ಮೊಗಳ್ಳಿ ಗಣೇಶ್ ಬರೆದ ಈ ಭಾನುವಾರದ ಕತೆ
ಏನೊ ಆತಂಕ. ಒಂಟಿತನ. ಈ ಓದು ಕೂಡ ಉಪಯೋಗ ಇಲ್ಲ. ಬುದ್ದಿಗೆ ಬೆಲೆ ಇಲ್ಲ. ದಡ್ಡರಿಗೇ ಎಲ್ಲೆಡೆ ದೊಡ್ಡ ದೊಡ್ಡ ಪದವಿ. ಮೂರ್ಖರು ಮೂರ್ಖರನ್ನೆ ಬೆಳೆಸುತ್ತಾರೆ. ಈ ಜಾತಿ ಕೂಪದಲ್ಲಿ ನಾನು ಏನೇ ಆಗಿದ್ದರೂ ಅದೇ ಆಗಿರುತ್ತೇನೆ. ಅದಕ್ಕಾಗಿ ಯಾಕೆ ಇಷ್ಟೆಲ್ಲ ಹೋರಾಟ? ವಿದ್ವತ್ತು? ಮನುಷ್ಯತ್ವ… ಕೊನೆಗೂ ನನಗೇನು ಉನ್ನತ ಕೆಲಸ ಸಿಗುವುದಿಲ್ಲವಲ್ಲಾ ಎಂದು ಮಂಕಾಗಿದ್ದೆ. ವಿಶ್ವಾಸ ಕುಗ್ಗುತ್ತಿತ್ತು. ಅವನು ನನ್ನ ಅಪ್ಪ ನಾಲ್ಕನೆ ಬಾರಿಗೆ ಯಾವುದೊ ಒಂದು ಹೆಂಗಸ ಒಪ್ಪಿಸಿ ಕರೆತಂದು ಮನೆಯಲ್ಲಿ ಇಟ್ಟುಕೊಂಡಿದ್ದನಂತೆ.
ಮೊಗಳ್ಳಿ ಗಣೇಶ್ ಬರೆದ ಕಥೆ “ಅವಳು ಚಿಲುಮೆ”