Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ನಾವೂನೂ ಹಕ್ಕಿಗಳಾಗೋಣ ಬಾರಾ: ಮಹಾಲಕ್ಷ್ಮೀ ಕೆ. ಎನ್. ಬರಹ

ರೇಷ್ಮೆ ಲಂಗದ ಅಕ್ಕ ಮತ್ತು ಅವಳ ಪುಟ್ಟ ತಮ್ಮ ಹಿಡಿಯಲು ಹೋದಾಗ ಕೈಗೆ ಸಿಗದವು, ಮನುಷ್ಯ ಮುಟ್ಟಿದರೆ ತನ್ನ ಮೈಯನ್ನ ಸ್ವಚ್ಛ ಮಾಡಿಕೊಳ್ಳುವಂತವು, ಈ ನೆಲದಲ್ಲಿ ನಿಧಿಯಿದೆ; ಏಳು ಎಡೆಯ ಸರ್ಪ ಅದನ್ನ ಕಾಯ್ತಿದೆ ಎಂಬ ಅವರ ಈರಪ್ಪನ ಮಾತಿನ ಮೇಲಿನ ಅವರ ಎಳೆಯ ನಂಬಿಕೆ, ಅಂತ್ಯದಲ್ಲಿ ಸಮಯ ಕಳೆದಂತೆ ಬಳ್ಳಾರಿಯಲ್ಲಿನ ಗಣಿಗಾರಿಕೆಗೆ ಹಸಿರುಟ್ಟ ನೆಲವೆಲ್ಲ ಬರಡಾಗಿ ದಾರಿತುಂಬಾ ಧೂಳು ತುಂಬಿ, ಗಿಳಿಯಬಣ್ಣವೂ ಕೆಂಪಾಗಿಯೇ ಬಿಡುವ ಧಾರುಣ ವಾಸ್ತವದ ಕತೆ ನೆನಪಾಗುತ್ತೆ.
ಮಹಾಲಕ್ಷ್ಮೀ. ಕೆ. ಎನ್ ಬರಹ ನಿಮ್ಮ ಓದಿಗೆ

Read More

“ನಾವುಗಳಿಲ್ಲಿ ಪರಸ್ಪರರು”: ಮಹಾಲಕ್ಷ್ಮೀ ಕೆ. ಎನ್. ಬರಹ

ಇಳೆಗೆ ತಂಪು ಬೇಕು ವರುಣನಿಗೆ ಕಾಯ್ತಾಳೆ. ಅವನಿಗೆ ನೆಲೆಬೇಕು ಇವಳನ್ನೇ ಅರಸುತ್ತಾನೆ. “ಇವರಿಬ್ಬರದ್ದೂ ಇಲ್ಲಿ ಪರಸ್ಪರತೆ”. ಇದ್ದಕ್ಕಿದ್ದಂತೆ ಮೋಡ ಹೆಪ್ಪುಗಟ್ಟುತ್ತೆ, ಕಪ್ಪುಗಾಗುತ್ತೆ, ಕತ್ತಲಿನಂತಾಗುತ್ತೆ, ಎಲ್ಲವೂ ನಿಶ್ಶಬ್ಧವಾಗುತ್ತೆ, ಹಕ್ಕಿ ಹಿಂಡು ಗೂಡನ್ನರಸಿ ಚಿಲಿಪಿಲಿಗುಟ್ಟುತ್ತಾ ಬರುತ್ವೆ, ಜೋರುಗಾಳಿ ನಿಲ್ಲುತ್ತೆ, ಎಲ್ಲರೂ- ಎಲ್ಲವೂ ಬಾನಿಗೆ ಮುಖಮಾಡಿ ನೋಡುವಷ್ಟರಲ್ಲಿ ಧೋ…. ಅಂತ ಜಡಿ ಮಳೆ ಬಂದೇಬಿಡುತ್ತೆ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಹೇಗೆ ಮಾತಾಡಲಿ ನಿನ್ನೊಂದಿಗೆ?: ಮಹಾಲಕ್ಷ್ಮೀ ಕೆ. ಎನ್. ಬರಹ

ಮತ್ತೊಂದು ದಿನ ಕಾಲೇಜಿನ ಎದುರಿಗಿರುವ ಜೆರಾಕ್ಸ್ ಅಂಗಡಿ ಮುಂದೆ ಹೋಗ್ತಿದ್ದ. ಅರೇ,… ಅವನೇ ಅಲ್ವಾ… ಹೀಗೆ ಒಂದೆರಡು ಸಲ ಕಾಲೇಜಿನಲ್ಲಿ ನೋಡಿದ್ದೆ. ಒಂದು ಶನಿವಾರ ಕಾಲೇಜಿನಲ್ಲಿ ರೆಫರೆನ್ಸ್ ರೂಂ ಗೆ ಹೋಗಿ ಕೂತೆ. ನಾನು ಯಾರನ್ನೂ ಗಮನಿಸಿರಲಿಲ್ಲ, ಅಲ್ಲಿ ಯಾರೂ ಇರಲಿಲ್ಲ ಕೂಡ, ಸುಮ್ಮನೆ ಪಕ್ಕಕ್ಕೆ ತಿರುಗಿದೆ. ಅರೇ… ಮತ್ತೆ ಅವನೇ ಅಲ್ವಾ… ಇದ್ದವರಿಬ್ಬರಲ್ಲಿ ನಾನು ಮತ್ತೆ ಆ ಕಡೆ ತುದಿಯಲ್ಲಿ ಅವನು. ನ್ಯೂಸ್ ಪೇಪರ್, ವಿದ್ಯಾರ್ಥಿ ಮಿತ್ರ ಓದ್ತಿದ್ದಿರಬಹುದು. ಅವನನ್ನ ಮಾತನಾಡಿಸುವ ಮನಸ್ಸಿದೆ. ಆದರೆ ಹೇಗೆ ಮಾತು ಪ್ರಾರಂಭಿಸಲಿ? ಗೊತ್ತಾಗ್ತಿಲ್ಲ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ