Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಮಳೆ, ಮಂಜು ಮತ್ತು ಚಾರಣ: ಮುನವ್ವರ್, ಜೋಗಿಬೆಟ್ಟು ಬರಹ

ಒಂದು ಶಾಂತ ಬಯಲಿನಲ್ಲಿ ಮರಗಳ ನೆರಳಲ್ಲಿ ಪ್ರತಿಷ್ಠಾಪಿಸಿದಂತಿದ್ದ ಆ ಪ್ರದೇಶ ಸೂಫಿ ಅನುಭಾವಕ್ಕೆ ನಮ್ಮನ್ನು ಬರಮಾಡಿಕೊಳ್ಳತೊಡಗಿತು. ಅದು ಹಾಸನದ ಮುಸ್ಲಿಮರ ಪಾಲಿಗೆ ವಿಶೇಷ ಸ್ಥಳ. ಅದೇ‌ ಊರಿನವರಾಗಿದ್ದ ಹಝ್ರತ್ ಖಲಂದರ್ ಶಾ ವಲಿಯುಲ್ಲಾಹಿರವರು ಆಧ್ಯಾತ್ಮಿಕವಾಗಿ ಒಂದು ತಲೆಮಾರನ್ನೇ ಮುನ್ನಡೆಸಿದವರು. ಸೂಫಿ ನೆರಳಿನಂತೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸಲಹೆ ಸೂಚನೆಗಳನ್ನು ಕೊಟ್ಟು ಅವರಿಗೆ ಮನಶ್ಶಾಂತಿಯನ್ನು ಕರುಣಿಸುತ್ತಿದ್ದವರು. ಅವರ ಶಾಂತ ಚಿತ್ತ ಮಾತುಗಳನ್ನು ಆಲಿಸಲು ಅವರ ಹರಸುವಿಕೆಯ ಅನುಗ್ರಹವನ್ನು ಸ್ವೀಕರಿಸಲು ದೇಶದ ನಾನಾ ಭಾಗಗಳಿಂದ ಜನರು ಬರುವುದುಂಟು. ನಾವು ಬಾಬರು ಕುಳಿತುಕೊಳ್ಳುತ್ತಿದ್ದ ಸ್ಥಳವನ್ನೂ ಅವರ ಬಳಸುತ್ತಿದ್ದ ಅನುಗ್ರಹೀತ ವಸ್ತುಗಳನ್ನು ನೋಡಿ‌ ಕಣ್ತುಂಬಿಕೊಂಡು- ಅಲ್ಲಿ ಯಾತ್ರಾರ್ಥಿಗಳಿಗಾಗಿ ನೀಡುವ ಚಹಾವನ್ನು ಸವಿದೆವು.
ಮುನವ್ವರ್, ಜೋಗಿಬೆಟ್ಟು ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಮುನವ್ವರ್‌ ಜೋಗಿಬೆಟ್ಟು ಬರೆದ ಈ ಭಾನುವಾರದ ಕಥೆ

ಬಟ್ಟೆ ತೊಳೆಯಲು ಹೋಗಿದ್ದ ಉಮ್ಮ ಬಂದು ಹಿತ್ತಲಿಗೆ ತಲುಪಿದ್ದಳು. ಹೊರಳಾಡುತ್ತಿರುವ ಝುಮೈರ್‌ನನ್ನು ಸಮಾಧಾನ ಮಾಡುವ ಶತ ಪ್ರಯತ್ನ ಮಾಡ ತೊಡಗಿದಳು. ವಿಶಣ್ಣನಾಗಿ ಅಬ್ಬ ಮಗನ ರೋಧನೆಯನ್ನು ನೋಡುತ್ತಾ ಕುಳಿತಿದ್ದ. ಹೇಗೋ ಸಮಧಾನಿಸಿ ಮನೆಯೊಳಗೆ ಕರೆದುಕೊಂಡು ಹೋದಳು ಉಮ್ಮ. ಮಗ ಎಷ್ಟೇ ಸಮಾಧಾನ ಮಾಡಿದರೂ ಅವನ ದುಃಖ ಇಳಿಯುವುದಿಲ್ಲವೆಂದು ಉಮ್ಮನಿಗೆ ಖಾತ್ರಿಯಾಯಿತು. ರಾತ್ರಿ ಊಟ ಮಾಡದೆ ಮಲಗಿದ್ದ ಮಗನ ಬಳಿಗೆ ಬಂದವಳು “ಐವತ್ತು ರೂಪಾಯಿ ನಾನು ಕೊಡ್ತೇನೆ.
ಮುನವ್ವರ್‌ ಜೋಗಿಬೆಟ್ಟು ಬರೆದ ಕಥೆ “ಶಾಲಾ ಮಕ್ಕಳ ಪ್ರವಾಸಕ್ಕೆ ಜಯವಾಗಲಿ” ನಿಮ್ಮ ಓದಿಗೆ

Read More

ನೇತ್ರಾವತಿಯಲ್ಲಿ ಹರಿದು ಹೋದ ನೀರೆಷ್ಟೋ…

ಏನೇನೋ ಚಿಂತಿಸುತ್ತ ಇದಿನಬ್ಬ ಕುಳಿತಿದ್ದಾನೆ; ಅಷ್ಟರಲ್ಲೇ ದೂರದಲ್ಲಿ ಒಂದು ಸಣ್ಣ ತಂಡ ನಡೆದು ಬರುತ್ತಿದೆ. ಇದಿನಬ್ಬನಿಗೆ ಮತ್ತೆ ಬದುಕುವ ಆಸೆ ಚಿಗುರಿತು, ಅಪರಿಚಿತರಾದರೇನು? ಮನುಷ್ಯರನ್ನು ಕಂಡೆನಲ್ಲಾ ಅನ್ನುವ ಖುಷಿ. ಹತ್ತಿರವಾದಂತೆ ಮುಖ ಚಹರೆ ಸ್ಪಷ್ಟವಾಗತೊಡಗಿತು. ಹೌದು, ಯೂಸುಫ್ ಮತ್ತು ಇತರ ಸಹ ಯಾತ್ರಿಕರು. ದೂರದಲ್ಲಿ ಬಂದವರಿಗೂ ಪರಿಚಯ ಸಿಕ್ಕಿರಬೇಕು. ಎಲ್ಲರೂ ಇದಿನಬ್ಬರ ಕಡೆಗೆ ಓಡಿ ಬಂದರು.  ಉಳಿದವರು ಎಲ್ಲಿ ಹೋದರೋ ಗೊತ್ತಾಗಲಿಲ್ಲ.”

Read More

ಮನೆ ತಲುಪುವ ಕನಸುಗಳ ಕಿತ್ತುಕೊಂಡ ಬಿರುಗಾಳಿ

ಡರ್ಬನ್ ನಿಂದ ಹೊರಟ ಆ ಹಡಗು, ನೋಡ ನೋಡುತ್ತಿದ್ದಂತೆ ಲಟ್ಟಣಿಗೆ ಮುರಿದು ಹಾಕುವಂತೆ ಅಷ್ಟು ದೊಡ್ಡ ಹಡಗು ಇಬ್ಭಾಗವಾಯಿತು. ಬೃಹತ್ ಗಾತ್ರದ ಅಲೆಯೊಂದು ಎದ್ದು ನೀರಿಗೆ ಧುಮುಕಿದ ಹಲವರನ್ನೂ ಎತ್ತಿ ದೂರ ದೂರಕ್ಕೆ ಎಸೆಯಿತು. ಬಹುಶಃ ದೂರವೆಂದರೆ ಮುಳುಗುತ್ತಿರುವ ಹಡಗಿನ ದೀಪ ಮಂಜಾಗಿ ಕಾಣಿಸುವಷ್ಟು. ದೂರದಲ್ಲಿ ಹಡಗಿನ ದೀಪ ಗಿರ ಗಿರನೆ ಸುತ್ತುವುದು ನೋಡಿದಾಗ ಇದಿನಬ್ಬನಿಗೆ ಪರಿಸ್ಥಿತಿಯ ಅರಿವಾಯಿತು. ಹಿಂದಿರುಗಿ ನೋಡಿದರೆ ಅಷ್ಟು ದೊಡ್ಡ ಹಡಗನ್ನು ಹೊಟ್ಟೆ ಬಾಕ ಸಮುದ್ರ ತಿಂದು ಮುಗಿಸಿದೆ. ಕನಸುಗಳು ನುಚ್ಚು ನೂರಾಗಿವೆ. -ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹನ್ನೊಂದನೇ ಕಂತು

Read More

ಚಿನ್ನದ ಗಣಿಯಲ್ಲಿ ಭಯಾನಕ ದಿನಗಳು

ಹತ್ತುವರ್ಷಗಳ ಕಾಲ ಕೆಲಸ ಮಾಡುವ ಕರಾರು ಮುಕ್ತಾಯವಾಗುತ್ತಲೇ ಗಣಿಯಿಂದ ಒಬ್ಬೊಬ್ಬರೇ ಹೊರಡತೊಡಗಿದರು. ಇದಿನಬ್ಬ ಕೂಡ, ಸಂಬಳ ಕೊಡುವ ಕಂಪೆನಿಯ ಮ್ಯಾನೇಜರ್ ಬಳಿ ಬಂದು ವಿನಮ್ರನಾಗಿ ನಿಂತು,’ಸರ್, ನಾನು ಊರಿಗೆ ಹೋಗುತ್ತೇನೆ’ ಎಂದ. ಹೋಗಬಹುದು ಎಂದು ಮ್ಯಾನೇಜರ್ ಒಪ್ಪಿದ. ನನ್ನ ಸಂಬಳ ಕೊಟ್ಟುಬಿಡಿ ಎಂದು ಮನವಿ ಮಾಡಿದಾಗ, ಅಧಿಕಾರಿ ಅಚ್ಚರಿಯಿಂದ, ‘ಯಾವ ಸಂಬಳ ? ಅದನ್ನು ಸಿಲೋನಿನಲ್ಲೇ ಕೊಟ್ಟಾಗಿದೆಯಲ್ಲಾ..’ ಎಂದು ಹೇಳಿದ. ಈ ಮಾತು ಕೇಳಿದ ಇದಿನಬ್ಬ ಕುಸಿದು ಕುಳಿತುಬಿಟ್ಟ. ಮುನವ್ವರ್ ಜೋಗಿಬೆಟ್ಟು ಬರೆಯುವ ಡರ್ಬನ್ ಇದಿನಬ್ಬ ಕಿರುಕಾದಂಬರಿಯ ಹತ್ತನೇ ಕಂತು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ