ಮಳೆ, ಮಂಜು ಮತ್ತು ಚಾರಣ: ಮುನವ್ವರ್, ಜೋಗಿಬೆಟ್ಟು ಬರಹ
ಒಂದು ಶಾಂತ ಬಯಲಿನಲ್ಲಿ ಮರಗಳ ನೆರಳಲ್ಲಿ ಪ್ರತಿಷ್ಠಾಪಿಸಿದಂತಿದ್ದ ಆ ಪ್ರದೇಶ ಸೂಫಿ ಅನುಭಾವಕ್ಕೆ ನಮ್ಮನ್ನು ಬರಮಾಡಿಕೊಳ್ಳತೊಡಗಿತು. ಅದು ಹಾಸನದ ಮುಸ್ಲಿಮರ ಪಾಲಿಗೆ ವಿಶೇಷ ಸ್ಥಳ. ಅದೇ ಊರಿನವರಾಗಿದ್ದ ಹಝ್ರತ್ ಖಲಂದರ್ ಶಾ ವಲಿಯುಲ್ಲಾಹಿರವರು ಆಧ್ಯಾತ್ಮಿಕವಾಗಿ ಒಂದು ತಲೆಮಾರನ್ನೇ ಮುನ್ನಡೆಸಿದವರು. ಸೂಫಿ ನೆರಳಿನಂತೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸಲಹೆ ಸೂಚನೆಗಳನ್ನು ಕೊಟ್ಟು ಅವರಿಗೆ ಮನಶ್ಶಾಂತಿಯನ್ನು ಕರುಣಿಸುತ್ತಿದ್ದವರು. ಅವರ ಶಾಂತ ಚಿತ್ತ ಮಾತುಗಳನ್ನು ಆಲಿಸಲು ಅವರ ಹರಸುವಿಕೆಯ ಅನುಗ್ರಹವನ್ನು ಸ್ವೀಕರಿಸಲು ದೇಶದ ನಾನಾ ಭಾಗಗಳಿಂದ ಜನರು ಬರುವುದುಂಟು. ನಾವು ಬಾಬರು ಕುಳಿತುಕೊಳ್ಳುತ್ತಿದ್ದ ಸ್ಥಳವನ್ನೂ ಅವರ ಬಳಸುತ್ತಿದ್ದ ಅನುಗ್ರಹೀತ ವಸ್ತುಗಳನ್ನು ನೋಡಿ ಕಣ್ತುಂಬಿಕೊಂಡು- ಅಲ್ಲಿ ಯಾತ್ರಾರ್ಥಿಗಳಿಗಾಗಿ ನೀಡುವ ಚಹಾವನ್ನು ಸವಿದೆವು.
ಮುನವ್ವರ್, ಜೋಗಿಬೆಟ್ಟು ಬರೆದ ಪ್ರವಾಸ ಕಥನ ನಿಮ್ಮ ಓದಿಗೆ