ಕರ್ಮನಿಷ್ಟೆಯಲ್ಲಿ ಜಯಕಂಡವನ ಕಥನ: ನಾರಾಯಣ ಯಾಜಿ ಬರಹ
ಮೊದಲು ಪ್ರಥಮ ಪುರುಷದಲ್ಲಿ ಪ್ರಾರಂಭಮಾಡಿದ ಹೆಗಡೆಯವರು ಇದ್ದಕ್ಕಿದ್ದಂತೆ ಅದನ್ನು ತೃತೀಯ ಪುರುಷದಲ್ಲಿ ಬರೆಯಲು ಪ್ರಾರಂಭಿಸುವುದು ಕುತೂಹಲಕಾರಿ. ಶೀರ್ಷಿಕೆಯಲ್ಲಿ ಹೇಳಿರುವಂತೆ ಇದು ಜಯರಾಮ ಹೆಗಡೆಯ ಜೀವನಕಥನ ಎನ್ನುವಾಗ ತನ್ನನ್ನು ತಾನು ಹೊರಗಡೆ ನಿಂತು ‘ಜಯರಾಮ’ ಎನ್ನುವ ಮೂಲಕ ಕಥನವನ್ನು ಹೇಳುವಾಗ ಮನಸ್ಸಿನ ಅನೇಕ ವಿಷಯಗಳನ್ನು ತೆರೆದಿಡಬಹುದು ಎನ್ನುವುದು ಅವರ ಅನಿಸಿಕೆಯಾಗಿರಬಹುದು. ಅದೂ ಅಲ್ಲದೇ ಲೇಖನನ್ನೂ ಸಹ ವಿಮರ್ಶೆಗೊಳಿಸಲು ಈ ರೀತಿಯ ಬರಹದಿಂದ ಸಾಧ್ಯ.
ಜಯರಾಮ ಹೆಗಡೆ ಜೀವನ ಕಥನ ‘ಬೀದಿಯ ಬದುಕು’ ಕೃತಿಯ ಕುರಿತು ನಾರಾಯಣ ಯಾಜಿ ಬರಹ ನಿಮ್ಮ ಓದಿಗೆ
