Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಕಿರಾಣಿ ಅಂಗಡಿ ಮತ್ತು ಅಮ್ಮ ಎಂಬ ಬೆರಗು: ಮಾರುತಿ ಗೋಪಿಕುಂಟೆ ಸರಣಿ

ಬಂದಿದ್ದವರು ಅನುಕೂಲದ ಕುಟುಂಬದವರು. ಮನೆಯ ಗೌರವ ಉಳಿಸುವ ಸಂಕಷ್ಟ ಅಮ್ಮನಿಗೆ. ಇಂತಹ ಸಂದರ್ಭದಲ್ಲಿ ಅಮ್ಮ ಅದ್ಹೇಗೆ ನಿಭಾಯಿಸುತ್ತಿದ್ದಳು ಎಂಬುದು ನನಗೆ ಯಾವಾಗಲೂ ಬೆರಗು. ಇಂದಿಗೂ ಅಮ್ಮ ಅಂದ್ರ ಅದೊಂದು ತಣಿಯಲಾರದ ಆಶ್ಚರ್ಯ. ಅವರು ಆ ದಿನ ಮನೆಯಲ್ಲಿಯೆ ಉಳಿದರು. ಬೆಳಗ್ಗೆ ಅವರಿಗೆ ಅಮ್ಮ ಒಗ್ಗರಣೆಯ ಅನ್ನವನ್ನು ಮಾಡಿದ್ದಳು. ಅವರು ತುಂಬಾ ಚೆನ್ನಾಗಿದೆ ಎಂದು ಉಪಾಹಾರ ಸೇವಿಸಿ ಊರಿಗೆ ಹೊರಟುಹೋದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತೈದನೆಯ ಕಂತು

Read More

ನೆನಪುಗಳ ಬುತ್ತಿ “ನನ್ನ ಮನೆ”: ಮಾರುತಿ ಗೋಪಿಕುಂಟೆ ಸರಣಿ

ಮನೆ ನೆನೆದರೆ ಸಾಕು ಬಾಲ್ಯದ ಸಿಹಿ ಕಹಿ ಘಟನೆಗಳೆಲ್ಲ ನಮ್ಮ ಕಣ್ಣ ಮುಂದೆ ಹಾದುಹೋಗುತ್ತವೆ. ನಮ್ಮದು ಹಳೆಯ ಕಾಲದ ನಮ್ಮ ತಾತ ಕಟ್ಟಿಸಿದ ಜಂತಿಮನೆ ಮೊದಮೊದಲು ಅದು ಸಗಣಿಯಿಂದ ಶೃಂಗಾರವಾಗುತ್ತಿದ್ದದ್ದು ಕ್ರಮೇಣ ಅದಕ್ಕೆ ಗಾರೆ ಹಾಕಲಾಯಿತು. ಮರಳು ಮತ್ತು ಸುಣ್ಣವನ್ನು ಒಟ್ಟಿಗೆ ಅರೆದು ಕಲಸಿ ಅದನ್ನು ಹಾಸುನೆಲಕ್ಕೆ ನುಣುಪಾದ ಕಲ್ಲಿನಿಂದ ಉಜ್ಜಿ ಉಜ್ಜಿ ನೆಲಕ್ಕೆ ಅಂಟುವಂತೆ ಮಾಡುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ನೆನಪುಗಳಲ್ಲಿ ನೆನಪಾಗಿ ಉಳಿದ ನನ್ನಜ್ಜ: ಮಾರುತಿ ಗೋಪಿಕುಂಟೆ ಸರಣಿ

ಒಂದಿಷ್ಟು ಓದು ನನ್ನಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದ್ದವು. ವಿಜ್ಞಾನವೆ ಹೇಳುವಂತೆ ಸಾಮಾನ್ಯವಾಗಿ ವಂಶವಾಹಿನಿಗಳು ಪ್ರತಿ ಮೂರನೆ ತಲೆಮಾರಿಗೆ ವರ್ಗಾವಣೆಯಾಗುತ್ತವೆ ಎಂದು ಶಾಲೆಗಳಲ್ಲಿ ಶಿಕ್ಷಕರು ಹೇಳುವಾಗೆಲ್ಲ ನಮ್ಮಲ್ಲಿ ನನ್ನಜ್ಜನ ರೂಪದ ಹೋಲಿಕೆ ಇರಬಹುದಾ ಎಂದು ಯೋಚಿಸಿದ್ದಿದೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ನಗುತ್ತಲೆ ಬದುಕಿದವಳು ನನ್ನಮ್ಮ: ಮಾರುತಿ ಗೋಪಿಕುಂಟೆ ಸರಣಿ

ನನಗಾಗ ಐದಾರು ವರ್ಷಗಳಿರಬೇಕು. ಪ್ರತಿದಿನ ಅಮ್ಮ ಕೂಲಿ ಹೋಗುತ್ತಿದ್ದಳು. ಅವಳಿಗೆ ಬರುವ ಅಲ್ಪ ಕೂಲಿಯಲ್ಲಿ ಇಡಿ ಬದುಕನ್ನು ನಡೆಸಬೇಕು. ಅದರಲ್ಲಿ ಬೆಳಗಿನ ಚಹಾದಿಂದ ಹಿಡಿದು ರಾತ್ರಿಯ ಊಟದವರೆಗೂ ಕೂಲಿಯ ಹಣದಿಂದಲೆ ಸರಿದೂಗಿಸಬೇಕು. ಅಕ್ಷರ ಜ್ಞಾನವಿಲ್ಲದ ಆಕೆ ಹೇಗೆ ನಿಭಾಯಿಸುತ್ತಿದ್ದಳೊ. ಇಂದಿಗೂ ಅದೊಂದು ಆಶ್ಚರ್ಯದ ಸಂಗತಿ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ದೀಪಾವಳಿ ಹಬ್ಬದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಅಂತೂ ಈಡಿಗೆ ಬೆಂಕಿ ತಾಕಿಸಿ ಅದು ಉರಿಯುವುದರೊಳಗೆ ನನ್ನನ್ನು ಅಲ್ಲಿಂದ ಮನೆಗೆ ಕಳಿಸಿದ್ದರು. ಅದಾದ ಮೇಲೆ ಎಂದೂ ನಾನು ಬಾನ ಹೊತ್ತಿದ್ದು ನೆನಪಿಲ್ಲ. ನನಗೆ ದೇವರನ್ನು ಹೊತ್ಕೋಬೇಕು ಅಂತ ಆಸೆ ಇತ್ತು. ಆದರೆ ನಾವು ದೇವರನ್ನು ತಲೆಮೇಲೆ ಹೊರಬಾರ್ದು ಅನ್ನುತ್ತಿದ್ದರು. ಅದಕ್ಕೆ ಅನೇಕ ನಿಯಮಗಳಿರುತ್ತವೆ ಅನ್ನುತ್ತಿದ್ದರು. ನಾವ್ಯಾಕೆ ಹೊತ್ಕೋಬಾರ್ದು ಎಂಬ ಪ್ರಶ್ನೆ ನನ್ನನ್ನು ಕಾಡುತ್ತಲೆ ಇತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತ್ತೊಂದನೆಯ ಕಂತು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ