Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಮಯೂರ ಬಿ ಮಸೂತಿ ಬರೆದ ಈ ದಿನದ ಕವಿತೆ

“ಆಕಾಶದಲ್ಲಿರುವ
ನಕ್ಷತ್ರಗಳ ಎಣಿಸಲು
ಪ್ರಯತ್ನಿಸುತ್ತಿದ್ದೆ,
ನಕ್ಷತ್ರಗಳು ಮರೆಯಾಗಿ
ಈಗ ಎಣಿಸು ನೋಡೋಣ?
ಎಂದು ಕೆಣಕಿದವು.
ನನ್ನ ತಲೆಯ ಕೂದಲುಗಳನ್ನು
ಎಣಿಸಲು ಶುರುಮಾಡಿದೆ
‘ಅಜ್ಜಿಯ ಕಾಲದ ಹುಡುಗ’ನೆಂದು
ನಕ್ಷತ್ರಗಳು ನಕ್ಕವು..” -ಮಯೂರ ಬಿ ಮಸೂತಿ ಬರೆದ ಈ ದಿನದ ಕವಿತೆ

Read More

ಹೊಟ್ಟೆಬಾಕ ಗಂಡುಮೀನು…: ಮಯೂರ ಬಿ ಮಸೂತಿ ಬರಹ

ಮೀನು ಎಂದಿನಂತೆ ನೂರು ಮೀಟರ್ ರೇಸಿನಲ್ಲಿ ಬಿದ್ದಿತ್ತು. ಹೆಂಡತಿಗೆ ಕರೆದು ತೋರಿಸಿದೆ. ‘ಎಲ್ಲಿ ಸಾಯಲಿಕ್ಕೆ ಬಂದಿದೆಯೆನೋ’ ಎಂದು ಉತ್ತರಿಸಿ ಮನೆಗೆಲಸದಲ್ಲಿ ತೊಡಗಿಸಿಕೊಂಡಳು. ನಮಗೆ ಮೀನನ್ನು ಸಂಭಾಳಿಸುವುದಕ್ಕಿಂತ ಮಕ್ಕಳನ್ನು ನಿಯಂತ್ರಿಸುವುದೇ ಕಷ್ಟಕರವಾಗಿತ್ತು. ಎಲ್ಲಿ ಬೌಲನ್ನು ಬಿಳಿಸುತ್ತಾರೋ…. ಎಂಬ ಭಯ..! ಮಗಳು ಕಿಡ್ಡಿಯಂತೂ “ಹತ್ರ ಹೋಗಬೇಡ ಬಾಂಬಿ ಮೀನು ಕಚ್ಚುತ್ತೆ” ಎಂದು ತನ್ನ ತೊದಲು ನುಡಿಯಲ್ಲಿ ಅಣ್ಣನಿಗೆ ಉಪದೇಶ ನೀಡಿ ತಾನೆ ಬೌಲ್‌ನ ಮುಂದೆ ಮೀನುಗಳು ಭಯ ಬೀಳುವಂತೆ ಹಲ್ಲು ಕಿರಿದುಕೊಂಡು ನಿಲ್ಲುತ್ತಿದ್ದಳು.
ಮಯೂರ ಬಿ ಮಸೂತಿ ಬರಹ ನಿಮ್ಮ ಓದಿಗೆ

Read More

ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ

ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ