬದುಕಿನ ತಿರುವುಗಳು….: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಬೀದಿಯಲ್ಲಿ ಬರುವವರು ಹೋಗುವವರು ಹುಡುಗಿಯರನ್ನು ನೋಡಿಕೊಂಡು ಹೋಗುತ್ತಿದ್ದರು. ಕೆಲವು ಹೆಣ್ಣುಮಕ್ಕಳು ಅವರಿಬ್ಬರ ಸುತ್ತಲೂ ನಿಂತುಕೊಂಡು ಹೂವಿನ ಜಡೆಗಳನ್ನು ಮತ್ತು ಅವರಿಬ್ಬರನ್ನೂ ನೋಡಿ ಒಳಗೊಳಗೆ ನಾವೂ ಇಂತಹ ಮಲ್ಲಿಗೆ ಮೊಗ್ಗಿನ ಜಡೆಗಳನ್ನ ಹಾಕಿಕೊಂಡರೆ ಹೇಗಿರುತ್ತದೆ ಎನ್ನುವ ಕನಸಿನಲ್ಲಿ ನಿಂತಕಡೆಯೇ ತೇಲಾಡುತ್ತಿದ್ದರು. ಪಕ್ಕದ ಮನೆಗಳ ಕೆಲವು ಮಹಿಳೆಯರು ಬಂದು “ಯಾರು ಈ ಮೊಗ್ಗಿನ ಜಡೆಗಳನ್ನು ಹಾಕಿದ್ದು?” ಎಂದಾಗ ಪಕ್ಕದಲ್ಲಿದ್ದ ಮಹಿಳೆಯೊಬ್ಬರು “ಇನ್ಯಾರು ಅಲಮೇಲು. ವೆಲ್ಲೂರು ಕಡೆಯವರು ಹೂಕಟ್ಟುವುದರಲ್ಲಿ ತುಂಬಾ ಫೇಮಸ್ ಅಲ್ಲವೇ?” ಎಂದಳು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹತ್ತನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ