Advertisement

ಉಮಾರಾವ್

`ಅಂತರಿಕ್ಷದಲ್ಲಿ ವಿಹಾ’ ಮಕ್ಕಳ ವೈಜ್ಞಾನಿಕ ಫ್ಯಾಂಟಸಿಯ ಲೋಕ: ಮಂಡಲಗಿರಿ ಪ್ರಸನ್ನ ಬರಹ

ವಿಹಾ ಮತ್ತು ಆಕೆಯ ಗೆಳೆಯ ಚಿಂಟು ಅವರ ಕೆಲ ವೈಜ್ಞಾನಿಕ ಸಂಭಾಷಣೆಗಳು ಆಸಕ್ತಿದಾಯಕ. ನಿದ್ದೆಯಲ್ಲೂ ಅಂತರಿಕ್ಷ, ರಾಕೇಟ್, ಪ್ಯಾರಾಚೂಟ್….. ಎಂದೆಲ್ಲ ಬಡಬಡಿಸುವ ವಿಹಾ, ಸ್ವೀಟೋ ಏಲಿಯನ್ಸ್ ಜೊತೆ ನಡೆಸುವ ಸಂಭಾಷಣೆ ಮಕ್ಕಳ ಯೋಚನಾ ಲಹರಿಯ ವಿಸ್ತಾರಕ್ಕೆ ಇಂಬುಕೊಟ್ಟಂತಿದೆ. ವಿಹಾಳ ಕನಸು, ಸ್ವೀಟೋ ಬಂದ ದಿನ, ಫ್ಲೈಯಿಂಗ್ ಸಾಸರ್‌ನಲ್ಲಿ ಏಲಿಯನ್ಸ್, ಅಂತರಿಕ್ಷದಲ್ಲಿ ವಿಹಾ, ಮೊದಲಾದ ಅಧ್ಯಾಯಗಳಲ್ಲಿ ವಿಹಾಳ ಸಾಹಸ, ಆಕೆಯ ಕಲ್ಪನಾ ಶಕ್ತಿ, ಧೈರ್ಯ, ಹೊಸತನ್ನು ಕಲಿಯಬೇಕು, ಮಾಡಬೇಕೆನ್ನುವ ಹಂಬಲದ ತುಡಿತವಿದೆ.
ವಸು ವತ್ಸಲೆ ಬರೆದ `ಅಂತರಿಕ್ಷಾದಲ್ಲಿ ವಿಹಾʼ ಮಕ್ಕಳ ಕೃತಿಯ ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಮಂಡಲಗಿರಿ ಪ್ರಸನ್ನ ಬರೆದ ಗಜಲ್

“ನನಗೀಗ ಬೇಕಿರುವುದು ಏಕಾಂತ ಎಂದಷ್ಟೇ ಹೇಳಿದೆ
ಆದರೂ ಹಗಲು ರಾತ್ರಿ ನನ್ನೊಳಗೆ ಬೆಂದವು ನೆನಪುಗಳು

ಕಾಲಚಕ್ರದಲಿ ಎಲ್ಲ ಮರೆಯಬಹುದು ಎಂದರು ಯಾರೋ
ಹಳೆ ಆಲದಮರದಂತೆ ಎದೆಯಾಳ ನಿಂದವು ನೆನಪುಗಳು”- ಮಂಡಲಗಿರಿ ಪ್ರಸನ್ನ ಬರೆದ ಗಜಲ್

Read More

`ಚಿಲಿಪಿಲಿ ಕನ್ನಡ ಕಲಿ’: ಮಂಡಲಗಿರಿ ಪ್ರಸನ್ನ ಬರಹ

ಹೊರನಾಡಿನಲ್ಲಿ ನೆಲೆಸಿರುವ ಕನ್ನಡ ಕಂದಮ್ಮಗಳ ಬೆಳವಣಿಗೆಯ ಪರಿಸರ ತೀರ ವಿಭಿನ್ನವಾದದ್ದು. ಅಂತಹ ಮಕ್ಕಳ ಕನ್ನಡ ಕಲಿಕೆಗೆ ಬೇಕಾದ ವಾತಾವರಣ ಸೀಮಿತವಾದದ್ದು. ಇಂತಹ ಮಕ್ಕಳಿಗೆ ಭಾಷೆ ಕಲಿಸಲು ಪದ್ಯಗಳು ಉತ್ತಮ ಮಾಧ್ಯಮ ಎಂದು ನಂಬಿರುವ ಲೇಖಕಿ ಸವಿತಾ ರವಿಶಂಕರ `ಚಿಲಿಪಿಲಿ ಕನ್ನಡ ಕಲಿ’ ಸಂಕಲನದಲ್ಲಿ ಅಂತಹ ಮಕ್ಕಳ ಮನ ತಟ್ಟುವ ರೀತಿಯ ಕನ್ನಡ ಪದ್ಯಗಳನ್ನು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.
ಸವಿತಾ ರವಿಶಂಕರ `ಚಿಲಿಪಿಲಿ ಕನ್ನಡ ಕಲಿ’ ಮಕ್ಕಳ ಪದ್ಯಗಳ ಸಂಕಲನದ ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ತಳಮಳಗಳ `ಮೌನದೊಡಲ ಮಾತು’

ಗಜಲ್ ಮೂಲತಃ ಮನುಷ್ಯ ಸಹಜ ಪ್ರೀತಿ, ಪ್ರೇಮ, ಪ್ರಣಯ, ವಿರಹ, ವೇದನೆ, ಏಕಾಂಗಿತನ, ನೋವು, ಹತಾಶೆ, ವಿಪ್ರಲಂಭನ, ಬೇಗುದಿ, ತಳಮಳಗಳನ್ನು ಅಭಿವ್ಯಕ್ತಿಗೊಳಿಸುವ ಕಾವ್ಯವಾದರೂ, ಅದರಾಚೆಯ ವರ್ತಮಾನದ ಸಂಗತಿಗಳನ್ನೂ ಅದು ಪ್ರತಿಧ್ವನಿಸುತ್ತದೆ. ಇಂತಹ ಹಲವು ದೃಷ್ಟಿಕೋನಗಳನ್ನಿಟ್ಟುಕೊಂಡು ಇಲ್ಲಿ ಕೆಲ ಗಜಲ್‌ಗಳು ಮೈದಾಳಿವೆ. ಅಂಬಮ್ಮ ಅವರ ಗಜಲ್‌ಗಳಲ್ಲಿ ಪ್ರೇಮ ನಿವೇದನೆ ಇದೆ, ನೋವುಂಡ ಹೃದಯಾಂತರಾಳದ ಯಾತನೆ ಇದೆ. ಜೊತೆಗೆ ಕೆಲವೆಡೆ ಚಡಪಡಿಕೆ, ಕಾತರತೆ, ಆರ್ದ್ರತೆ, ಮನದ ತಾಕಲಾಟಗಳ ತಳಮಳವೂ ಇದೆ.
ಅಂಬಮ್ಮ ಪ್ರತಾಪ್‌ ಸಿಂಗ್‌ ಗಜಲ್‌ ಸಂಕಲನ “ಮೌನದೊಡಲ ಮಾತು” ಕುರಿತು ಮಂಡಲಗಿರಿ ಪ್ರಸನ್ನ ಬರಹ

Read More

ಪ್ರೇಮದ ಕುರಿತು ಮಂಡಲಗಿರಿ ಪ್ರಸನ್ನ ಬರೆದ ಗಜಲ್

“ಯಾವ ಸಿರಿಯಿದೆ ನೆಮ್ಮದಿಯಿಲ್ಲದ ಈ ಬದುಕಿನಲಿ
ಕ್ಷಣಕ್ಷಣವು ಸಾಯುವ ಯಾತನೆಗಳ ಕೊಂಡುಕೊಂಡೆ

ಏಕಾಂತವೊಂದೆ ನನಗೀಗ ಆಪ್ತವಾದ ಸಂಗಾತಿ ಸಾಕಿ
ಸುಮ್ಮನಿರದ ಮನಸು ತಳಮಳಗಳ ಕೊಂಡುಕೊಂಡೆ”- ಪ್ರೇಮಿಗಳ ದಿನಕ್ಕೆ ಮಂಡಲಗಿರಿ ಪ್ರಸನ್ನ ಬರೆದ ಗಜಲ್

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ