Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಮುನವ್ವರ್ ಜೋಗಿಬೆಟ್ಟು ಬರೆದ ಸಣ್ಣ ಕತೆ “ಎರಡನೇ ತಿರುವು”

“ಏನೋ ತೀರ್ಮಾನಿಸಿದವಳಂತೆ, ಮೆಟ್ಟಿಲಿಳಿದು ರಸ್ತೆಗೆ ಬಂದಳು. ನಿಡು ದೂರದಲ್ಲಿ ಕುತೂಹಲ ಹುಟ್ಟಿಸುವ ಆ ಎರಡನೇ ಅಡ್ಡ ರಸ್ತೆ. ಒಮ್ಮೆ ಉರಿದು ಮತ್ತೆ ನಂದುತ್ತಿರುವ ದಾರಿದೀಪ. ಸಾಲದ್ದಕ್ಕೆ ಲೈಟು ಕಂಬದಿಂದ “ಟ್ರೀ” ಎಂಬ ಶಾರ್ಟ್ ಸರ್ಕ್ಯೂಟಿನ ಸದ್ದು. ಬೆಳಕು ನಂದಿ ಹೊತ್ತುವಷ್ಟರಲ್ಲೇ ಕತ್ತಲ ಮಧ್ಯೆ ರಪ್ಪನೆ ಯಾರೋ ನುಗ್ಗಿದಂತಾಗಿ ಇವಳೆದೆಯ ತುಂಬಾ ಹಾಲಿನವನ ಪ್ರೇತ. ಮತ್ತೆ ಮತ್ತೆ ನಡೆದಳು.”

Read More

ಜೇಡ ಕಡಿಸಿಕೊಂಡವ ನೀನು, ಸ್ಪೈಡರ್ ಮ್ಯಾನ್ ಆಗ್ತೀಯ! : ಮುನವ್ವರ್ ಜೋಗಿಬೆಟ್ಟು ಅಂಕಣ

“ನಮ್ಮ ಹೆಂಚಿನ ಮನೆಯಲ್ಲಿ ಜೇಡರ ಬಲೆ ತೆಗೆಯುವುದೇ ಕಡು ಕಷ್ಟದ ಕೆಲಸ. ತೆಗೆದ ಒಂದೇ ವಾರಕ್ಕೆ ಇಲ್ಲಿ ಒಕ್ಕಲೇ ಇಲ್ಲ ಎನ್ನುವಷ್ಟು ಜೇಡರಬಲೆ ತುಂಬಿ ಬಿಡುತ್ತಿದ್ದವು. ಆಗೆಲ್ಲಾ ಒಂದು ಮಾತಿತ್ತು. “ಗಂಡಸರು ಜೇಡರ ಬಲೆ ತೆಗೆದರೆ ಜೇಡ ಬಲೆ ಕಟ್ಟುವುದು ನಿಲ್ಲಿಸುವುದಂತೆ” ಅಂತ. ಆದರೆ ಇದೆಷ್ಟು ಸುಳ್ಳು ಅಂದರೆ ನಾನು ಬಲೆ ತೆಗೆದ ಮೂರನೇ ದಿನಕ್ಕೆ ಮತ್ತೆ ಜೇಡಗಳು ಬಲೆ ಕಟ್ಟಲು ತೊಡಗುತ್ತಿದ್ದವು….”

Read More

ಜೋಗಿಬೆಟ್ಟುವಿನಲ್ಲಿ ಚಿರತೆ: ಮುನವ್ವರ್ ಜೋಗಿಬೆಟ್ಟು ಅಂಕಣ

“ಒಮ್ಮೆ ನಮ್ಮಜ್ಜಿ ಮನೆಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನವೊಂದು ಕಳವಾಯಿತಂತೆ. ಎಲ್ಲಿ ಹುಡುಕಿದರೂ ಪತ್ತೆ ಇಲ್ಲ. ಮುತ್ತಜ್ಜಿಯ ಧ್ವನಿ ಗುರುತಿಸಿ ಬರುತ್ತಿದ್ದ ದನ ಎಷ್ಟು ಕರೆದರೂ ಬಾರಲೇ ಇಲ್ಲವಂತೆ. ಕೊನೆಗೆ ಆಗ ಸಣ್ಣವರಿದ್ದ ನನ್ನಜ್ಜಿಯನ್ನು ಕೈಲಿ ಹಿಡಿದುಕೊಂಡು ಮುತ್ತಜ್ಜಿ ಹುಡುಕಲೆಂದು ಹೊರಟರಂತೆ. ಅದು ಸಂಜೆಯ ಹೊತ್ತು, ಮುತ್ತಜ್ಜಿ ಮೊದಲಡಿ ಬಳಿಗೆ “ದಾ ದಾ” ಎಂದು ಕರೆಯಬೇಕಾದರೆ..”

Read More

ಕಪ್ಪೆ-ಮೀನುಗಳೂ ಮತ್ತು ತುಂಟ ಹುಡುಗರು: ಮುನವ್ವರ್ ಜೋಗಿಬೆಟ್ಟು ಅಂಕಣ

“ಅಬ್ಬನ ಬ್ಯಾಟರಿ ಟಾರ್ಚು ತೆಗೆದು ಬಾಗಿಲ ಸಂದಿಗೆ ಬಿಟ್ಟೆ. ಬೆಳಕು ಬಿದ್ದೊಡನೆ ಕಂದು ಬಣ್ಣದ ಹಾವೊಂದು ಬೆಳಕಿನೆಡೆಗೆ ದುತ್ತನೆ ಹಾರಿ ಬಿತ್ತು. ಗಾಬರಿಯಿಂದ ಉಮ್ಮನನ್ನು ಕರೆದೆ. ಅಡುಗೆ ಮಾಡುತ್ತಿದ್ದ ಉಮ್ಮ ಓಡೋಡಿ ಬಂದವರೇ, ಹಾವನ್ನು ನೋಡುತ್ತಾ “ಓಹ್ ಬಾರಿ ಸಣ್ಣದು, ಕನ್ನಡಿ ಹಾವು. ನಿನ್ನ ಹಾಳಾಗಿ ಹೋದ ಕಪ್ಪೆಯ ಮೇಲಿನ ಕನಿಕರದಿಂದಲೇ ಅದು ಇಲ್ಲೇ ಬೇಟೆಗೆ ಬಂದು ಕುಳಿತಿದೆ…”

Read More

ದಾರಿ ಮರೆತ ಇರುವೆಗಳು: ಮುನವ್ವರ್ ಜೋಗಿಬೆಟ್ಟು ಅಂಕಣ

“ಪೇರಳೆಯ ಹುಚ್ಚಿಗೆ ನಾವು ಅನೇಕ ಬಾರಿ ಚಿಗಳಿ ಇರುವೆಗಳಿಂದ ಕಚ್ಚಿಸಿಕೊಂಡದ್ದಿದೆ. ಅದರ ಕಡಿತದ ವಿಪರೀತ ಉರಿಯನ್ನು ಸಹಿಸಿಕೊಳ್ಳುವುದೇ ಅಧ್ವಾನ. ಒಮ್ಮೆ ಮನೆಯ ಹಿತ್ತಲಲ್ಲಿದ್ದ ಪೇರಳೆ ಮರಕ್ಕೆ ಹತ್ತಿದವನು ಹಣ್ಣಾದ ಪೇರಳೆ ಕಂಡು ಬಾಗಿದ್ದ ರೆಂಬೆಯೊಂದರ ಮೇಲೆ ಹೋಗಿದ್ದೆ. ಇನ್ನೇನು ಹಣ್ಣೆಟಕುತ್ತದೆ ಎನ್ನುವಷ್ಟರಲ್ಲಿ ತಲೆಯ ಸ್ವಲ್ಪವೇ ಮೇಲಿದ್ದ ಚಿಗುಳಿ ಇರುವೆಗಳ ಗೂಡಿಗೆ ಕೈ ತಾಗಿತು.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ