Advertisement

ಸುವರ್ಣ ಚೆಳ್ಳೂರು

ದಂಡ ಮೊಂಡರಿಂದ ದೇವರಿಗೆ ದಂಡವೆ

ತಾತ ಎಂದೆ, ಭಂಗವಾದಂತೆ ಎದ್ದುನಿಂತ. ಅವನ ಪರಮಾಪ್ತ ಪ್ರಿಯ ತಿನಿಸು ಎಂದರೆ ಎಲೆ ಅಡಿಕೆ ಹೊಗೆಸೊಪ್ಪು. ಊರವರು ತಾವಾಗಿಯೆ ಅವನಿಗೆ ನೀಡುತ್ತಿದ್ದರು. ಯಾರನ್ನೂ ಕೇಳುತ್ತಿರಲಿಲ್ಲ. ಹಾಗೆ ಕೊಡುವುದು ಗೌರವ ಸೂಚಕವಾಗಿತ್ತು. ಅವನ ಬಳಿ ಬಿಡಿಗಾಸು ಕೂಡ ಇರಲಿಲ್ಲ. ಬರಿಗಾಲ ನಡಿಗೆಯವನು ಅವನು. ಒಮ್ಮೆಯೂ ವಾಹನ ಏರಿ ಕೂತಿದ್ದವನಲ್ಲ. ಹಣದ ಬಗ್ಗೆ ಅಸಹ್ಯ. ಅದನ್ನು ಮುಟ್ಟುತ್ತಿರಲಿಲ್ಲ. ದೊಡ್ಡ ತಾತ ದುಡ್ಡು ಕೊಡಲು ಮುಂದಾದಾಗಲೆಲ್ಲ ವಿಷಾದ ಪಡುತ್ತಿದ್ದ. ನಿರಾಕರಿಸಿದ್ದ.
‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯಲ್ಲಿ ಮೊಗಳ್ಳಿ ಗಣೇಶ್‍ ಬರಹ.

Read More

ಎಂಡದ ಗಡಿಗೆ ಹೊತ್ತ ಸರಸಿಯರು

ಪೆಂಟೆಯ ಸರಸಿಯರು ನನ್ನ ತಾಯಿಯ ಬಗ್ಗೆ ವಿಪರೀತ ಕುತೂಹಲ ತೋರುತ್ತಿದ್ದರು. ‘ಒಮ್ಮೆ ಕರೆದುಕೊಂಡು ಬಾ’ ಎನ್ನುತ್ತಿದ್ದರು.  ಆಕೆ ಹೊಸಿಲು ದಾಟಿ ಬರುವಂತಿರಲಿಲ್ಲ. ತಾಯಿಗೆ ಮನೆಯೇ ಸೆರೆಯಾಗಿತ್ತು. ಹಾಗೆ ಹೊರಗೆ ತಾಯಿ ಹೋಗುವಂತಿದ್ದರೆ ಅಪ್ಪ ತಲೆಕಡಿಯುತ್ತಿದ್ದನೇನೊ. ನನಗೆ ಆ ಹೆಂಗಸರ ಬಗ್ಗೆ ಕೆಡುಕಿರಲಿಲ್ಲ. ಹೊಳೆಯಲ್ಲಿ ಅವರು ಈಜಾಡುತ್ತಿದ್ದರು. ಈಜು ಕಲಿಸಲು ನೀರಿಗಿಳಿಸಿ ಕೈಕಾಲು ಬಡಿಸುತ್ತಿದ್ದರು. ಗತಕಾಲದ ನನ್ನ ಹಳೆಯ ಚಡ್ಡಿ ನಿಲ್ಲುತ್ತಿರಲಿಲ್ಲ. ಅದನ್ನತ್ತ ಬಿಚ್ಚಿ ದಂಡೆಗೆ ಎಸೆಯುತ್ತಿದ್ದರು. ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ, ‘ನನ್ನ ಅನಂತ ನೀಲಿ ಆಕಾಶ’ ಸರಣಿಯ ಹೊಸ ಬರಹ 

Read More

ಪಾತಕಿಯ ಆರ್ತ ಕರೆಯಲ್ಲಿ ಕರುಣೆಯೇ

ಅಪ್ಪನ ನಡವಳಿಕೆ ನಿಗೂಢವಾಗಿತ್ತು. ಎಲ್ಲೂ ಹೋಗ ಕೂಡದು ಎಂದು ಅವ ಕಟ್ಟಪ್ಪಣೆ ವಿಧಿಸಿದ್ದ. ದುಷ್ಟನ ಸಹವಾಸ ಬೇಡ ಎಂದು ಅಪ್ಪ ನಿರ್ಧರಿಸಿರಬಹುದೇ ಎಂದು ಯೋಚಿಸಿದೆ. ಅನುಮಾನವಾಯಿತು. ಅಪ್ಪ ನನ್ನನ್ನು ಕತ್ತಲೆ ಮನೆಯೊಳಗೆ ಕೂಡಿ ಹಾಕಿದ್ದ. ಪಾತಕಿಯ ಬಗ್ಗೆ ಹತ್ತಾರು ಪ್ರಶ್ನೆ ಕೇಳಿದ್ದ. ಅಪ್ಪ ಕೇಳುತ್ತಿದ್ದ ದಾಟಿಗೆ ಹೆದರಿ ಏನೇನೊ ಹೇಳಿದ್ದೆ. ತಾತನ ಹೋಟೆಲಲ್ಲಿ ಜನ ಗಿಜಿಗುಟ್ಟುತ್ತಿದ್ದ ಸದ್ದು ಕೇಳಿಸುತ್ತಿತ್ತು. ತಾತನಿಗೆ ಮೊದಲು ಈ ಸುದ್ದಿ ತಿಳಿಸಬೇಕಿತ್ತು ಎಂದುಕೊಂಡೆ. ಕೈ ಮೀರಿತ್ತು. ಕತೆಗಾರ ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಬರಹ

Read More

ನೆರಳ ಅಲೆಗಳಲ್ಲಿ ಇರುಳ ಕಳೆದೆ

ಒಂದು ಕಾಲಕ್ಕೆ ಅಜ್ಜಿ ಮನೆಗೆ ಹೋಗುವುದೆಂದರೆ ಸ್ವರ್ಗ ಸಿಕ್ಕಂತಾಗುತ್ತಿತ್ತು. ಅಪ್ಪನ ಪರಾಕ್ರಮ ಒಂದೆರಡಲ್ಲ! ಆಗ ಕಾಲು ನಡಿಗೆಯ ದಾರಿ. ಅದೇ ಸುಖ. ತೋಟ ತುಡಿಕೆಯ ಹಣ್ಣು ಹಂಪಲು ತಿಂದು ಹೊಳೆ ದಂಡೆಯಲ್ಲಿ ಸಾಗುವಾಗ ದಣಿವೇ ಇರಲಿಲ್ಲ. ಆ ಹೆಗಲಿನ ರೇಡಿಯೊ ಏನೇನೊ ಹಾಡಿ ಮಾತಾಡುತಿತ್ತು. ಅದರತ್ತ ನನಗೆ ಗಮನವಿರಲಿಲ್ಲ. ಅಪ್ಪನಿಗೆ ಅದೊಂದು ದೊಡ್ಡಸ್ತಿಕೆಯ ತೋರಿಕೆ. ಅಲ್ಲಲ್ಲಿ ಸಿಗುತ್ತಿದ್ದ ಊರುಗಳಲ್ಲಿ ಜನ ನಮ್ಮನ್ನು ಬೆರಗಾಗಿ ನೋಡುತ್ತಿದ್ದರು. ಆ ಕಾಲಕ್ಕೆ ರೇಡಿಯೊ ಶ್ರೀಮಂತಿಕೆಯ ಸಂಕೇತವಾಗಿತ್ತು.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ನಾಲ್ಕನೆಯ ಕಂತು

Read More

ಮುಸುಕಿನ ಮರೆಯ ಪಾಡು

ನಾವು ಹುಟ್ಟಿ ಬೆಳೆದಿದ್ದ ಊರಲ್ಲಿ ಚಿಕ್ಕಪ್ಪ ಎಂಬುವವನೊಬ್ಬ ಇದ್ದ. ರಭಸವಾದ ಕುಡುಕ. ಎಣ್ಣೆ ಕೊಡಿಸಿದರೆ ಎಲ್ಲಾ ನ್ಯಾಯವನ್ನು ತಲೆಕೆಳಗೆ ಮಾಡುತ್ತಿದ್ದ. ಆ ಮನೆಯಲ್ಲಿ ನನ್ನ ತಮ್ಮನಿಗೂ ನನಗೂ ಭಾಗ ಬರಬೇಕಿತ್ತು. ನಾನದರತ್ತ ತಿರುಗಿಯೂ ನೋಡಿರಲಿಲ್ಲ. ತಮ್ಮ ಬೆಂಗಳೂರು ಸೇರಿ ಅಲ್ಲೇ ಸಂಸಾರ ಹೂಡಿ ಒಂದು ಪುಟ್ಟ ಮನೆಯನ್ನು ಮಾಡಿಕೊಂಡಿದ್ದ. ಅವನಿಗೂ ಅಂತಹ ಆಸಕ್ತಿ ಇರಲಿಲ್ಲ. ಆದರೆ ನನ್ನಕ್ಕ ಬಿಟ್ಟಿರಲಿಲ್ಲ. ನಾವು ಭಾಗ ಕೊಡುವುದಿಲ್ಲ ಎಂದು ಅವನ ಮಗ ಹಾಗೂ ಹೆಂಡತಿ ಎಗರಾಡುತ್ತಿದ್ದರು.
ಮೊಗಳ್ಳಿ ಗಣೇಶ್‌ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಮೂರನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ