Advertisement
ಲತಾ ಶ್ರೀನಿವಾಸ್

ಲತಾ ಶ್ರೀನಿವಾಸ್‌ ಮೂಲತಃ ತುಮಕೂರಿನವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರಕಲೆ ಹಾಗೂ ಪ್ರವಾಸ ಇವರ ಹವ್ಯಾಸಗಳು. ಮುದ್ದುಮಗಳೇ ಇವರ ಪ್ರಕಟಿತ ಕೃತಿ.

ಚಿತೆಯ ಜೊತೆ ಚಿತೆಯಾಗಿದ್ದೆ

ಆ ಹೆಂಗಸು ನನ್ನತ್ತ ಎರಡು ಮೂರು ಬಾರಿ ನೋಡಿತು. ಅವಳ ಕಣ್ಣಲ್ಲಿದ್ದ ನೀರೆಲ್ಲ ತೀರಿ ಹೋಗಿದ್ದವೇನೊ! ಸ್ಮಶಾನದ ಮೂಲೆಯಲ್ಲಿ ಶವದತ್ತ ನೋಡುತ್ತಲೇ ಕೂತು ಕೂಸಿಗೆ ಎದೆ ಕಚ್ಚಿಸಿದ್ದಳು. ಆ ಕೂಸಿನ ಹೆಜ್ಜೆಗಳಿನ್ನೂ ಮೂಡಿಯೇ ಇಲ್ಲಾ… ಅವನು ನಡೆ ನಡತೆ ನುಡಿಗಳ ಮುಗಿಸಿದ್ದ. ಆ ಹೆಂಗಸಿನ ಹೆಜ್ಜೆಗಳು ಬಾಕಿ ಇದ್ದವು. ಸ್ಮಶಾನ ಬಿಟ್ಟು ಬೇಗ ಮನೆಗೆ ತೆರಳಲು ಮುಂದಾಗಿದ್ದರು. ಸ್ಮಶಾಸನದಲ್ಲಿ ಸಂಸಾರವೇ! ಆಕೆಯೂ ಆ ಜನರ ಜೊತೆ ಎದ್ದು ಹೊರಟಳು ಏನೂ ಆಗಿಯೇ ಇಲ್ಲ ಎಂಬಂತೆ.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 38ನೇ ಕಂತು

Read More

ನಿಶೆಯ ಹೆಬ್ಬಾವಿನ ಬಾಯಲ್ಲಿ ಮಲಗಿದ್ದೆ

“ನನ್ನ ಸ್ವಕಾರಣದಿಂದ ಪಿಎಚ್.ಡಿ ಸಂಶೋಧನೆಗೂ, ಅತಿಥಿ ಉಪನ್ಯಾಸಕ ವೃತ್ತಿಗೂ ರಾಜಿನಾಮೆ ನೀಡುತ್ತಿರುವೆ’ ಎಂದು ಒಂದು ಸಾಲಿನ ರಾಜಿನಾಮೆ ಬರೆದು ಲಕೋಟೆಯಲ್ಲಿಟ್ಟು ಯಾರ್ಯಾರಿಗೆ ಕೊಡಬೇಕೊ ಅವರಿಗೆಲ್ಲ ಕೊಟ್ಟು ಹಾಸ್ಟಲಿಗೆ ಬಂದೆ. ಆ ಕ್ಷಣವೇ ಕ್ಯಾಂಪಸ್ಸನ್ನು ತೊರೆದೆ. ಯಾರಿಗೂ ಹೇಳಲಿಲ್ಲ. ಇಷ್ಟು ಕಾಲ ಪೊರೆದ ಕ್ಯಾಂಪಸ್ಸೇ ನಿನ್ನನ್ನು ಬಿಟ್ಟು ಹೋಗುತ್ತಿರುವೆ. ನಿನ್ನ ಈ ನೆಲದ ಸಾರವನೆಲ್ಲ ತಾಯ ಎದೆ ಹಾಲ ಕುಡಿದಂತೆ ಹೀರಿ ಅರಗಿಸಿಕೊಂಡಿರುವೆ. ಹೋಗುವೆ ನನ್ನ ಮುದ್ದಿನ ನವಿಲುದಾರಿಗಳೇ ಎಂದು ಕತ್ತಲಲ್ಲಿ ಬಂದಿದ್ದೆ”
ʻನನ್ನ ಅನಂತ ಅಸ್ಪೃಶ್ಯ ಆಕಾಶʼ ಮೊಗಳ್ಳಿ ಗಣೇಶ್‌  ಆತ್ಮಕತೆಯ  ಮೂವತ್ತೇಳನೆಯ ಕಂತು. 

Read More

ನಡೆ ಎಲ್ಲೆಂದರಲ್ಲಿಗೆ ನಡೆ

ಹಳ್ಳಿಗೆ ಹೋಗಿ ಹೀಗಾಯಿತು ಎಂದು ಹೇಳಿದರೆ ನನ್ನ ಕನಸು ನನ್ನ ದುಃಖ ಅವರಿಗೆ ಅರ್ಥವಾಗುತ್ತಿರಲಿಲ್ಲ. ಯಾರಿಗೂ ಹೇಳಿಕೊಳ್ಳಲು ಆಗುತ್ತಿರಲಿಲ್ಲ. ಹೇಳಿಕೊಂಡರೆ ನಗುತ್ತಿದ್ದರು. ಜುಜುಬಿ ಫೋಕ್‌ಲೋರ್ ಓದ್ಬುಟ್ಟು ಇಷ್ಟೆಲ್ಲಾ ಬಿಲ್ಡಪ್ ಕೊಡ್ತಿಯಲ್ಲಾ. ನಿನ್ನ ರೇಂಜ್ ಏನಿದೆಯೊ ಅದ್ನೇ ಮೆಯಿಂಟೇನ್ ಮಾಡು ಎಂದಿದ್ದರು ಗೆಳೆಯರು. ನಿಜವಿತ್ತು. ನಾನೇನು ಮಹಾ ತಿಳಿದವನಾಗಿರಲಿಲ್ಲ. ಅವೆಲ್ಲ ಈ ವ್ಯವಸ್ಥೆಯ ಬಲೆಯಿಂದ ತಪ್ಪಿಸಿಕೊಂಡು ಕಣ್ಮರೆಯಾಗಿ ಎಲ್ಲೊ ಹೋಗಿ ಅನಾಥನೇ ಆಗಿ ಬದುಕಲು ಹೂಡುತ್ತಿದ್ದ ವಿಕಟ ವಿನೋದ ದುರಂತ ನಾಟಕ. ಕೆ.ಆರ್.ಮಾರ್ಕೆಟಲ್ಲಿ ಹೋಗಿ ಮೂಟೆ ಹೊತ್ತು ಸಂಸಾರ ನಡೆಸಲು ಇಲ್ಲಿ ತನಕ ಹೋರಾಡಿ ಬರಬೇಕಿತ್ತೇ…
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 36ನೇ ಕಂತು

Read More

ಅಸಂಗತವಾಗಿ ಸಂಗಾತಿ ಆಗಿದ್ದೆ

ನಿಜ; ತಾತನನ್ನು ಹೊರಗೆ ಮಲಗಿಸಿದ್ದರು. ಬಸಿದು ಹೋಗಿದ್ದ. ಮಾತು ಸರಿಯಾಗಿ ಹೊರಡುತ್ತಿರಲಿಲ್ಲ. ಹೋದ ಕೂಡಲೆ ವ್ಯಗ್ರ ನಾಯಿಗಳಂತೆ ನನ್ನ ಮೇಲೆ ಆ ಬಂಧು ಬಳಗ ಬೊಗಳಿತು. ಕೇರು ಮಾಡಲಿಲ್ಲ. ಅವನು ದರಿದ್ರ ನನ್ನಪ್ಪ ಹೆಣದಂತೆ ಅರೆ ಬೆತ್ತಲೆಯಾಗಿ ಬೀದಿಯ ಲೈಟು ಕಂಬಕ್ಕೆ ಒರಗಿಕೊಂಡು ಅಮಲಾಗಿ ಯಾರ ಮೇಲೊ ಬೈಯ್ಯುತ್ತಿದ್ದ. ನನ್ನ ಕಂಡ ಕೂಡಲೇ… ‘ವರದಕ್ಷಿಣೆಯಾ ಯೆಸ್ಟು ತಕಂದಿದ್ದಾನಂತೆ ಕೇಳೀ… ಆ ದುಡ್ಡು ನನುಗೆ ಸೇರಬೇಕೂ’ ಎಂದು ಕುಯ್‌ಗರೆಯುತ್ತಿದ್ದ. ಇವನು ಇಂಗೇ ಭಿಕ್ಷೆ ಬೇಡಿಕೊಂಡೇ ಸಾಯುತ್ತಾನೆ ಎನಿಸಿತು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 35ನೇ ಕಂತು

Read More

ನನ್ನ ತಾಯಿಬೇರೇ ನನ್ನ ಕಥೆ

ಕಣ್ಣೀರ ಕಣ್ಣರೆಪ್ಪೆಗಳು ತಡೆಯದಾದವು. ತುಳುಕಿದವು. ಹೇಳಿದೆ. ‘ನಾನಲ್ಲ ಕಥೆ ಬರೆದದ್ದು. ಕಥೆಯ ನನ್ನ ತಾಯಿ ಹೇಳಿ ಬರೆಸಿದಳು. ನನ್ನ ತಾಯಿ ಈಗ ನನ್ನ ನೆತ್ತರಲ್ಲಿ ಮಾತ್ರ ಬದುಕಿ ಉಳಿದಿದ್ದಾಳೆ. ಅವಳ ಆತ್ಮ ನನ್ನ ಎದೆಗೂಡ ದೇಗುಲದಲ್ಲಿ ನನ್ನ ಚೈತನ್ಯವಾಗಿದೆ… ಅವಳ ಮೌನ ನನ್ನ ಭಾಷೆಯಾಗಿದೆ. ಅವಳ ಕಿಚ್ಚು ನನ್ನ ಬರೆಹದ ಬೆಳಕಾಗಿದೆ… ನಾನು ನೆಪದ ಕಥೆಗಾರ ಅಷ್ಟೇ… ಅವಳೇ ನನ್ನ ಬರೆಹದ ಬೇರು ಕಾಂಡ ರೆಂಬೆ ಕೊಂಬೆ ಚಿಗುರು ಎಲ್ಲ… ಎಲ್ಲ ಅವಳೇ… ನನ್ನದೇನಿದ್ದರೂ ಅವಳ ಕಥೆಯ ನೆರಳು ಅಷ್ಟೇ’ ಎಂದೆ.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 34ನೇ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ